AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ನಟನೆಯ 171ನೇ ಸಿನಿಮಾದ ಹೊಸ ಪೋಸ್ಟರ್​ ಜೊತೆ ಬಂತು ಸಿಹಿ ಸುದ್ದಿ

ನಿರ್ದೇಶಕ ಲೋಕೇಶ್​ ಕನಗರಾಜ್​ ಮತ್ತು ನಟ ರಜನಿಕಾಂತ್​ ಅವರು ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ. ಈ ಸಿನಿಮಾದ ಹೊಸ ಪೋಸ್ಟರ್​ ಅನಾವರಣ ಆಗಿದೆ. ಅದರ ಜೊತೆಗೆ ಲೋಕೇಶ್​ ಕನಗರಾಜ್​ ಅವರು ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ರಜನಿಕಾಂತ್​ ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ರಜನಿಕಾಂತ್​ ನಟನೆಯ 171ನೇ ಸಿನಿಮಾದ ಹೊಸ ಪೋಸ್ಟರ್​ ಜೊತೆ ಬಂತು ಸಿಹಿ ಸುದ್ದಿ
ರಜನಿಕಾಂತ್​, ಲೋಕೇಶ್​ ಕನಗರಾಜ್​
ಮದನ್​ ಕುಮಾರ್​
|

Updated on: Mar 28, 2024 | 10:44 PM

Share

ನಟ ರಜನಿಕಾಂತ್​ (Rajinikanth) ಅವರು ಒಂದರ ಹಿಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡುತ್ತಿದ್ದಾರೆ. ಈಗ ಅವರು 170ನೇ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ‘ವೆಟ್ಟಯ್ಯನ್​’ ಎಂದು ಶೀರ್ಷಿಕೆ ಇಡಲಾಗಿದೆ. ಅದಕ್ಕೆ ಟಿ.ಜೆ. ಜ್ಞಾನವೇಲ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆ ಸಿನಿಮಾದ ಬಳಿಕ 171ನೇ ಸಿನಿಮಾ ಸೆಟ್ಟೇರಲಿದೆ. ಅದಕ್ಕೆ ಲೋಕೇಶ್​ ಕನಗರಾಜ್​ (Lokesh Kanagaraj) ಅವರು ಆ್ಯಕ್ಷನ್​-ಕಟ್ ಹೇಳಲಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ತಲೈವರ್​ 171’ (Thalaivar 171) ಎಂದು ಕರೆಯಲಾಗುತ್ತಿದೆ. ಇದರ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ.

ಲೋಕೇಶ್​ ಕನಗರಾಜ್​ ಮತ್ತು ರಜನಿಕಾಂತ್​ ಅವರ ಕಾಂಬಿನೇಷನ್​ ಎಂಬ ಕಾರಣಕ್ಕೆ ‘ತಲೈವರ್​ 171’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದ ಪೋಸ್ಟರ್​ ಕೂಡ ಅಷ್ಟೇ ಇಂಟರೆಸ್ಟಿಂಗ್​ ಆಗಿ ಮೂಡಿಬಂದಿದೆ. ರಜನಿಕಾಂತ್​ ಅವರ ಕೈಗೆ ಬೇಡಿ ಹಾಕಲಾಗಿದೆ. ಆದರೆ ಅದು ಚಿನ್ನದ ವಾಚ್​ನಿಂದ ಮಾಡಿದ ಬೇಡಿ! ಅದನ್ನು ನೋಡಿದ ಅಭಿಮಾನಿಗಳಿಗೆ ಸಿನಿಮಾದ ಕಥೆಯ ಬಗ್ಗೆ ಕೌತುಕ ಮೂಡಿದೆ.

ಲೋಕೇಶ್​ ಕನಗರಾಜ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

ಈ ಪೋಸ್ಟರ್​ನ ಜೊತೆಯಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಒಂದು ಗುಡ್​ ನ್ಯೂಸ್​ ನೀಡಿದ್ದಾರೆ. ಅದೇನೆಂದರೆ, ಏಪ್ರಿಲ್​ 22ರಂದು ಈ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ರತಿಷ್ಠಿತ ‘ಸನ್​ ಪಿಕ್ಚರ್ಸ್​’ ಸಂಸ್ಥೆಯು ‘ತಲೈವರ್​ 171’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಮಕ್ಕಳು, ಮೊಮ್ಮಕ್ಕಳ ಜೊತೆ ರಜನಿಕಾಂತ್​ ಸರಳ ಸುಂದರ ಹೋಳಿ ಆಚರಣೆ

ಕಾಲಿವುಡ್​ನಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗಳ ಕಥೆಯಲ್ಲಿ ಒಂದಕ್ಕೊಂದು ಲಿಂಕ್​ ಇರುತ್ತದೆ. ಅದನ್ನು ಅವರು ಲೋಕೇಶ್​ ಸಿನಿಮ್ಯಾಟಿಕ್​ ಯೂನಿವರ್ಸ್​ ಎಂದು ಕರೆದಿದ್ದಾರೆ. ‘ಖೈದಿ’, ‘ವಿಕ್ರಮ್​’ ಸಿನಿಮಾಗಳ ಕಥೆಗಳು ಒಂದಕ್ಕೊಂದು ಬೆಸೆದುಕೊಂಡಿವೆ. ಆದರೆ ಈಗ ಅವರು ನಿರ್ದೇಶನ ಮಾಡಲಿರುವ ‘ತಲೈವರ್​ 171’ ಚಿತ್ರದಲ್ಲಿ ಆ ರೀತಿಯ ಲಿಂಕ್​ ಇರುವುದಿಲ್ಲ ಎನ್ನಲಾಗಿದೆ. ಅಲ್ಲದೇ ಇದೊಂದು ಪ್ರಯೋಗಾತ್ಮಕ ಸಿನಿಮಾ ಆಗಿರಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾ ಸೆಟ್ಟೇರುವ ಮುನ್ನವೇ ಹೈಪ್​ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ