AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್​

ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಅಪಾರ ದೈವ ಭಕ್ತರು. ಅಧ್ಯಾತ್ಮದಲ್ಲಿ ಅವರು ಅಪಾರ ಆಸಕ್ತಿ ಹೊಂದಿದ್ದಾರೆ. ಈ ಮೊದಲು ಕೂಡ ಅವರು ಹಿಮಾಲಯಕ್ಕೆ ತೆರಳಿದ್ದರು. ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು, ಅಧ್ಯಾತ್ಮದ ಕಡೆಗೆ ಗಮನ ನೀಡಲು ಅವರು ಹೊರಟಿದ್ದಾರೆ. ಅಲ್ಲಿಂದ ವಾಪಸ್​ ಬಂದ ಬಳಿಕ ‘ಕೂಲಿ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ.

ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್​
ರಜನಿಕಾಂತ್​
ಮದನ್​ ಕುಮಾರ್​
|

Updated on: May 30, 2024 | 9:39 PM

Share

ನಟ ರಜನಿಕಾಂತ್ (Rajinikant) ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. 73ನೇ ವಯಸ್ಸಿನಲ್ಲಿಯೂ ಅವರು ಆ್ಯಕ್ಷನ್​ ಸಿನಿಮಾಗಳನ್ನು ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈಗ ಅವರು ‘ಕೂಲಿ’ ಸಿನಿಮಾದ ಶೂಟಿಂಗ್​ ಆರಂಭಿಸಬೇಕಿದೆ. ಅದಕ್ಕೂ ಮುನ್ನ ಅಧ್ಯಾತ್ಮದ ಅನುಭವ ಪಡೆಯಲು ಅವರು ಕೆಲವು ಸ್ಥಳಗಳಿಗೆ ತೆರಳಲಿದ್ದಾರೆ. ಈಗಾಗಲೇ ಕೇದರನಾಥಕ್ಕೆ ಹೋಗಿರುವ ಅವರು ಹಿಮಾಲಯಕ್ಕೂ (Himalaya) ಭೇಟಿ ನೀಡಲಿದ್ದಾರೆ. ಅಲ್ಲಿನ ಗುಹೆಗಳಲ್ಲಿ ಅಧ್ಯಾತ್ಮದ ಹೊಸ ಅನುಭವ ಪಡೆಯಲಿದ್ದಾರೆ. ಅಲ್ಲಿಂದ ವಾಪಸ್​ ಬಂದ ನಂತರ ‘ಕೂಲಿ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.

ಈ ಬಾರಿಯ ತಮ್ಮ ಅಧ್ಯಾತ್ಮದ ಪಯಣವನ್ನು ಆರಂಭಿಸಲು ರಜನಿಕಾಂತ್​ ಅವರು ಗುರುವಾರ (ಮೇ 30) ಮುಂಜಾನೆಯೇ ಚೆನ್ನೈನಿಂದ ಡೆಹರಾಡೂನ್​ ತಲುಪಿದ್ದಾರೆ. ಡೆಹರಾಡೂನ್​ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಪ್ರತಿ ವರ್ಷ ನಾನು ಹೊಸ ಅನುಭವ ಪಡೆಯುತ್ತೇನೆ. ಅದರಿಂದ ನನ್ನ ಅಧ್ಯಾತ್ಮದ ಪಯಣ ಮುಂದುವರಿಯುತ್ತದೆ. ಈ ಬಾರಿ ಕೂಡ ನನಗೆ ಹೊಸ ಅನುಭವ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದು ರಜನಿಕಾಂತ್​ ಹೇಳಿದ್ದಾರೆ.

‘ಇಡೀ ಜಗತ್ತಿಗೆ ಅಧ್ಯಾತ್ಮ ಬೇಕು. ಪ್ರತಿಯೊಬ್ಬ ಮನುಷ್ಯರಿಗೂ ಅದು ಮುಖ್ಯ. ಆಧ್ಯಾತ್ಮಿಕವಾಗಿ ಇರುವುದು ಎಂದರೆ ಶಾಂತಿ, ನೆಮ್ಮದಿಯಿಂದ ಇರುವುದು ಮತ್ತು ದೇವರಲ್ಲಿ ನಂಬಿಕೆ ಇಡುವುದು’ ಎಂದಿದ್ದಾರೆ ರಜನಿಕಾಂತ್​. ಬದ್ರಿನಾಥ್​, ಕೇದಾರನಾಥ್​ ಮುಂತಾದ ಸ್ಥಳಗಳಿಗೆ ತೆರಳುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮೊದಲು ಸಹ ಅವರ ಹಿಮಾಲಯಕ್ಕೆ ತೆರಳಿದ್ದರು.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ರಜನಿಕಾಂತ್​ ಅವರು ‘ವೆಟ್ಟೈಯನ್​’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ನಟಿಸಿದ್ದಾರೆ. ಆ ಸಿನಿಮಾ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇದೆ. 2023ರಲ್ಲಿ ರಜನಿಕಾಂತ್​ ಅವರು ‘ಜೈಲರ್​’ ಸಿನಿಮಾದ ಮೂಲಕ ಸೂಪರ್ ಸಕ್ಸಸ್​ ಕಂಡರು. ಆ ಚಿತ್ರದ ಗೆಲುವಿನ ಬಳಿಕ ರಜನಿಕಾಂತ್​ ಅವರ ಚಾರ್ಮ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್