AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?

ರಜನಿಕಾಂತ್​ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಆಗುತ್ತಾರೆ ಎಂದು ಒಂದು ದಿನ ಮೊದಲೇ ಸುದ್ದಿ ಹೊರಬಿದ್ದಿತ್ತು. ಇಬ್ಬರೂ ಜೊತೆಯಾಗಿ ‘ಜೈಲರ್​’ ಸಿನಿಮಾ ವೀಕ್ಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಭೇಟಿಯ ಸಂದರ್ಭದಲ್ಲಿ ರಜನಿಕಾಂತ್​ ಅವರು ಈ ರೀತಿ ಕಾಲಿಗೆ ನಮಸ್ಕರಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?
ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​
ಮದನ್​ ಕುಮಾರ್​
|

Updated on: Aug 20, 2023 | 7:20 AM

Share

ನಟ ರಜನಿಕಾಂತ್ (Rajinikanth) ಅವರು ‘ಜೈಲರ್​’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಅದರ ಜೊತೆಗೆ ಒಂದು ವಿವಾದ ಕೂಡ ಹುಟ್ಟಿಕೊಂಡಿದೆ. ಶನಿವಾರ (ಆಗಸ್ಟ್​ 19) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​ ಅವರನ್ನು ರಜನಿಕಾಂತ್​ ಭೇಟಿ ಆಗಿದ್ದಾರೆ. ಈ ವೇಳೆ ಅವರು ನಡೆದುಕೊಂಡ ರೀತಿಯ ಬಗ್ಗೆ ಚರ್ಚೆ ಶುರುವಾಗಿದೆ. ಯೋಗಿ ಆದಿತ್ಯನಾಥ್​ ಅವರ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ್ದಾರೆ. ಇದು ಒಂದು ವರ್ಗದ ಜನರಿಗೆ ಸರಿ ಎನಿಸಿಲ್ಲ. ಹಾಗಾಗಿ ರಜನಿಕಾಂತ್​ ಅವರ ನಡೆಯನ್ನು ಅನೇಕರು ಖಂಡಿಸುತ್ತಿದ್ದಾರೆ. ಇಬ್ಬರ ನಡುವೆ ವಯಸ್ಸಿನ ಅಂತ ತುಂಬ ದೊಡ್ಡದಿದೆ. ಯೋಗಿ ಆದಿತ್ಯನಾಥ್​ ಅವರಿಗಿಂತ ರಜನಿಕಾಂತ್​ ಅವರು 21 ವರ್ಷ ಹಿರಿಯರು. ಹಾಗಾಗಿ ಕಿರಿಯ ವ್ಯಕ್ತಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಕೆಲವರು ವಿರೋಧಿಸುತ್ತಿದ್ದಾರೆ.

ರಜನಿಕಾಂತ್​ ಅವರಿಗೆ ಈಗ 72 ವರ್ಷ ವಯಸ್ಸು. ಆದರೆ ಯೋಗಿ ಆದಿತ್ಯನಾಥ್ ಅವರ ವಯಸ್ಸು ಈಗಿನ್ನೂ 51 ವರ್ಷ. ರಜನಿಕಾಂತ್​ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುತ್ತಾರೆ ಎಂದು ಒಂದು ದಿನ ಮೊದಲೇ ಸುದ್ದಿ ಹೊರಬಿದ್ದಿತ್ತು. ಇಬ್ಬರೂ ಜೊತೆಯಾಗಿ ‘ಜೈಲರ್​’ ಸಿನಿಮಾ ವೀಕ್ಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಭೇಟಿಯ ಸಂದರ್ಭದಲ್ಲಿ ರಜನಿಕಾಂತ್​ ಅವರು ಈ ರೀತಿ ಕಾಲಿಗೆ ನಮಸ್ಕರಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಹಾಗಾಗಿ ಈ ಘಟನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಚಂದ್ರಮುಖಿ 2’ ಫಸ್ಟ್​ ಲುಕ್ ಬಿಡುಗಡೆ ಮಾಡಿದ ರಜನಿಕಾಂತ್​; ಗಣೇಶ ಚತುರ್ಥಿಗೆ ಬರಲಿದೆ ಬಹುನಿರೀಕ್ಷಿತ ಸಿನಿಮಾ

ರಜನಿಕಾಂತ್​ ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ತಮ್ಮ ನೆಚ್ಚಿನ ಹೀರೋ ಹೀಗೆ ನಡೆದುಕೊಂಡಿರುವುದು ಕೆಲವರಿಗೆ ಇಷ್ಟ ಆಗಿಲ್ಲ. ಸಿನಿಮಾದ ಕಾರಣಕ್ಕಾಗಿ ರಜನಿಕಾಂತ್​ ಅವರನ್ನು ಇಷ್ಟಪಡುವ ದೊಡ್ಡ ವರ್ಗವಿದೆ. ಆದರೆ ಆ ಪೈಕಿ ಅನೇಕರಿಗೆ ಯೋಗಿ ಆದಿತ್ಯನಾಥ್​ ಅವರ ರಾಜಕೀಯದ ನಿಲುವುಗಳು ಸೂಕ್ತ ಎನಿಸದೇ ಇರಬಹುದು. ಈ ಎಲ್ಲ ಕಾರಣಗಳಿಂದಾಗಿ ಯೋಗಿ ಆದಿತ್ಯನಾಥ್​ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ್ದನ್ನು ಒಂದಷ್ಟು ಮಂದಿ ಖಂಡಿಸುತ್ತಿದ್ದಾರೆ. ಈ ಘಟನೆ ಬಗ್ಗೆ ರಜನಿಕಾಂತ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಯೋಗಿ ಆದಿತ್ಯನಾಥ್​ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ ವಿಡಿಯೋ:

‘ಜೈಲರ್​’ ಬಿಡುಗಡೆಗೂ ಮುನ್ನವೇ ರಜನಿಕಾಂತ್​ ಅವರು ಪ್ರವಾಸಕ್ಕೆ ತೆರಳಿದರು. ಹಿಮಾಲಯದಲ್ಲಿ ತಮ್ಮ ಅಧ್ಯಾತ್ಮದ ಗುರುಗಳನ್ನು ಅವರು ಭೇಟಿ ಮಾಡಿದ್ದಾರೆ. ಅಲ್ಲದೇ ಒಂದಷ್ಟು ದೇವಾಲಯಗಳಿಗೂ ತೆರಳಿ ದರ್ಶನ ಪಡೆದಿದ್ದಾರೆ. ಅಲ್ಲಿಂದ ಹಿಂದಿರುಗುವಾಗ ಉತ್ತರ ಪ್ರದೇಶಕ್ಕೆ ತೆರಳಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗಿವೆ. ಈ ಭೇಟಿಯ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!