AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?

ರಜನಿಕಾಂತ್​ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಆಗುತ್ತಾರೆ ಎಂದು ಒಂದು ದಿನ ಮೊದಲೇ ಸುದ್ದಿ ಹೊರಬಿದ್ದಿತ್ತು. ಇಬ್ಬರೂ ಜೊತೆಯಾಗಿ ‘ಜೈಲರ್​’ ಸಿನಿಮಾ ವೀಕ್ಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಭೇಟಿಯ ಸಂದರ್ಭದಲ್ಲಿ ರಜನಿಕಾಂತ್​ ಅವರು ಈ ರೀತಿ ಕಾಲಿಗೆ ನಮಸ್ಕರಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?
ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​
ಮದನ್​ ಕುಮಾರ್​
|

Updated on: Aug 20, 2023 | 7:20 AM

Share

ನಟ ರಜನಿಕಾಂತ್ (Rajinikanth) ಅವರು ‘ಜೈಲರ್​’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಅದರ ಜೊತೆಗೆ ಒಂದು ವಿವಾದ ಕೂಡ ಹುಟ್ಟಿಕೊಂಡಿದೆ. ಶನಿವಾರ (ಆಗಸ್ಟ್​ 19) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​ ಅವರನ್ನು ರಜನಿಕಾಂತ್​ ಭೇಟಿ ಆಗಿದ್ದಾರೆ. ಈ ವೇಳೆ ಅವರು ನಡೆದುಕೊಂಡ ರೀತಿಯ ಬಗ್ಗೆ ಚರ್ಚೆ ಶುರುವಾಗಿದೆ. ಯೋಗಿ ಆದಿತ್ಯನಾಥ್​ ಅವರ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ್ದಾರೆ. ಇದು ಒಂದು ವರ್ಗದ ಜನರಿಗೆ ಸರಿ ಎನಿಸಿಲ್ಲ. ಹಾಗಾಗಿ ರಜನಿಕಾಂತ್​ ಅವರ ನಡೆಯನ್ನು ಅನೇಕರು ಖಂಡಿಸುತ್ತಿದ್ದಾರೆ. ಇಬ್ಬರ ನಡುವೆ ವಯಸ್ಸಿನ ಅಂತ ತುಂಬ ದೊಡ್ಡದಿದೆ. ಯೋಗಿ ಆದಿತ್ಯನಾಥ್​ ಅವರಿಗಿಂತ ರಜನಿಕಾಂತ್​ ಅವರು 21 ವರ್ಷ ಹಿರಿಯರು. ಹಾಗಾಗಿ ಕಿರಿಯ ವ್ಯಕ್ತಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಕೆಲವರು ವಿರೋಧಿಸುತ್ತಿದ್ದಾರೆ.

ರಜನಿಕಾಂತ್​ ಅವರಿಗೆ ಈಗ 72 ವರ್ಷ ವಯಸ್ಸು. ಆದರೆ ಯೋಗಿ ಆದಿತ್ಯನಾಥ್ ಅವರ ವಯಸ್ಸು ಈಗಿನ್ನೂ 51 ವರ್ಷ. ರಜನಿಕಾಂತ್​ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುತ್ತಾರೆ ಎಂದು ಒಂದು ದಿನ ಮೊದಲೇ ಸುದ್ದಿ ಹೊರಬಿದ್ದಿತ್ತು. ಇಬ್ಬರೂ ಜೊತೆಯಾಗಿ ‘ಜೈಲರ್​’ ಸಿನಿಮಾ ವೀಕ್ಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಭೇಟಿಯ ಸಂದರ್ಭದಲ್ಲಿ ರಜನಿಕಾಂತ್​ ಅವರು ಈ ರೀತಿ ಕಾಲಿಗೆ ನಮಸ್ಕರಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಹಾಗಾಗಿ ಈ ಘಟನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಚಂದ್ರಮುಖಿ 2’ ಫಸ್ಟ್​ ಲುಕ್ ಬಿಡುಗಡೆ ಮಾಡಿದ ರಜನಿಕಾಂತ್​; ಗಣೇಶ ಚತುರ್ಥಿಗೆ ಬರಲಿದೆ ಬಹುನಿರೀಕ್ಷಿತ ಸಿನಿಮಾ

ರಜನಿಕಾಂತ್​ ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ತಮ್ಮ ನೆಚ್ಚಿನ ಹೀರೋ ಹೀಗೆ ನಡೆದುಕೊಂಡಿರುವುದು ಕೆಲವರಿಗೆ ಇಷ್ಟ ಆಗಿಲ್ಲ. ಸಿನಿಮಾದ ಕಾರಣಕ್ಕಾಗಿ ರಜನಿಕಾಂತ್​ ಅವರನ್ನು ಇಷ್ಟಪಡುವ ದೊಡ್ಡ ವರ್ಗವಿದೆ. ಆದರೆ ಆ ಪೈಕಿ ಅನೇಕರಿಗೆ ಯೋಗಿ ಆದಿತ್ಯನಾಥ್​ ಅವರ ರಾಜಕೀಯದ ನಿಲುವುಗಳು ಸೂಕ್ತ ಎನಿಸದೇ ಇರಬಹುದು. ಈ ಎಲ್ಲ ಕಾರಣಗಳಿಂದಾಗಿ ಯೋಗಿ ಆದಿತ್ಯನಾಥ್​ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ್ದನ್ನು ಒಂದಷ್ಟು ಮಂದಿ ಖಂಡಿಸುತ್ತಿದ್ದಾರೆ. ಈ ಘಟನೆ ಬಗ್ಗೆ ರಜನಿಕಾಂತ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಯೋಗಿ ಆದಿತ್ಯನಾಥ್​ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ ವಿಡಿಯೋ:

‘ಜೈಲರ್​’ ಬಿಡುಗಡೆಗೂ ಮುನ್ನವೇ ರಜನಿಕಾಂತ್​ ಅವರು ಪ್ರವಾಸಕ್ಕೆ ತೆರಳಿದರು. ಹಿಮಾಲಯದಲ್ಲಿ ತಮ್ಮ ಅಧ್ಯಾತ್ಮದ ಗುರುಗಳನ್ನು ಅವರು ಭೇಟಿ ಮಾಡಿದ್ದಾರೆ. ಅಲ್ಲದೇ ಒಂದಷ್ಟು ದೇವಾಲಯಗಳಿಗೂ ತೆರಳಿ ದರ್ಶನ ಪಡೆದಿದ್ದಾರೆ. ಅಲ್ಲಿಂದ ಹಿಂದಿರುಗುವಾಗ ಉತ್ತರ ಪ್ರದೇಶಕ್ಕೆ ತೆರಳಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗಿವೆ. ಈ ಭೇಟಿಯ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ