AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಿಶೇಷ ದಿನಕ್ಕೆ ರಿಲೀಸ್ ಆಗಲಿದೆ ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ

Rajinikanth: ರಜನೀಕಾಂತ್, ಉಪೇಂದ್ರ, ನಾಗಾರ್ಜುನ ಒಟ್ಟಿಗೆ ನಟಿಸುತ್ತಿರುವ ‘ಕೂಲಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಸಿನಿಮಾವನ್ನು ವಿಶೇಷ ದಿನದಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

ಈ ವಿಶೇಷ ದಿನಕ್ಕೆ ರಿಲೀಸ್ ಆಗಲಿದೆ ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 14, 2024 | 6:29 PM

Share

ರಜನಿಕಾಂತ್ ಅವರು ‘ಕೂಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಈಗಲೇ ಹೈಪ್ ಸೃಷ್ಟಿ ಆಗಿದೆ. ರಜನಿಕಾ ಹಾಗೂ ಲೋಕೇಶ್ ಒಟ್ಟಾಗಿ ನಟಿಸುತ್ತಿರುವ ಕಾರಣದಿಂದಲೂ ಸಿನಿಮಾ ಸಾಕಷ್ಟು ಹೈಪ್ ಪಡೆದಿದೆ. ಈ ಸಿನಿಮಾ ರಿಲೀಸ್ ಯಾವಾಗ ಎನ್ನುವ ಪ್ರಶ್ನೆಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ಕೂಲಿ’ ಸಿನಿಮಾ ಹೆಸರೇ ಹೇಳುವಂತೆ ಕಾರ್ಮಿಕರಿಗೆ ಸಂಬಂಧಿಸಿದೆ. ಈ ಕಾರಣದಿಂದ ಕಾರ್ಮಿಕ ದಿನಾಚರಣೆ ಪ್ರಯುಕ್ತ ಮುಂದಿನ ಮೇ 1ರಂದು ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಚಿತ್ರವನ್ನು ರಿಲೀಸ್ ಮಾಡಲು ಇದಕ್ಕಿಂತ ಒಳ್ಳೆಯ ದಿನ ಯಾವುದಿದೆ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಉತ್ತಮವಾದ ಮತ್ತೊಂದು ವಿಚಾರ ಎಂದರೆ ಮೇ 1 ಗುರುವಾರವೇ ಬಂದಿದೆ.

ಈ ಸಿನಿಮಾ ಮೇ 1ರಂದು ರಿಲೀಸ್ ಆದರೆ ಬಿಸ್ನೆಸ್ ರೀತಿಯಲ್ಲೂ ಚಿತ್ರಕ್ಕೆ ಸಹಕಾರಿ ಆಗಲಿದೆ. ಮೇ 1 ಸರ್ಕಾರಿ ರಜೆ ಇರುತ್ತದೆ. ಮೇ 2 ಶುಕ್ರವಾರ. ಸೆಂಟಿಮೆಂಟ್ ಮೇಲೆ ಜನರು ಸಿನಿಮಾ ನೋಡುತ್ತಾರೆ. ಇನ್ನು, ಮೇ 3 ಹಾಗೂ 4 ವೀಕೆಂಡ್ ಇರುವುದರಿಂದ ಜನರು ಸಹಜವಾಗಿಯೇ ಚಿತ್ರ ನೋಡಲು ಬರುತ್ತಾರೆ. ಇದು ಸಿನಿಮಾಗೆ ಸಹಕಾರಿ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಪ್ರಭಾಸ್, ರಜನೀಕಾಂತ್, ಶಾರುಖ್ ಖಾನ್ ಅನ್ನೂ ಹಿಂದಿಕ್ಕಿದ ಅಲ್ಲು ಅರ್ಜುನ್

‘ಕೂಲಿ’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ರಜನಿಕಾಂತ್ ಜೊತೆ ಕನ್ನಡದ ಉಪೇಂದ್ರ, ತೆಲುಗಿನ ನಾಗಾರ್ಜುನ ಕೂಡ ಸಿನಿಮಾದಲ್ಲಿ ಇದ್ದಾರೆ. ಶ್ರುತಿ ಹಾಸನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸಿನಿಮಾಗೆ ಬೇಡಿಕೆ ಹೆಚ್ಚಿದೆ.

ಲೋಕೇಶ್ ಕನಗರಾಜ್ ಅವರು ‘ಲೋಕೇಶ್ ಸಿನಿಮಾ ಯೂನಿವರ್ಸ್’ ಮಾಡಿದ್ದಾರೆ. ಆದರೆ, ಕೂಲಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ತಂಡ ಸ್ಪಷ್ಟಪಡಿಸಿದೆ. ಈ ಸಿನಿಮಾದಲ್ಲಿ ಆಮಿರ್ ಖಾನ್ ಕೂಡ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಕನ್ನಡ, ತೆಲುಗು ಹಾಗೂ ಹಿಂದಿಯಲ್ಲೂ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ದೊಡ್ಡ ಬಜೆಟ್ ಹಾಕಲಾಗುತ್ತಿದೆ. ಸನ್ ಪಿಕ್ಚರ್ಸ್ ಇದನ್ನು ನಿರ್ಮಾಣ ಮಾಡುತ್ತಿದ್ದು, ಅನಿರುದ್ಧ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ