AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ನಟನೆಯ 171ನೇ ಸಿನಿಮಾದ ಹೊಸ ಪೋಸ್ಟರ್​ ಜೊತೆ ಬಂತು ಸಿಹಿ ಸುದ್ದಿ

ನಿರ್ದೇಶಕ ಲೋಕೇಶ್​ ಕನಗರಾಜ್​ ಮತ್ತು ನಟ ರಜನಿಕಾಂತ್​ ಅವರು ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ. ಈ ಸಿನಿಮಾದ ಹೊಸ ಪೋಸ್ಟರ್​ ಅನಾವರಣ ಆಗಿದೆ. ಅದರ ಜೊತೆಗೆ ಲೋಕೇಶ್​ ಕನಗರಾಜ್​ ಅವರು ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ರಜನಿಕಾಂತ್​ ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ರಜನಿಕಾಂತ್​ ನಟನೆಯ 171ನೇ ಸಿನಿಮಾದ ಹೊಸ ಪೋಸ್ಟರ್​ ಜೊತೆ ಬಂತು ಸಿಹಿ ಸುದ್ದಿ
ರಜನಿಕಾಂತ್​, ಲೋಕೇಶ್​ ಕನಗರಾಜ್​
ಮದನ್​ ಕುಮಾರ್​
|

Updated on: Mar 28, 2024 | 10:44 PM

Share

ನಟ ರಜನಿಕಾಂತ್​ (Rajinikanth) ಅವರು ಒಂದರ ಹಿಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡುತ್ತಿದ್ದಾರೆ. ಈಗ ಅವರು 170ನೇ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ‘ವೆಟ್ಟಯ್ಯನ್​’ ಎಂದು ಶೀರ್ಷಿಕೆ ಇಡಲಾಗಿದೆ. ಅದಕ್ಕೆ ಟಿ.ಜೆ. ಜ್ಞಾನವೇಲ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆ ಸಿನಿಮಾದ ಬಳಿಕ 171ನೇ ಸಿನಿಮಾ ಸೆಟ್ಟೇರಲಿದೆ. ಅದಕ್ಕೆ ಲೋಕೇಶ್​ ಕನಗರಾಜ್​ (Lokesh Kanagaraj) ಅವರು ಆ್ಯಕ್ಷನ್​-ಕಟ್ ಹೇಳಲಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ತಲೈವರ್​ 171’ (Thalaivar 171) ಎಂದು ಕರೆಯಲಾಗುತ್ತಿದೆ. ಇದರ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ.

ಲೋಕೇಶ್​ ಕನಗರಾಜ್​ ಮತ್ತು ರಜನಿಕಾಂತ್​ ಅವರ ಕಾಂಬಿನೇಷನ್​ ಎಂಬ ಕಾರಣಕ್ಕೆ ‘ತಲೈವರ್​ 171’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದ ಪೋಸ್ಟರ್​ ಕೂಡ ಅಷ್ಟೇ ಇಂಟರೆಸ್ಟಿಂಗ್​ ಆಗಿ ಮೂಡಿಬಂದಿದೆ. ರಜನಿಕಾಂತ್​ ಅವರ ಕೈಗೆ ಬೇಡಿ ಹಾಕಲಾಗಿದೆ. ಆದರೆ ಅದು ಚಿನ್ನದ ವಾಚ್​ನಿಂದ ಮಾಡಿದ ಬೇಡಿ! ಅದನ್ನು ನೋಡಿದ ಅಭಿಮಾನಿಗಳಿಗೆ ಸಿನಿಮಾದ ಕಥೆಯ ಬಗ್ಗೆ ಕೌತುಕ ಮೂಡಿದೆ.

ಲೋಕೇಶ್​ ಕನಗರಾಜ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

ಈ ಪೋಸ್ಟರ್​ನ ಜೊತೆಯಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಒಂದು ಗುಡ್​ ನ್ಯೂಸ್​ ನೀಡಿದ್ದಾರೆ. ಅದೇನೆಂದರೆ, ಏಪ್ರಿಲ್​ 22ರಂದು ಈ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ರತಿಷ್ಠಿತ ‘ಸನ್​ ಪಿಕ್ಚರ್ಸ್​’ ಸಂಸ್ಥೆಯು ‘ತಲೈವರ್​ 171’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಮಕ್ಕಳು, ಮೊಮ್ಮಕ್ಕಳ ಜೊತೆ ರಜನಿಕಾಂತ್​ ಸರಳ ಸುಂದರ ಹೋಳಿ ಆಚರಣೆ

ಕಾಲಿವುಡ್​ನಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗಳ ಕಥೆಯಲ್ಲಿ ಒಂದಕ್ಕೊಂದು ಲಿಂಕ್​ ಇರುತ್ತದೆ. ಅದನ್ನು ಅವರು ಲೋಕೇಶ್​ ಸಿನಿಮ್ಯಾಟಿಕ್​ ಯೂನಿವರ್ಸ್​ ಎಂದು ಕರೆದಿದ್ದಾರೆ. ‘ಖೈದಿ’, ‘ವಿಕ್ರಮ್​’ ಸಿನಿಮಾಗಳ ಕಥೆಗಳು ಒಂದಕ್ಕೊಂದು ಬೆಸೆದುಕೊಂಡಿವೆ. ಆದರೆ ಈಗ ಅವರು ನಿರ್ದೇಶನ ಮಾಡಲಿರುವ ‘ತಲೈವರ್​ 171’ ಚಿತ್ರದಲ್ಲಿ ಆ ರೀತಿಯ ಲಿಂಕ್​ ಇರುವುದಿಲ್ಲ ಎನ್ನಲಾಗಿದೆ. ಅಲ್ಲದೇ ಇದೊಂದು ಪ್ರಯೋಗಾತ್ಮಕ ಸಿನಿಮಾ ಆಗಿರಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾ ಸೆಟ್ಟೇರುವ ಮುನ್ನವೇ ಹೈಪ್​ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ