AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಖಿ ಸಾವಂತ್​ಗೆ ಪಾಠ ಕಲಿಸಿ, ಪ್ರಾಮಿಸ್​ ಮಾಡಿದ್ದ ಸಲ್ಲು; ಎಲ್ಲವನ್ನೂ ಬಾಯ್ಬಿಟ್ಟ ನಟಿ

ಹಿಂದಿ ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ಚಾಲೆಂಜರ್​ ಆಗಿ ರಾಖಿ ಸಾವಂತ್​ ಅವರು ದೊಡ್ಮನೆ ಪ್ರವೇಶಿಸಿದ್ದರು. ತಮ್ಮದೇ ಆದ ಮ್ಯಾನರಿಸಂ ಮೂಲಕ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು.

ರಾಖಿ ಸಾವಂತ್​ಗೆ ಪಾಠ ಕಲಿಸಿ, ಪ್ರಾಮಿಸ್​ ಮಾಡಿದ್ದ ಸಲ್ಲು; ಎಲ್ಲವನ್ನೂ ಬಾಯ್ಬಿಟ್ಟ ನಟಿ
ರಾಖಿ ಸಾವಂತ್​ಗೆ ಪಾಠ ಕಲಿಸಿ, ಪ್ರಾಮಿಸ್​ ಮಾಡಿದ್ದ ಸಲ್ಲು; ಎಲ್ಲವನ್ನೂ ಬಾಯ್ಬಿಟ್ಟ ನಟಿ
TV9 Web
| Edited By: |

Updated on: Jul 06, 2021 | 5:05 PM

Share

ತಮ್ಮ ನೇರ ನಡೆ-ನುಡಿಯ ಕಾರಣಕ್ಕೆ ಹೆಸರಾದವರು ನಟಿ ರಾಖಿ ಸಾವಂತ್​. ಅವರು ಮಾಡಿದ್ದು ಕೆಲವೇ ಕೆಲವು ಸಿನಿಮಾಗಳಾದರೂ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಕಿರುತೆರೆ ರಿಯಾಲಿಟಿ ಶೋಗಳ ಮೂಲಕ ಅವರು ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರಾಖಿ ಬದುಕಿನಲ್ಲಿ ನಟ ಸಲ್ಮಾನ್​ ಖಾನ್​ ಅವರ ಪಾತ್ರ ದೊಡ್ಡದು. ಆ ಬಗ್ಗೆ ಈಗ ರಾಖಿ ಬಾಯಿ ಬಿಟ್ಟಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲವು ವಿಚಾರಗಳನ್ನು ಅವರು ಹೇಳಿಕೊಂಡಿದ್ದಾರೆ. ‘ನನ್ನ ಮನೆಯವರೂ ಕಲಿಸದ ಪಾಠವನ್ನು ನನಗೆ ಸಲ್ಮಾನ್​ ಖಾನ್​ ಕಲಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ನಾನು ಮೊದಲು ತುಂಬ ನೇರವಾಗಿ ಮಾತನಾಡುತ್ತಿದ್ದೆ. ಬಿಗ್​ ಬಾಸ್​ಗೆ ತೆರಳಿದಾಗ ಸಲ್ಮಾನ್​ ಖಾನ್​ ನನ್ನನ್ನು ಸುಧಾರಿಸಿದರು. ಶೋನಲ್ಲಿ ಕೆಟ್ಟ ಭಾಷೆ ಬಳಸಬಾರದು ಮತ್ತು ಬಿಗ್​ ಬಾಸ್​ನಿಂದ ಹೊರಗೆ ಹೋದ ಬಳಿಕವೂ ಕೆಟ್ಟ ಪದಗಳಲ್ಲಿ ಹೇಳಿಕೆ ನೀಡಬಾರದು ಅಂತ ಹೇಳಿದ್ದರು. ಅಲ್ಲದೆ, ನನ್ನ ಎಲ್ಲ ವಿಡಿಯೋಗಳನ್ನು ತಾವು ನೋಡುವುದಾಗಿ ನನಗೆ ಅವರು ಪ್ರಾಮಿಸ್​ ಮಾಡಿದ್ದಾರೆ’ ಎಂದು ರಾಖಿ ಹೇಳಿದ್ದಾರೆ.

‘ನೀನು ಏನೇ ಮಾಡಿದರೂ ನಾನು ಗಮನಿಸುತ್ತಾ ಇರುತ್ತೇನೆ. ಬಿಗ್​ ಬಾಸ್​ನಿಂದ ಹೊರಹೋದ ಬಳಿಕ ನಿನ್ನಲ್ಲಿ ನಾನು ದೊಡ್ಡ ಬದಲಾವಣೆ ನೋಡಲು ಬಯಸುತ್ತೇನೆ. ಬರೀ ಅದು ಇದು ಮಾತನಾಡಿಕೊಂಡು ಕಾಲ ಕಳೆಯುವ ಬದಲು, ನೀನು ಚೆನ್ನಾಗಿ ಕೆಲಸ ಮಾಡುತ್ತಿರುವುದನ್ನು ನೋಡಲು ನಾನು ಇಷ್ಟಪಡುತ್ತೇನೆ’ ಎಂದು ಸಲ್ಮಾನ್​ ಖಾನ್​ ಅವರು ರಾಖಿಗೆ ಬುದ್ಧಿಹೇಳಿ ಕಳಿಸಿದ್ದರಂತೆ. ಅದಕ್ಕೆ ತಕ್ಕಂತೆಯೇ ತಾವು ನಡೆದುಕೊಳ್ಳುತ್ತಿರುವುದಾಗಿ ರಾಖಿ ಸಾವಂತ್​ ಹೇಳಿದ್ದಾರೆ.

ಬರೀ ಬಾಯಿಮಾತಿನಲ್ಲಿ ಭರವಸೆ ನೀಡಿ ಕಳಿಸದೇ, ರಾಖಿ ಸಾವಂತ್​ ಅವರ ಫ್ಯಾಮಿಲಿಗೆ ಕಷ್ಟ ಬಂದಾಗ ಸಲ್ಲು ಸಹಾಯ ಮಾಡಿದ್ದಾರೆ ಕೂಡ. ‘ಸಲ್ಮಾನ್​ ಭಾಯ್​ ನನ್ನ ತಾಯಿಯನ್ನು ಉಳಿಸಿದರು. ಈ ಜೀವನದಲ್ಲಿ ತಾಯಿ ಬಿಟ್ಟರೆ ನನಗೆ ಏನೂ ಬೇಡ’ ಎಂದು ಈ ಹಿಂದೆ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ರಾಖಿ ತುಂಬಾ ಎಮೋಷನಲ್​ ಆಗಿದ್ದರು.

ಹಿಂದಿ ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ಚಾಲೆಂಜರ್​ ಆಗಿ ರಾಖಿ ಸಾವಂತ್​ ಅವರು ದೊಡ್ಮನೆ ಪ್ರವೇಶಿಸಿದ್ದರು. ತಮ್ಮದೇ ಆದ ಮ್ಯಾನರಿಸಂ ಮೂಲಕ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಫಿನಾಲೆವರೆಗೂ ಅವರು ಇತರೆ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು ಎಂಬುದು ಗಮನಿಸಬೇಕಾದ ವಿಚಾರ. ಈಗ ಸೋಶಿಯಲ್​ ಮೀಡಿಯಾದಲ್ಲಿ ಅವರು ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ.

ಇದನ್ನೂ ಓದಿ: Rakhi Sawant: ವಿಚಿತ್ರ ಭಂಗಿ, ವಿಚಿತ್ರ ಬಟ್ಟೆ; ಹೀಗೂ ಯೋಗ ಮಾಡ್ತಾರಾ? ಟ್ರೋಲ್​ ಆದ ರಾಖಿ ಸಾವಂತ್​

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್