AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯುವ ಜನತೆ ಬಗ್ಗೆ ರಜನಿಕಾಂತ್​ಗೆ ಶುರುವಾಗಿದೆ ಆತಂಕ; ಪಾಶ್ಚಿಮಾತ್ಯರನ್ನು ಹೊಗಳಿದ ನಟ

ರಜನಿಕಾಂತ್ ಅವರು ಇತ್ತೀಚೆಗೆ ಯುವ ಜನತೆಯು ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಒಲವು ತೋರುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಮಹತ್ವವನ್ನು ಅವರು ಎತ್ತಿ ಹಿಡಿದಿದ್ದಾರೆ. ಪಾಶ್ಚಿಮಾತ್ಯರು ಭಾರತೀಯ ಆಧ್ಯಾತ್ಮದಲ್ಲಿ ಆಸಕ್ತಿ ತೋರುತ್ತಿರುವುದರ ಬಗ್ಗೆ ಹೇಳಿದ್ದಾರೆ. ಅವರ ‘ಕೂಲಿ’ ಸಿನಿಮಾ ಆಗಸ್ಟ್ 14 ರಂದು ಬಿಡುಗಡೆಯಾಗಲಿದೆ.

ಭಾರತದ ಯುವ ಜನತೆ ಬಗ್ಗೆ ರಜನಿಕಾಂತ್​ಗೆ ಶುರುವಾಗಿದೆ ಆತಂಕ; ಪಾಶ್ಚಿಮಾತ್ಯರನ್ನು ಹೊಗಳಿದ ನಟ
ರಜಿನಿಕಾಂತ್
ರಾಜೇಶ್ ದುಗ್ಗುಮನೆ
|

Updated on: May 02, 2025 | 8:51 AM

Share

ನಟ ರಜನಿಕಾಂತ್ (Rajinikanth) ಇತ್ತೀಚೆಗೆ ಸಂಪೂರ್ಣವಾಗಿ ಬದಲಾಗಿದ್ದಾರೆ. ಅಧ್ಯಾತ್ಮದ ಬಗ್ಗೆ ಅವರಿಗೆ ಸಾಕಷ್ಟು ಒಲವು ಬಂದಿದೆ. ಅವರು ಪ್ರತಿ ಸಿನಿಮಾ ರಿಲೀಸ್ ಆಗುವ ಸಂದರ್ಭದಲ್ಲಿ ಹಿಮಾಲಯಕ್ಕೆ ತೆರಳಿ ಧ್ಯಾನ ಮಾಡುತ್ತಾರೆ. ಅವರು ರಾಜಕೀಯ ಪಕ್ಷವನ್ನು ಆರಂಭಿಸಿ, ಚುನಾವಣೆಗೆ ಸ್ಪರ್ಧಿಸುವ ಕನಸನ್ನೂ ಕಂಡಿದ್ದರು. ಆದರೆ, ಈಗ ಅದನ್ನು ಕೈ ಬಿಟ್ಟಿದ್ದಾರೆ. ಈ ಮಧ್ಯೆ ರಜನಿಕಾಂತ್ ಅವರು ಯುವ ಜನತೆಗೆ ಬಗ್ಗೆ ಆತಂಕ ಹೊರಹಾಕಿದ್ದಾರೆ. ಆ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ.

ಭಾರತೀಯ ಸಂಸ್ಕೃತಿ ಶ್ರೀಮಂತವಾಗಿದೆ. ಆದರೆ, ಕೆಲವರು ಇದರಿಂದ ದೂರ ಆಗುತ್ತಿರುವ ಭಯ ರಜನಿಕಾಂತ್​ಗೆ ಕಾಣಿಸಿದೆ. ಪತ್ನಿ ಲತಾ ಆಯೋಜನೆ ಮಾಡಿದ್ದ ಕಾರ್ಯಕ್ರಮವೊಂದಕ್ಕೆ ರಜನಿಕಾಂತ್ ಅವರು ವಿಡಿಯೋ ಸಂದೇಶ ನೀಡಿದ್ದಾರೆ.  ‘ನಾವು ಪಾಶ್ಚಿಮಾತ್ಯ ಸಂಸ್ಕೃತಿಯಲ್ಲಿ ಮುಳುಗಿದ್ದೇವೆ. ಆದರೆ, ಪಾಶ್ಚಿಮಾತ್ಯರು ಭಾರತೀಯ ಸಂಸ್ಕೃತಿ ಮತ್ತು ಧ್ಯಾನದಲ್ಲಿ ಶಾಂತಿಯನ್ನು ಕಂಡುಕೊಳ್ಳುತ್ತಾ ಇದ್ದಾರೆ’ ಎಂದು ರಜನಿಕಾಂತ್ ಹೇಳಿದ್ದಾರೆ.

‘ಈ ಮೊಬೈಲ್ ಫೋನ್ ಯುಗದಲ್ಲಿ, ಯುವಕರು ಮತ್ತು ಕೆಲವು ವಯಸ್ಕರಿಗೆ ನಮ್ಮ ದೇಶದ ಸಂಪ್ರದಾಯಗಳು ಮತ್ತು ಸಂಸ್ಕೃತಿಯ ಬಗ್ಗೆ ತಿಳಿದಿಲ್ಲ. ಅವರು ನಮ್ಮ ದೇಶದ ವೈಭವ ಮತ್ತು ಶ್ರೇಷ್ಠತೆಯ ಬಗ್ಗೆ ತಿಳಿಯದೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಸರಿಸುತ್ತಾರೆ’ ಎಂದು ರಜನಿಕಾಂತ್ ಹೇಳಿದ್ದಾರೆ.

ಇದನ್ನೂ ಓದಿ
Image
ಅಜಯ್ ದೇವಗನ್ ನಟನೆಯ ‘ರೇಡ್ 2’ ಒಟಿಟಿಗೆ ಯಾವಾಗ? ಮೊದಲ ದಿನದ ಗಳಿಕೆ ಎಷ್ಟು?
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?
Image
ಇಲ್ಲಿಗೆ ಬರಲು ನಾನೊಬ್ಬನೇ ಕಾರಣವಲ್ಲ; ಹಲವರಿಗೆ ಕ್ರೆಡಿಟ್ ಕೊಟ್ಟ ಅಲ್ಲು
Image
ಅಜಿತ್​ಗೆ ಸಾವಿನ ಬಗ್ಗೆ ಶುರುವಾಗಿದೆ ಭಯ? ವಿಚಿತ್ರವಾಗಿ ಮಾತನಾಡಿದ ನಟ

‘ಪಾಶ್ಚಿಮಾತ್ಯರು ತಮ್ಮ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಸಂತೋಷ ಮತ್ತು ಶಾಂತಿಯನ್ನು ಕಂಡುಕೊಳ್ಳಲಾಗದ ಕಾರಣ ಭಾರತದತ್ತ ಮುಖ ಮಾಡುತ್ತಾ ಇದ್ದಾರೆ. ಭಾರತವು ಅವರಿಗೆ ಶಾಂತಿ ಮತ್ತು ಸಂತೋಷವನ್ನು ಕಂಡುಕೊಳ್ಳುವ ಸ್ಥಳವಾಗಿದೆ. ಧ್ಯಾನ ಮತ್ತು ಯೋಗವನ್ನು ಅವರು ಅಭ್ಯಾಸ ಮಾಡುತ್ತಾ ಇದ್ದಾರೆ. ಲತಾ ಈಗ ಅದರ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ದೇವರು ಅವರ ಪ್ರಯತ್ನಗಳನ್ನು ಆಶೀರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ರಜನಿಕಾಂತ್ ಹೇಳಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಎಷ್ಟು ಮಾನವೀಯತೆ ಮೆರೆಯುತ್ತಾರೆ ನೋಡಿ; ಈ ವಿಡಿಯೋನೇ ಸಾಕ್ಷಿ

ಲೋಕೇಶ್ ಕನಗರಾಜ್ ನಿರ್ದೇಶನದ ‘ಕೂಲಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಅಲ್ಲದೆ, ನೆಲ್ಸನ್ ದಿಲೀಪ್ ಕುಮಾರ್ ನಟನೆಯ ‘ಜೈಲರ್ 2’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ‘ಕೂಲಿ’ ಆಗಸ್ಟ್ 14ರಂದು ರಿಲೀಸ್ ಆಗಲಿದೆ. ‘ಜೈಲರ್ 2’ ರಿಲೀಸ್ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು