AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಮುಂದಿನ ಸಿನಿಮಾಗೆ ನಿರ್ದೇಶಕನಾರು? ಸಿಕ್ತು ಉತ್ತರ

ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರದ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ವಿನೋದ್ ಮತ್ತು ಎಸ್.ಯು. ಅರುಣ್ ಕುಮಾರ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ.'ಕೂಲಿ' ಚಿತ್ರದ ಬಳಿಕ 'ಜೈಲರ್ 2' ಚಿತ್ರದಲ್ಲಿ ಬ್ಯುಸಿ ಇರುವ ರಜನಿಕಾಂತ್, ತಮ್ಮ ಭವಿಷ್ಯದ ಚಿತ್ರಗಳ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.

ರಜನಿಕಾಂತ್  ಮುಂದಿನ ಸಿನಿಮಾಗೆ ನಿರ್ದೇಶಕನಾರು? ಸಿಕ್ತು ಉತ್ತರ
ರಜಿನಿಕಾಂತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 14, 2025 | 11:18 AM

Share

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈ ವಯಸ್ಸಿನಲ್ಲೂ ಅವರು ಯುವಕರಂತೆ ಕೆಲಸ ಮಾಡುವುದನ್ನು ನೀವು ನೋಡಬಹುದು. ಇದಕ್ಕೆ ಅವರ ಆತ್ಮಸ್ಥೈರ್ಯವೇ ಕಾರಣ. ಈಗ ಲೋಕೇಶ್ ಕನಗರಾಜ್ ಅವರ ನಿರ್ದೇಶನದ ‘ಕೂಲಿ’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ನೆಲ್ಸನ್ ದಿಲೀಪ್ ಕುಮಾರ್ ಜೊತೆ ರಜನಿ ಸಿನಿಮಾ ಮಾಡಬೇಕಿದೆ. ಇದೆಲ್ಲಾ ಆದ ಬಳಿಕ ಅವರ ಮುಂದಿನ ನಿರ್ದೇಶಕರು ಯಾರು ಎಂಬುದು ಸದ್ಯದ ಪ್ರಶ್ನೆ.

ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾಗೆ ಲೋಕೇಶ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಹುತೇಕ ಶೂಟ್ ಮುಗಿದಿದೆ ಎನ್ನಲಾಗಿದೆ. ಇದಾದ ಬಳಿಕ ಅವರು ನೆಲ್ಸನ್ ದಿಲೀಪ್ ಕುಮಾರ್ ಜೊತೆ ‘ಜೈಲರ್ 2’ ಚಿತ್ರವನ್ನು ಶೂಟ್ ಮಾಡುತ್ತಿದ್ದಾರೆ. ಅವರು ಕೇರಳದಲ್ಲಿ ಚಿತ್ರದ ಶೂಟ್ ನಡೆಯುತ್ತಿದೆ. ಇದಾದ ಬಳಿಕ ಅವರು ಯಾರ ಜೊತೆ ಸಿನಿಮಾ ಮಾಡುತ್ತಾರೆ ಎಂಬುದು ಸದ್ಯದ ಪ್ರಶ್ನೆ. ಅದಕ್ಕೆ ಉತ್ತರ ಸಿಕ್ಕಿದೆ.

ರಜನಿಕಾಂತ್ ಅವರ ಮುಂದಿನ ಚಿತ್ರವನ್ನು ವೆಲ್ಸ್ ಫಿಲ್ಮ್​ ಇಂಟರ್​ನ್ಯಾಷನಲ್ ನಿರ್ಮಾಣ ಮಾಡಲಿದೆ. ಇದಕ್ಕೆ ನಿರ್ದೇಶಕರ ಆಯ್ಕೆ ನಡೆಯುತ್ತಿದೆ. ವಿನೋದ್ ಹಾಗೂ ಎಸ್​ಯು ಅರುಣ್​ಕುಮಾರ್ ಬಳಿ ರಜನಿಕಾಂತ್ ಅವರು ಕಥೆ ಕೇಳಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ ಒಬ್ಬರು ಈ ಚಿತ್ರವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಅನುಷ್ಕಾ-ವಿರಾಟ್ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ; ವಿಶೇಷತೆ ಏನು?
Image
ಉಪೇಂದ್ರ ನಿರ್ದೇಶನಕ್ಕೆ ನಾನು ದೊಡ್ಡ ಫ್ಯಾನ್ ಎಂದ ರಜನಿ ಸಿನಿಮಾ ಡೈರೆಕ್ಟರ್
Image
ಪವನ್ ಕಲ್ಯಾಣ್ ಹಳೆಯ ಚಿತ್ರಕ್ಕೆ ಕೊನೆಗೂ ಬಂತು ರಿಲೀಸ್ ಭಾಗ್ಯ
Image
ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ

ವಿನೋದ್ ಅವರು ದಳಪತಿ ವಿಜಯ್ ನಟನೆಯ ‘ಜನನಾಯಗನ್’ ಸಿನಿಮಾ ಮಾಡುತ್ತಿದ್ದಾರೆ. ಇದು ರಾಜಕೀಯ ಕಥಾ ಹಂದರ ಹೊಂದಿರೋ ಸಿನಿಮಾ. ಇದಾದ ಬಳಿಕ ಅವರು ರಜಿನಿ ಸಿನಿಮಾ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಅರುಣ್ ಕುಮಾರ್ ಅವರು ‘ವೀರ ತೀರ ಸೂರನ್ 2’ ಮೂಲಕ ಮೆಚ್ಚುಗೆ ಪಡೆದಿದ್ದಾರೆ.

ಇದನ್ನೂ ಓದಿ: ರಜನಿಕಾಂತ್ ಜೊತೆ ಅತಿಥಿ ಪಾತ್ರ ಮಾಡಲು 50 ಕೋಟಿ ರೂಪಾಯಿ ಕೇಳಿದ ಬಾಲಯ್ಯ

ಸದ್ಯ ಎರಡೂ ನಿರ್ದೇಶಕರು ರಜನಿಕಾಂತ್ ಅವರಿಗೆ ಆಫರ್ ನೀಡಿದ್ದಾರೆ. ಆದರೆ, ಇವರ ಪೈಕಿ ರಜನಿಕಾಂತ್ ಅವರು ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವುದು ಇನ್ನೂ ರಿವೀಲ್ ಆಗಿಲ್ಲ. ರಜನಿಕಾಂತ್ ಅವರು ಇನ್ನೂ 7 ವರ್ಷಗಳ ಕಾಲ  ಹೀರೋ ಆಗಿ ಮಿಂಚುವ ಕನಸನ್ನು ಹೊಂದಿದ್ದಾರೆ. ಅವರು ಸದ್ಯ ‘ಕೂಲಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:16 am, Wed, 14 May 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ