Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

Rajinikanth Health update: ರಜನಿಕಾಂತ್​ ಅವರಿಗೆ ಈಗ 70 ವರ್ಷ ವಯಸ್ಸು. ಹಾಗಾಗಿ ಅನೇಕ ವಯೋಸಹಜ ಕಾಯಿಲೆಗಳು ಅವರನ್ನು ಬಾಧಿಸುತ್ತಿವೆ. ಇದರ ಜೊತೆಗೆ ತಲೈವಾಗೆ​ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?
ರಜನಿಕಾಂತ್
Follow us
| Updated By: ಮದನ್​ ಕುಮಾರ್​

Updated on:Oct 30, 2021 | 9:42 AM

ನಟ ರಜನಿಕಾಂತ್​ ಅಭಿಮಾನಿಗಳು ಆತಂಕಗೊಂಡಿದ್ದಾರೆ. ತಲೈವಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಗುರುವಾರ (ಅ.28) ಚೆನ್ನೈನ ಕಾವೇರಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಆಸ್ಪತ್ರೆ ಮುಂದೆಯೇ ಜಮಾಯಿಸಿದರು. ಸದ್ಯ ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ರಕ್ತನಾಳಗಳಲ್ಲಿ ಇದ್ದ ಬ್ಲಾಕ್​ ತೆಗೆಯಲು ಆಪರೇಷನ್ ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ.

ರಜನಿಕಾಂತ್​ ಅವರಿಗೆ ಈಗ 70 ವರ್ಷ ವಯಸ್ಸು. ಹಾಗಾಗಿ ಅನೇಕ ವಯೋಸಹಜ ಕಾಯಿಲೆಗಳು ಅವರನ್ನು ಬಾಧಿಸುತ್ತಿದೆ. ಆ ಕಾರಣಕ್ಕಾಗಿ ರಜನಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡ ಅಭಿಮಾನಿಗಳು ಆತಂಕಗೊಳ್ಳುತ್ತಾರೆ. ತಲೈವಾ ಆರೋಗ್ಯದ ಬಗ್ಗೆ ಅಪ್​ಡೇಟ್​ ಸಿಗುವವರೆಗೂ ಅವರ ಅಪ್ಪಟ ಅಭಿಮಾನಿಗಳು ಕಾವೇರಿ ಆಸ್ಪತ್ರೆಯ ಎದುರು ಜಾಗರಣೆ ಮಾಡಿದ್ದಾರೆ. ಪರಿಣಾಮ, ಆಸ್ಪತ್ರೆ ಸುತ್ತಮುತ್ತ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಸದ್ಯ ರಜನಿಕಾಂತ್​ ಚೇತರಿಸಿಕೊಳ್ಳುತ್ತಿರುವ ವಿಷಯ ತಿಳಿದು ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಅ.25ರಂದು ರಜನಿಕಾಂತ್​ ಅವರು ದೆಹಲಿಗೆ ತೆರಳಿ ‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿದ್ದರು. ಆ ವೇಳೆ ಅವರು ಬಹಳ ಲವಲವಿಕೆಯಿಂದಲೇ ಓಡಾಡಿಕೊಂಡಿದ್ದರು. ಅದಾಗಿ ಕೆಲವೇ ಮೂರು ದಿನ ಕಳೆಯುವುದರೊಳಗೆ ಅವರು ಆಸ್ಪತ್ರೆಗೆ ದಾಖಲಾಗುವ ಸಂದರ್ಭ ಬಂದಿದ್ದಕ್ಕೆ ಫ್ಯಾನ್ಸ್​ ಆತಂಕಗೊಂಡಿದ್ದರು. ಈಗ ಶಸ್ತ್ರ ಚಿಕಿತ್ಸೆ ಮುಗಿದಿದೆ. ಆದಷ್ಟು ಬೇಗ ಅವರು ಮನೆಗೆ ವಾಪಸ್​ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕರ್ನಾಟಕದ ಜೊತೆ ರಜನಿಕಾಂತ್​ ಅವರಿಗೆ ಒಳ್ಳೆಯ ನಂಟು ಇದೆ. ರಾಜ್​ಕುಮಾರ್​ ಫ್ಯಾಮಿಲಿ ಜೊತೆ ಅವರಿಗೆ ಹಲವು ವರ್ಷಗಳಿಂದಲೂ ಒಡನಾಟವಿದೆ. ಹಾಗಾಗಿ ಅವರು ಪುನೀತ್​ ರಾಜ್​ಕುಮಾರ್​ ಅಂತಿಮ ದರ್ಶನಕ್ಕೆ ಆಗಮಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರು ಈ ಸಂದರ್ಭದಲ್ಲಿ ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗುತ್ತಿಲ್ಲ.

‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ರಜನಿಕಾಂತ್​ ಅವರು ತಮ್ಮ ಬೆಂಗಳೂರಿನ ಗೆಳಯ ರಾಜ್​ ಬಹದ್ದೂರ್​ ಅವರನ್ನು ನೆನಪು ಮಾಡಿಕೊಂಡಿದ್ದರು. ತಮ್ಮ ಗುರು ಕೆ. ಬಾಲಚಂದರ್​ ಹಾಗೂ ಅಭಿಮಾನಿಗಳಿಗೂ ಧನ್ಯವಾದ ಅರ್ಪಿಸಿದ್ದರು. ಪ್ರಸ್ತುತ ರಜನಿ ಅಭಿನಯದ ‘ಅಣ್ಣಾತೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ನ.4ರಂದು ಈ ಚಿತ್ರ ರಿಲೀಸ್​ ಆಗಲಿದೆ.

ಇದನ್ನೂ ಓದಿ:

Rajinikanth: ರಜನಿಕಾಂತ್​ಗೆ ಅಷ್ಟು ಚೆನ್ನಾಗಿ ತಮಿಳು ಕಲಿಸಿದ್ದು ಯಾರು? ಎರಡೇ ತಿಂಗಳಲ್ಲಿ ಬದಲಾಗಿತ್ತು ಬದುಕು

‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಬಗ್ಗೆ ರಜನಿ​ಕಾಂತ್​ ಸ್ನೇಹಿತ ರಾಜ್ ​ಬಹದ್ದೂರ್​ ಮೊದಲ ಪ್ರತಿಕ್ರಿಯೆ ಏನು?

Published On - 9:20 am, Sat, 30 October 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ