AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕಪ್ಪಿದ್ದಾರೆ ಎಂದಾಗ ರಾಜ್​ಕುಮಾರ್ ಪ್ರತಿಕ್ರಿಯೆ ಹೇಗಿತ್ತು? ನಿಜಕ್ಕೂ ಇವರು ಅನೇಕರಿಗೆ ಮಾದರಿ

ರಾಜ್​ಕುಮಾರ್​ಗೆ ಮೂವರು ಗಂಡುಮಕ್ಕಳು. ಪುನೀತ್ ಅವರು ನಮ್ಮೊಂದಿಗೆ ಇಲ್ಲ. ಇದು ಅನೇಕರಿಗೆ ಬೇಸರ ಮೂಡಿಸಿದೆ. ರಾಜ್​ಕುಮಾರ್ ಅವರು ಪುನೀತ್ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಪುನೀತ್ ಅವರು ಕಪ್ಪು ಎಂದು ಕೆಲವರು ಟೀಕಿಸಿದಾಗ ರಾಜ್​ಕುಮಾರ್ ಖಡಕ್ ಆಗಿ ಉತ್ತರ ಕೊಟ್ಟಿದ್ದರು.

ಪುನೀತ್ ಕಪ್ಪಿದ್ದಾರೆ ಎಂದಾಗ ರಾಜ್​ಕುಮಾರ್ ಪ್ರತಿಕ್ರಿಯೆ ಹೇಗಿತ್ತು? ನಿಜಕ್ಕೂ ಇವರು ಅನೇಕರಿಗೆ ಮಾದರಿ
ರಾಜ್​ಕುಮಾರ್-ಪುನೀತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 09, 2024 | 8:11 AM

Share

ರಾಜ್​ಕುಮಾರ್ ಅವರು ಸಿನಿಮಾಗಳ ಮೂಲಕ ಅನೇಕ ಆದರ್ಶಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ನಿಜ ಜೀವನದಲ್ಲೂ ಇದ್ದರು. ಅವರಿಗೆ ಯಾರದ್ದಾದರೂ ಕೆಟ್ಟದು ಬಯಸಿದರೆ ಅವರು ಒಳಿತನ್ನೇ ಬಯಸುತ್ತಿದ್ದರು. ಈ ಕಾರಣಕ್ಕೆ ರಾಜ್​ಕುಮಾರ್ ಅನೇಕರಿಗೆ ಇಷ್ಟ ಆಗುತ್ತಾರೆ. ರಾಜ್​ಕುಮಾರ್ ಅವರು ಪುನೀತ್ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಪುನೀತ್ ಕಪ್ಪಗಿದ್ದಾರೆ ಎಂದು ಹೇಳಿದಾಗ ಅವರು ಕೊಟ್ಟ ಉತ್ತರ ಅನೇಕರಿಗೆ ಮಾದರಿ ಆಗಿತ್ತು.

ರಾಜ್​ಕುಮಾರ್​ಗೆ ಮೂವರು ಗಂಡುಮಕ್ಕಳು. ಶಿವರಾಜ್​ಕುಮಾರ್ ಹಾಗೂ ರಾಘವೇಂದ್ರ ರಾಜ್​ಕುಮಾರ್ ಈಗಲೂ ನಮ್ಮ ಜೊತೆ ಇದ್ದಾರೆ. ಆದರೆ, ಪುನೀತ್ ಅವರು ನಮ್ಮೊಂದಿಗೆ ಇಲ್ಲ. ಇದು ಅನೇಕರಿಗೆ ಬೇಸರ ಮೂಡಿಸಿದೆ. ರಾಜ್​ಕುಮಾರ್ ಅವರು ಪುನೀತ್ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಪುನೀತ್ ಅವರು ಕಪ್ಪು ಎಂದು ಕೆಲವರು ಟೀಕಿಸಿದಾಗ ರಾಜ್​ಕುಮಾರ್ ಖಡಕ್ ಆಗಿ ಉತ್ತರ ಕೊಟ್ಟಿದ್ದರು.

ಪುನೀತ್ ತಾಯಿ ಪಾರ್ವತಮ್ಮ ಅವರು ಈ ಬಗ್ಗೆ ಮಾತನಾಡಿದ್ದರು. ‘ರಾಮ ಕೃಷ್ಣ ಎಲ್ಲ ಕಪ್ಪು. ಅದಕ್ಕೆ ಅವನು ಕಪ್ಪಗೆ ಹುಟ್ಟಿದ್ದಾನೆ. ಅವನು ದೇವರು. ಏನು ಅಂದುಕೋಬೇಡ ಎಂದು ರಾಜ್​ಕುಮಾರ್ ಸಮಾಧಾನ ಮಾಡಿದ್ದರು’ ಎಂಬುದಾಗಿ ಪಾರ್ವತಮ್ಮ ಹೇಳಿದ್ದರು. ‘ಕಪ್ಪು ಕಸ್ತೂರಿ, ಕೆಂಪು ಕಿಸ್ಬಾಯಿ. ನನಗೇನೋ ಮಗನ ಬಣ್ಣ ಸಾಕಷ್ಟು ಇಷ್ಟ ಆಯ್ತು’ ಎಂಬುದು ರಾಜ್​ಕುಮಾರ್ ಮಾತಾಗಿತ್ತು.

ಪುನೀತ್ ರಾಜ್​ಕುಮಾರ್ ಓರ್ವ ಅದ್ಭುತ ನಟ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಸಿನಿಮಾಗಳನ್ನು ಅವರು ಕೊಡುತ್ತಿದ್ದರು. ಅಷ್ಟೇ ಅಲ್ಲ, ಡ್ಯಾನ್ಸ್​ನಲ್ಲಿ ಅವರು ಎತ್ತಿದ ಕೈ. ಚಿಕ್ಕ ವಯಸ್ಸಿನಲ್ಲೇ ಪುನೀತ್ ನಟನೆಗೆ ಕಾಲಿಟ್ಟರು. ಇದಕ್ಕೆ ಕಾರಣ ಆಗಿದ್ದು ರಾಜ್​ಕುಮಾರ್ ಅವರು. ಪುನೀತ್ ಅವರನ್ನು ಸೆಟ್​ಗೆಲ್ಲ ಕರೆದುಕೊಂಡು ಹೋಗುತ್ತಿದ್ದುದು ಇದೇ ರಾಜ್​ಕುಮಾರ್.

ಇದನ್ನೂ ಓದಿ: ‘ಶಾಖಾಹಾರಿ’ ನಿರ್ದೇಶನಕ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್ ಬಂಡವಾಳ; ಹೀರೋ ಯಾರು?

ರಾಜ್​ಕುಮಾರ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಅನೇಕರಿಗೆ ಮಾದರಿ. ಅವರು ಚಿತ್ರರಂಗದಲ್ಲಿ ಯಾವಾಗಲೂ ಮಿಂಚಿದವರು. ಅವರಿಂದ ಕನ್ನಡ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಈಗಲೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Mon, 9 December 24

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ