AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಪರೀಕ್ಷೆಗೆ ಅಮೆರಿಕಾಗೆ ತೆರಳಲಿದ್ದಾರೆ ರಜನಿಕಾಂತ್; ಸೂಪರ್ ಸ್ಟಾರ್ ಪ್ರಯಾಣಕ್ಕೆ ವಿಶೇಷ ವಿಮಾನ ವ್ಯವಸ್ಥೆ?

2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಜನಿಕಾಂತ್ ಸ್ಪರ್ಧಿಸುವವರಿದ್ದರು. ಆದರೆ, ಪಕ್ಷ ಸ್ಥಾಪನೆಗೂ ಮೊದಲು ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ರಾಜಕೀಯದಿಂದ ಅವರು ಹಿಂದೆ ಸರಿದಿದ್ದರು.

ವೈದ್ಯಕೀಯ ಪರೀಕ್ಷೆಗೆ ಅಮೆರಿಕಾಗೆ ತೆರಳಲಿದ್ದಾರೆ ರಜನಿಕಾಂತ್; ಸೂಪರ್ ಸ್ಟಾರ್ ಪ್ರಯಾಣಕ್ಕೆ ವಿಶೇಷ ವಿಮಾನ ವ್ಯವಸ್ಥೆ?
ರಜನಿಕಾಂತ್
TV9 Web
| Updated By: ganapathi bhat|

Updated on: Jun 14, 2021 | 4:46 PM

Share

ಚೆನ್ನೈ: ಭಾರತೀಯ ಚಿತ್ರರಂಗದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ವೈದ್ಯಕೀಯ ಪರೀಕ್ಷೆಗಾಗಿ ಯುಎಸ್​ಗೆ ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅದಕ್ಕಾಗಿ ಕೇಂದ್ರ ಸರ್ಕಾರದ ಬಳಿ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಕೋರಿದ್ದಾರೆ. ಕೊರೊನಾ ನಡುವೆ ವಿದೇಶ ಪ್ರಯಾಣ ನಡೆಸಲು ಸರ್ಕಾರದ ಬಳಿ ಅವಕಾಶ ಕೇಳಿಕೊಂಡಿದ್ದಾರೆ. ಇತ್ತೀಚೆಗಿನ ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರವು ರಜನಿಕಾಂತ್ ಅಮೆರಿಕಾಕ್ಕೆ ತೆರಳಲು ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಜೂನ್ 20 ರಂದು ರಜನಿಕಾಂತ್ ವಿಶೇಷ ವಿಮಾನದಲ್ಲಿ ಅಮೆರಿಕಾಗೆ ತೆರಳಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಜನಿಕಾಂತ್ ಕೊರೊನಾ ಕಾರಣದಿಂದ ಅಮೆರಿಕಾಗೆ ತೆರಳಿರಲಿಲ್ಲ. ಇದೀಗ, ಯುಎಸ್​ಗೆ ಹೋಗಲು ನಟ ರಜನಿಕಾಂತ್ ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿಶೇಷ ವಿಮಾನದಲ್ಲಿ 14 ಮಂದಿ ಪ್ರಯಾಣಿಸುವ ಅವಕಾಶ ಇರಲಿದೆ. ವಿಮಾನದಲ್ಲಿ ರಜನಿಕಾಂತ್ ಜೊತೆ, ಕೆಲ ಕುಟುಂಬದ ಸದಸ್ಯರು ಕೂಡ ವಿದೇಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಯಲಾಗಿದೆ. ರಜನಿಕಾಂತ್ ಅಳಿಯ, ಖ್ಯಾತ ನಟ ಧನುಷ್ ತನ್ನ ಮಡದಿ ಹಾಗೂ ಮಗನೊಂದಿಗೆ ಈಗಾಗಲೇ ಅಮೆರಿಕಾದಲ್ಲಿ ಇದ್ದಾರೆ. ಧನುಷ್ ತಮ್ಮ ಹಾಲಿವುಡ್ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ರಜನಿಕಾಂತ್​ಗೆ ಅಮೆರಿಕಾದಲ್ಲಿ ಮಗಳ ಆರೈಕೆಯೂ ಸಿಗಲಿದೆ.

ಈ ಮೊದಲು, ಅಣ್ಣಾಥೆ ಸಿನಿಮಾದ ಚಿತ್ರೀಕರಣಕ್ಕಾಗಿ ರಜನಿಕಾಂತ್ ಹೈದರಾಬಾದ್‌ಗೆ ತೆರಳಿದ್ದರು. ಕಳೆದ ಡಿಸೆಂಬರ್‌ನಲ್ಲಿ ಅಣ್ಣಾಥೆ ಶೂಟಿಂಗ್ ಶುರುವಾಗಿತ್ತು. ಕೆಲವೇ ದಿನಗಳಲ್ಲಿ ತಂಡದ ಕೆಲ ಮಂದಿಗೆ ಕೊರೊನಾ ಪಾಸಿಟಿವ್‌ ಆಗಿತ್ತು. ಆದ್ದರಿಂದ ಶೂಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಏಪ್ರಿಲ್ನಲ್ಲಿ ಚಿತ್ರೀಕರಣ ಮತ್ತೆ ಆರಂಭವಾಗಿತ್ತು. ನಿರಂತರವಾಗಿ ಅವರು ಸಿನಿಮಾ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು.

ಅಣ್ಣಾಥೆ ಸಿನಿಮಾಗೆ ವಿಶ್ವಾಸಮ್​ ಖ್ಯಾತಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಜನಿಕಾಂತ್ ಸ್ಪರ್ಧಿಸುವವರಿದ್ದರು. ಆದರೆ, ಪಕ್ಷ ಸ್ಥಾಪನೆಗೂ ಮೊದಲು ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ರಾಜಕೀಯದಿಂದ ಅವರು ಹಿಂದೆ ಸರಿದಿದ್ದರು.

ಇದನ್ನೂ ಓದಿ: Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ