‘ಜೈಲರ್​’ ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯೂ ಕೇಳದೇ ಮನಶಾಂತಿಗಾಗಿ ಹಿಮಾಲಯಕ್ಕೆ ತೆರಳಿದ ರಜನಿಕಾಂತ್​

Rajinikanth: ರಜನಿಕಾಂತ್​ ಅವರದ್ದು ಸಿಂಪಲ್​ ವ್ಯಕ್ತಿತ್ವ. ತೆರೆ ಮೇಲೆ ಅಬ್ಬರಿಸುವ ಅವರು ತೆರೆ ಹಿಂದೆ ಶಾಂತವಾಗಿ ಇರಲು ಬಯಸುತ್ತಾರೆ. ಅವರಿಗೆ ದೇವರ ಮೇಲೆ ಅಪಾರವಾದ ಭಕ್ತಿ ಇದೆ ಕೂಡ. ಹಾಗಾಗಿ ಹಿಮಾಲಯಕ್ಕೆ ತೆರಳಿದ್ದಾರೆ. ಅಲ್ಲಿನ ಅನೇಕ ದೇವಾಲಯಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ.

‘ಜೈಲರ್​’ ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯೂ ಕೇಳದೇ ಮನಶಾಂತಿಗಾಗಿ ಹಿಮಾಲಯಕ್ಕೆ ತೆರಳಿದ ರಜನಿಕಾಂತ್​
ರಜನಿಕಾಂತ್​
Follow us
|

Updated on: Aug 10, 2023 | 2:35 PM

‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಅವರ ಸಿನಿಮಾ ರಿಲೀಸ್​ ಆಗುವಾಗ ಸಹಜವಾಗಿಯೇ ಸುದ್ದು ಜೋರಾಗಿ ಇರುತ್ತದೆ. ಅಷ್ಟರಮಟ್ಟಿಗೆ ಹವಾ ಕ್ರಿಯೇಟ್​ ಮಾಡಿರುವ ನಟ ಅವರು. ಕೇವಲ ತಮಿಳುನಾಡಿನಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರ ಸಿನಿಮಾ ಬಿಡುಗಡೆ ಆಗುವ ದಿನ ಚಿತ್ರಮಂದಿರದಲ್ಲಿ ಜಾತ್ರೆಯ ವಾತಾವರಣ ನಿರ್ಮಾಣ ಆಗಿರುತ್ತದೆ. ಇಂದು (ಆಗಸ್ಟ್​ 10) ಜೈಲರ್​’ (Jailer) ಸಿನಿಮಾದ ರಿಲೀಸ್​ ಸಂದರ್ಭದಲ್ಲೂ ಅಂಥ ವಾತಾವರಣ ಮನೆಮಾಡಿದೆ. ಆದರೆ ರಜನಿಕಾಂತ್​ ಅವರು ಈ ಜಾತ್ರೆಯಲ್ಲಿ ಭಾಗಿಯಾಗಿಲ್ಲ. ಬದಲಿಗೆ ಅವರು ಮನಶಾಂತಿಯ ಹುಡುಕಾಟದಲ್ಲಿ ಇದ್ದಾರೆ. ಅದಕ್ಕಾಗಿ ಅವರು ಹಿಮಾಲಯಕ್ಕೆ ತೆರಳಿದ್ದಾರೆ. ‘ಜೈಲರ್​’ ಚಿತ್ರಕ್ಕೆ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಬರಬಹುದು ಎಂಬ ಚಿಂತೆಯನ್ನೂ ಮರೆತು ಅವರು ಹಿಮಾಲಯದತ್ತ (Himalaya) ಪ್ರಯಾಣ ಬೆಳೆಸಿದ್ದಾರೆ. ಒಂದು ವಾರಗಳ ಕಾಲ ಅವರು ಅಲ್ಲಿಯೇ ಇರಲಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ತಿಳಿದಿರುವಂತೆ ರಜನಿಕಾಂತ್​ ಅವರದ್ದು ಸಿಂಪಲ್​ ವ್ಯಕ್ತಿತ್ವ. ತೆರೆ ಮೇಲೆ ಅಬ್ಬರಿಸುವ ಅವರು ತೆರೆ ಹಿಂದೆ ಶಾಂತವಾಗಿ ಇರಲು ಬಯಸುತ್ತಾರೆ. ಅಲ್ಲದೇ ಅವರಿಗೆ ದೇವರ ಮೇಲೆ ಅಪಾರವಾದ ಭಕ್ತಿ ಇದೆ ಕೂಡ. ಆ ಕಾರಣದಿಂದಲೇ ಅವರು ಈಗ ಹಿಮಾಲಯಕ್ಕೆ ತೆರಳಿದ್ದಾರೆ. ಅಲ್ಲಿನ ಅನೇಕ ದೇವಾಲಯಗಳಿಗೆ ಭೇಟಿ ನೀಡುವ ಉದ್ದೇಶದಿಂದ ರಜನಿಕಾಂತ್​ ಅವರು ಬ್ರೇಕ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಶಿವಣ್ಣ ಎಂಟ್ರಿ ಸೂಪರ್’; ‘ಜೈಲರ್’ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರೇಕ್ಷಕರು

ಹಿಮಾಲಯಕ್ಕೆ ರಜನಿಕಾಂತ್​ ಅವರು ಭೇಟಿ ನೀಡಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ ಅನೇಕ ಬಾರಿ ಅವರು ಅಲ್ಲಿಗೆ ತೆರಳಿದ್ದರು. ಆದರೆ ಕೊವಿಡ್​ ಕಾಣಿಸಿಕೊಂಡ ನಂತರ ಹಿಮಾಲಯಕ್ಕೆ ಹೋಗಲು ಅವರಿಗೆ ಸಾಧ್ಯವಾಗಿರಲಿಲ್ಲ. ನಾಲ್ಕು ವರ್ಷದ ಗ್ಯಾಪ್​ ಬಳಿಕ ಅವರು ಮತ್ತೆ ಹಿಮಾಲಯಕ್ಕೆ ಹೋಗಿದ್ದಾರೆ. ಇತ್ತ, ‘ಜೈಲರ್​’ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮಾಸ್​ ಪ್ರೇಕ್ಷಕರು ಈ ಸಿನಿಮಾವನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ತಮಿಳುನಾಡಿನ ಹೊರಗೂ ಈ ಸಿನಿಮಾ ಅಬ್ಬರಿಸುತ್ತಿದೆ.

ಇದನ್ನೂ ಓದಿ: ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಜೈಲರ್​’ ಸಿನಿಮಾ? ಬಾಕ್ಸ್​ ಆಫೀಸ್​ನಲ್ಲಿ ರಜನಿಕಾಂತ್​ ಅಬ್ಬರ

‘ಜೈಲರ್​’ ಸಿನಿಮಾಗೆ ನೆಲ್ಸನ್​ ದಿಲೀಪ್​ಕುಮಾರ್​ ಅವರು ನಿರ್ದೇಶನ ಮಾಡಿದ್ದು, ‘ಸನ್​ ಪಿಕ್ಚರ್ಸ್​’ ಮೂಲಕ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿದೆ. ಮೋಹನ್​ಲಾಲ್​, ಜಾಕಿ ಶ್ರಾಫ್​, ಶಿವರಾಜ್​ಕುಮಾರ್​, ರಮ್ಯಾ ಕೃಷ್ಣನ್​, ಯೋಗಿ ಬಾಬು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ತಮನ್ನಾ ಭಾಟಿಯಾ ಅವರು ಒಂದು ಪಾತ್ರಕ್ಕೆ ಬಣ್ಣ ಹಚ್ಚುವುದರ ಜೊತೆಗೆ ‘ಕಾಲಾವಾ..’ ಹಾಡಿನಲ್ಲಿ ಕುಣಿದು ಭರ್ಜರಿ ಮನರಂಜನೆ ನೀಡಿದ್ದಾರೆ. ಮೊದಲ ದಿನ ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.