AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ

ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬೆಂಗಳೂರು ಸಾರಿಗೆ ಸಂಸ್ಥೆಯ ಹಳೆಯ ID ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರರಂಗಕ್ಕೆ ಬರುವ ಮುನ್ನ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರ ದಿನಗಳನ್ನು ಈ ಕಾರ್ಡ್ ನೆನಪಿಸುತ್ತದೆ. ಕೇವಲ 275 ರೂ. ಸಂಬಳದಿಂದ ಆರಂಭಿಸಿ, ಇಂದು ಭಾರತೀಯ ಚಿತ್ರರಂಗದ ತಲೈವಾ ಆಗಿ ಬೆಳೆದ ಅವರ ಪಯಣ ಲಕ್ಷಾಂತರ ಜನರಿಗೆ ಸ್ಫೂರ್ತಿದಾಯಕವಾಗಿದೆ.

ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ
ರಜಿನಿಕಾಂತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 27, 2026 | 7:53 AM

Share

ಚಿತ್ರರಂಗದಲ್ಲಿ ಯಾರೂ ತಲುಪಲಾಗದ ಎತ್ತರಕ್ಕೆ ಬೆಳೆದು ನಿಂತಿರುವ ‘ತಲೈವಾ’ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರ ಹಳೆಯ ದಿನಗಳ ಅಪರೂಪದ ಐಡಿ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದೆ.

ಇಂದು ಕೋಟ್ಯಂತರ ಜನರ ಆರಾಧ್ಯ ದೈವವಾಗಿರುವ ರಜನಿಕಾಂತ್, ಚಿತ್ರರಂಗಕ್ಕೆ ಬರುವ ಮುನ್ನ ಬೆಂಗಳೂರು ಸಾರಿಗೆ ಸಂಸ್ಥೆಯಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಈಗ ವೈರಲ್ ಆಗಿರುವ ಅವರ ಅಂದಿನ ಅಧಿಕೃತ ಐಡಿ ಕಾರ್ಡ್ ಆ ದಿನಗಳ ನೆನಪನ್ನು ಮತ್ತೊಮ್ಮೆ ಹಸಿರಾಗಿಸಿದೆ.

ಈ ಗುರುತಿನ ಚೀಟಿಯಲ್ಲಿ ರಜನಿಕಾಂತ್ ಅವರ ಅಸಲಿ ಹೆಸರು ‘ಶಿವಾಜಿ ರಾವ್ ಗಾಯಕ್ವಾಡ್’ ಎಂದು ನಮೂದಿಸಲಾಗಿದೆ. ಅವರು ಶ್ರೀನಗರ ಡಿಪೋದಲ್ಲಿ, ರೂಟ್ ನಂಬರ್ 10A ಬಸ್ಸಿನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂಬ ಮಾಹಿತಿ ಇಲ್ಲಿದೆ. ವಿಶೇಷವೆಂದರೆ, 18-06-1971 ರಲ್ಲಿ ಬಿಟಿಎಸ್ ಸೇರಿದಾಗ ಅವರಿಗಿದ್ದ ಮಾಸಿಕ ಸಂಬಳ ಕೇವಲ 275 ರೂಪಾಯಿ.

View this post on Instagram

A post shared by RVCJ Kannada (@rvcjkannada_)

ಬೆಂಗಳೂರಿನ ಬಸ್ಸುಗಳಲ್ಲಿ ಟಿಕೆಟ್ ಕೊಡುವಾಗ ಶಿವಾಜಿ ರಾವ್ ತೋರುತ್ತಿದ್ದ ವಿಶಿಷ್ಟ ಮ್ಯಾನರಿಸಂ ಮತ್ತು ಸ್ಟೈಲ್ ಅಂದಿನ ಪ್ರಯಾಣಿಕರನ್ನು ಸೆಳೆಯುತ್ತಿತ್ತು. ನಂತರ ಗೆಳೆಯ ರಾಜ ಬಹದ್ದೂರ್ ಪ್ರೇರಣೆಯಿಂದ ಮದ್ರಾಸ್ ಫಿಲ್ಮ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ ಅವರು, ನಿರ್ದೇಶಕ ಕೆ. ಬಾಲಚಂದರ್ ಅವರ ಕಣ್ಣಿಗೆ ಬಿದ್ದು ‘ರಜನಿಕಾಂತ್’ ಆಗಿ ಬದಲಾದರು.

ಇದನ್ನೂ ಓದಿ: ‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ

ಕೇವಲ 275 ರೂಪಾಯಿ ಸಂಬಳ ಪಡೆಯುತ್ತಿದ್ದ ಒಬ್ಬ ಸಾಮಾನ್ಯ ಯುವಕ, ಇಂದು ಭಾರತೀಯ ಚಿತ್ರರಂಗದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಾ ನಟನಾಗಿ ಬೆಳೆದು ನಿಂತಿರುವುದು ಒಂದು ಅದ್ಭುತ ಇತಿಹಾಸ. ಈ ಐಡಿ ಕಾರ್ಡ್ ಕೇವಲ ಒಂದು ದಾಖಲೆಯಲ್ಲ, ಶ್ರಮ ಮತ್ತು ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Wed, 27 May 26

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More