AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್​

ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಅಪಾರ ದೈವ ಭಕ್ತರು. ಅಧ್ಯಾತ್ಮದಲ್ಲಿ ಅವರು ಅಪಾರ ಆಸಕ್ತಿ ಹೊಂದಿದ್ದಾರೆ. ಈ ಮೊದಲು ಕೂಡ ಅವರು ಹಿಮಾಲಯಕ್ಕೆ ತೆರಳಿದ್ದರು. ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು, ಅಧ್ಯಾತ್ಮದ ಕಡೆಗೆ ಗಮನ ನೀಡಲು ಅವರು ಹೊರಟಿದ್ದಾರೆ. ಅಲ್ಲಿಂದ ವಾಪಸ್​ ಬಂದ ಬಳಿಕ ‘ಕೂಲಿ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ.

ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್​
ರಜನಿಕಾಂತ್​
ಮದನ್​ ಕುಮಾರ್​
|

Updated on: May 30, 2024 | 9:39 PM

Share

ನಟ ರಜನಿಕಾಂತ್ (Rajinikant) ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. 73ನೇ ವಯಸ್ಸಿನಲ್ಲಿಯೂ ಅವರು ಆ್ಯಕ್ಷನ್​ ಸಿನಿಮಾಗಳನ್ನು ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈಗ ಅವರು ‘ಕೂಲಿ’ ಸಿನಿಮಾದ ಶೂಟಿಂಗ್​ ಆರಂಭಿಸಬೇಕಿದೆ. ಅದಕ್ಕೂ ಮುನ್ನ ಅಧ್ಯಾತ್ಮದ ಅನುಭವ ಪಡೆಯಲು ಅವರು ಕೆಲವು ಸ್ಥಳಗಳಿಗೆ ತೆರಳಲಿದ್ದಾರೆ. ಈಗಾಗಲೇ ಕೇದರನಾಥಕ್ಕೆ ಹೋಗಿರುವ ಅವರು ಹಿಮಾಲಯಕ್ಕೂ (Himalaya) ಭೇಟಿ ನೀಡಲಿದ್ದಾರೆ. ಅಲ್ಲಿನ ಗುಹೆಗಳಲ್ಲಿ ಅಧ್ಯಾತ್ಮದ ಹೊಸ ಅನುಭವ ಪಡೆಯಲಿದ್ದಾರೆ. ಅಲ್ಲಿಂದ ವಾಪಸ್​ ಬಂದ ನಂತರ ‘ಕೂಲಿ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.

ಈ ಬಾರಿಯ ತಮ್ಮ ಅಧ್ಯಾತ್ಮದ ಪಯಣವನ್ನು ಆರಂಭಿಸಲು ರಜನಿಕಾಂತ್​ ಅವರು ಗುರುವಾರ (ಮೇ 30) ಮುಂಜಾನೆಯೇ ಚೆನ್ನೈನಿಂದ ಡೆಹರಾಡೂನ್​ ತಲುಪಿದ್ದಾರೆ. ಡೆಹರಾಡೂನ್​ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಪ್ರತಿ ವರ್ಷ ನಾನು ಹೊಸ ಅನುಭವ ಪಡೆಯುತ್ತೇನೆ. ಅದರಿಂದ ನನ್ನ ಅಧ್ಯಾತ್ಮದ ಪಯಣ ಮುಂದುವರಿಯುತ್ತದೆ. ಈ ಬಾರಿ ಕೂಡ ನನಗೆ ಹೊಸ ಅನುಭವ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದು ರಜನಿಕಾಂತ್​ ಹೇಳಿದ್ದಾರೆ.

‘ಇಡೀ ಜಗತ್ತಿಗೆ ಅಧ್ಯಾತ್ಮ ಬೇಕು. ಪ್ರತಿಯೊಬ್ಬ ಮನುಷ್ಯರಿಗೂ ಅದು ಮುಖ್ಯ. ಆಧ್ಯಾತ್ಮಿಕವಾಗಿ ಇರುವುದು ಎಂದರೆ ಶಾಂತಿ, ನೆಮ್ಮದಿಯಿಂದ ಇರುವುದು ಮತ್ತು ದೇವರಲ್ಲಿ ನಂಬಿಕೆ ಇಡುವುದು’ ಎಂದಿದ್ದಾರೆ ರಜನಿಕಾಂತ್​. ಬದ್ರಿನಾಥ್​, ಕೇದಾರನಾಥ್​ ಮುಂತಾದ ಸ್ಥಳಗಳಿಗೆ ತೆರಳುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮೊದಲು ಸಹ ಅವರ ಹಿಮಾಲಯಕ್ಕೆ ತೆರಳಿದ್ದರು.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ರಜನಿಕಾಂತ್​ ಅವರು ‘ವೆಟ್ಟೈಯನ್​’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ನಟಿಸಿದ್ದಾರೆ. ಆ ಸಿನಿಮಾ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇದೆ. 2023ರಲ್ಲಿ ರಜನಿಕಾಂತ್​ ಅವರು ‘ಜೈಲರ್​’ ಸಿನಿಮಾದ ಮೂಲಕ ಸೂಪರ್ ಸಕ್ಸಸ್​ ಕಂಡರು. ಆ ಚಿತ್ರದ ಗೆಲುವಿನ ಬಳಿಕ ರಜನಿಕಾಂತ್​ ಅವರ ಚಾರ್ಮ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK