AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ ‘ಧರ್ಮನ್’

ಸೂಪರ್‌ಸ್ಟಾರ್ ರಜನಿಕಾಂತ್ ಅವರ 173ನೇ ಚಿತ್ರಕ್ಕೆ 'ಧರ್ಮನ್' ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಚಾಕುವಿನೊಂದಿಗೆ ರಗಡ್ ಲುಕ್‌ನಲ್ಲಿ ರಜನಿಕಾಂತ್ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನ, ಅನಿರುದ್ಧ್ ಸಂಗೀತವಿದೆ. 'ಜೈಲರ್ 2' ಮುಗಿದ ನಂತರ 'ಧರ್ಮನ್' ಚಿತ್ರೀಕರಣ ಆರಂಭವಾಗಲಿದೆ.

ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ 'ಧರ್ಮನ್'
ರಜನಿಕಾಂತ್ Image Credit source: Dharman Movie
ರಾಜೇಶ್ ದುಗ್ಗುಮನೆ
|

Updated on:Jun 24, 2026 | 10:53 AM

Share

ಭಾರತೀಯ ಚಿತ್ರರಂಗದ ಖ್ಯಾತ ನಟ ಸೂಪರ್‌ಸ್ಟಾರ್ ರಜನಿಕಾಂತ್ 75ನೇ ವಯಸ್ಸಿನಲ್ಲೂ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ‘ತಲೈವರ್ 173’ ಸಿನುಮಾ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗ ಸಿನಿಮಾದ ಅಧಿಕೃತ ಶೀರ್ಷಿಕೆ ರಿವೀಲ್ ಆಗಿದೆ. ಈ ಚಿತ್ರಕ್ಕೆ ‘ಧರ್ಮನ್’ ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದೆ.

  • ರಕ್ತಸಿಕ್ತ ಕತ್ತಿ ಹಿಡಿದು ಬಂದ ‘ಧರ್ಮನ್’
  • ಕಮಲ್ ಹಾಸನ್ ನಿರ್ಮಾಣದಲ್ಲಿ ತಲೈವರ್ ಅಬ್ಬರ
  • ವೈರಲ್ ಆಯ್ತು ‘ಧರ್ಮನ್’ ಫಸ್ಟ್ ಲುಕ್ ಪೋಸ್ಟರ್

ಬಿಡುಗಡೆ ಆಗಿರುವ ಮೊದಲ ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ನೀಲಿ ಬಣ್ಣದ ಡಾಕ್ಟರ್ ಸೂಟ್ ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಕೈಯಲ್ಲಿ ರಕ್ತಸಿಕ್ತವಾಗಿರುವ ಸರ್ಜಿಕಲ್ ಕತ್ತಿ ಹಿಡಿದು ವಿಭಿನ್ನ ಹಾಗೂ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಆಪರೇಷನ್ ಥಿಯೇಟರ್‌ನ ಲೈಟ್‌ಗಳಿವೆ. ಒಡೆದು ಹೋದ ಗಾಜಿನ ಕಿಟಕಿಗಳು ಇವೆ. ಇದು ಆ್ಯಕ್ಷನ್ ಎಂಟರ್‌ಟೈನರ್ ಆಗಿರಲಿದೆ ಎಂಬುದಕ್ಕೆ ಪೋಸ್ಟರ್ ಸಾಕ್ಷಿ ನುಡಿಯುತ್ತಿದೆ.

ಇದನ್ನೂ ಓದಿ: ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್

ಈ ಬಿಗ್ ಬಜೆಟ್ ಸಿನಿಮಾವನ್ನು ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ (RKFI) ಸಂಸ್ಥೆ ಅರ್ಪಿಸುತ್ತಿದ್ದು, ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನವಿದ್ದು, ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಅವರ ಸಂಗೀತ ಹಾಗೂ ಅನ್ಬರಿವ್ ಅವರ ಸಾಹಸ ನಿರ್ದೇಶನವಿದೆ.

ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ ಎನ್ನಲಾಗಿದೆ. ಈ ಚಿತ್ರ ಈ ವರ್ಷವೇ ತೆರೆಗೆ ಬರಲಿದೆ. ಇದಾದ ಬಳಿಕ ಅವರು ‘ಧರ್ಮನ್’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ರಜನಿಕಾಂತ್ ಅವರು ಶೀಘ್ರವೇ ಚಿತ್ರರಂಗಕ್ಕೆ ಗುಡ್​ಬೈ ಹೇಳಲಿದ್ದಾರೆ ಎಂಬ ವದಂತಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Wed, 24 June 26

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್