ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?

ರಜನಿಕಾಂತ್​ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಆಗುತ್ತಾರೆ ಎಂದು ಒಂದು ದಿನ ಮೊದಲೇ ಸುದ್ದಿ ಹೊರಬಿದ್ದಿತ್ತು. ಇಬ್ಬರೂ ಜೊತೆಯಾಗಿ ‘ಜೈಲರ್​’ ಸಿನಿಮಾ ವೀಕ್ಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಭೇಟಿಯ ಸಂದರ್ಭದಲ್ಲಿ ರಜನಿಕಾಂತ್​ ಅವರು ಈ ರೀತಿ ಕಾಲಿಗೆ ನಮಸ್ಕರಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?
ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​
Follow us
|

Updated on: Aug 20, 2023 | 7:20 AM

ನಟ ರಜನಿಕಾಂತ್ (Rajinikanth) ಅವರು ‘ಜೈಲರ್​’ ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಅದರ ಜೊತೆಗೆ ಒಂದು ವಿವಾದ ಕೂಡ ಹುಟ್ಟಿಕೊಂಡಿದೆ. ಶನಿವಾರ (ಆಗಸ್ಟ್​ 19) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​ ಅವರನ್ನು ರಜನಿಕಾಂತ್​ ಭೇಟಿ ಆಗಿದ್ದಾರೆ. ಈ ವೇಳೆ ಅವರು ನಡೆದುಕೊಂಡ ರೀತಿಯ ಬಗ್ಗೆ ಚರ್ಚೆ ಶುರುವಾಗಿದೆ. ಯೋಗಿ ಆದಿತ್ಯನಾಥ್​ ಅವರ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ್ದಾರೆ. ಇದು ಒಂದು ವರ್ಗದ ಜನರಿಗೆ ಸರಿ ಎನಿಸಿಲ್ಲ. ಹಾಗಾಗಿ ರಜನಿಕಾಂತ್​ ಅವರ ನಡೆಯನ್ನು ಅನೇಕರು ಖಂಡಿಸುತ್ತಿದ್ದಾರೆ. ಇಬ್ಬರ ನಡುವೆ ವಯಸ್ಸಿನ ಅಂತ ತುಂಬ ದೊಡ್ಡದಿದೆ. ಯೋಗಿ ಆದಿತ್ಯನಾಥ್​ ಅವರಿಗಿಂತ ರಜನಿಕಾಂತ್​ ಅವರು 21 ವರ್ಷ ಹಿರಿಯರು. ಹಾಗಾಗಿ ಕಿರಿಯ ವ್ಯಕ್ತಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಕೆಲವರು ವಿರೋಧಿಸುತ್ತಿದ್ದಾರೆ.

ರಜನಿಕಾಂತ್​ ಅವರಿಗೆ ಈಗ 72 ವರ್ಷ ವಯಸ್ಸು. ಆದರೆ ಯೋಗಿ ಆದಿತ್ಯನಾಥ್ ಅವರ ವಯಸ್ಸು ಈಗಿನ್ನೂ 51 ವರ್ಷ. ರಜನಿಕಾಂತ್​ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗುತ್ತಾರೆ ಎಂದು ಒಂದು ದಿನ ಮೊದಲೇ ಸುದ್ದಿ ಹೊರಬಿದ್ದಿತ್ತು. ಇಬ್ಬರೂ ಜೊತೆಯಾಗಿ ‘ಜೈಲರ್​’ ಸಿನಿಮಾ ವೀಕ್ಷಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಭೇಟಿಯ ಸಂದರ್ಭದಲ್ಲಿ ರಜನಿಕಾಂತ್​ ಅವರು ಈ ರೀತಿ ಕಾಲಿಗೆ ನಮಸ್ಕರಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಹಾಗಾಗಿ ಈ ಘಟನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ‘ಚಂದ್ರಮುಖಿ 2’ ಫಸ್ಟ್​ ಲುಕ್ ಬಿಡುಗಡೆ ಮಾಡಿದ ರಜನಿಕಾಂತ್​; ಗಣೇಶ ಚತುರ್ಥಿಗೆ ಬರಲಿದೆ ಬಹುನಿರೀಕ್ಷಿತ ಸಿನಿಮಾ

ರಜನಿಕಾಂತ್​ ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ತಮ್ಮ ನೆಚ್ಚಿನ ಹೀರೋ ಹೀಗೆ ನಡೆದುಕೊಂಡಿರುವುದು ಕೆಲವರಿಗೆ ಇಷ್ಟ ಆಗಿಲ್ಲ. ಸಿನಿಮಾದ ಕಾರಣಕ್ಕಾಗಿ ರಜನಿಕಾಂತ್​ ಅವರನ್ನು ಇಷ್ಟಪಡುವ ದೊಡ್ಡ ವರ್ಗವಿದೆ. ಆದರೆ ಆ ಪೈಕಿ ಅನೇಕರಿಗೆ ಯೋಗಿ ಆದಿತ್ಯನಾಥ್​ ಅವರ ರಾಜಕೀಯದ ನಿಲುವುಗಳು ಸೂಕ್ತ ಎನಿಸದೇ ಇರಬಹುದು. ಈ ಎಲ್ಲ ಕಾರಣಗಳಿಂದಾಗಿ ಯೋಗಿ ಆದಿತ್ಯನಾಥ್​ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ್ದನ್ನು ಒಂದಷ್ಟು ಮಂದಿ ಖಂಡಿಸುತ್ತಿದ್ದಾರೆ. ಈ ಘಟನೆ ಬಗ್ಗೆ ರಜನಿಕಾಂತ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಯೋಗಿ ಆದಿತ್ಯನಾಥ್​ ಕಾಲಿಗೆ ರಜನಿಕಾಂತ್​ ನಮಸ್ಕರಿಸಿದ ವಿಡಿಯೋ:

‘ಜೈಲರ್​’ ಬಿಡುಗಡೆಗೂ ಮುನ್ನವೇ ರಜನಿಕಾಂತ್​ ಅವರು ಪ್ರವಾಸಕ್ಕೆ ತೆರಳಿದರು. ಹಿಮಾಲಯದಲ್ಲಿ ತಮ್ಮ ಅಧ್ಯಾತ್ಮದ ಗುರುಗಳನ್ನು ಅವರು ಭೇಟಿ ಮಾಡಿದ್ದಾರೆ. ಅಲ್ಲದೇ ಒಂದಷ್ಟು ದೇವಾಲಯಗಳಿಗೂ ತೆರಳಿ ದರ್ಶನ ಪಡೆದಿದ್ದಾರೆ. ಅಲ್ಲಿಂದ ಹಿಂದಿರುಗುವಾಗ ಉತ್ತರ ಪ್ರದೇಶಕ್ಕೆ ತೆರಳಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗಿವೆ. ಈ ಭೇಟಿಯ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ