AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?

ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಸಾಕಷ್ಟು ನಗರಗಳಲ್ಲಿ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ, ವಿನಾಕಾರಣ ಯಾರೂ ಮನೆಯಿಂದ ಹೊರಬರುವಂತಿಲ್ಲ.

ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?
ರಾಖಿ ಸಾವಂತ್
ರಾಜೇಶ್ ದುಗ್ಗುಮನೆ
| Edited By: |

Updated on: May 01, 2021 | 4:19 PM

Share

ನಟಿ ರಾಖಿ ಸಾವಂತ್​ ಸೆಲೆಬ್ರಿಟಿಯಾದರೂ ವಿವಾದದ ಮೂಲಕವೇ ಹೆಚ್ಚು ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಅವರು ನಟಿ ಕಂಗನಾ ರಣಾವತ್​ ವಿರುದ್ಧ ನೇರವಾಗಿಯೇ ಹರಿಹಾಯ್ದಿದ್ದರು. ಈ ಮೂಲಕ ಕಂಗನಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ರಾಖಿ ಸಾವಂತ್​ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಅಭಿಮಾನಿಗಳೇ ರಾಖಿಗೆ ಮಂಗಳಾರತಿ ಮಾಡಿದ್ದಾರೆ. ಅಷ್ಟಕ್ಕೂ ರಾಖಿ ಮಾಡಿದ ತಪ್ಪೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿ ಮೀರಿ ಹರಡುತ್ತಿದೆ. ಅದನ್ನು ನಿಯಂತ್ರಿಸೋಕೆ ಅನೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದಕ್ಕೆ ಮಹಾರಾಷ್ಟ್ರ ಕೂಡ ಹೊರತಾಗಿಲ್ಲ. ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಸಾಕಷ್ಟು ನಗರಗಳಲ್ಲಿ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ, ವಿನಾಕಾರಣ ಯಾರೂ ಮನೆಯಿಂದ ಹೊರಬರುವಂತಿಲ್ಲ.

ಬೇರೆಯವರಿಗೆ ಪಾಠ ಮಾಡುವ ರಾಖಿ ಸಾವಂತ್​ ಲಾಕ್​ಡೌನ್​​ ಆದಮೇಲೆ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಹಾಗೆಯೇ ಆಗಿದೆ. ಮುಂಬೈನ ಕಾಫಿ ಶಾಪ್​ ಒಂದಕ್ಕೆ ರಾಖಿ ಬಂದಿದ್ದರು. ನಂತರ ಕ್ಯಾಮೆರಾ ಕಾಣುತ್ತಿದ್ದಂತೆ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕೈಯಲ್ಲಿ ಸ್ಯಾನಿಟೈಸರ್ ಹಿಡಿದು ಸ್ಕೂಟರ್​ ಏರಿದ್ದಾರೆ. ಸ್ಕೂಟರ್​ಗೆ ಸ್ಯಾನಿಟೈಸರ್​ ಹಾಕಿ, ಕೊರೊನಾ ಹೋಗು. ಇಲ್ಲದಿದ್ದರೆ ನಾನು ನಿನ್ನನ್ನು ಸುಟ್ಟು ಹಾಕಿಬಿಡುತ್ತೇನೆ ಎಂದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅನೇಕರು ರಾಖಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ರಾಖಿ ಯಾಕೆ ಪದೇಪದೇ ಹೊರಗೆ ಕಾಣಿಸಿಕೊಳ್ಳುತ್ತಾರೆ? ಅವರಿಗೆ ಲಾಕ್​ಡೌನ್​ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಕೂಡ ಆಗ್ರಹಿಸಿದ್ದಾರೆ.

ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ರಾಖಿ ಕಾಣಿಸಿಕೊಂಡಿದ್ದರು. ಬಿಗ್​ ಬಾಸ್​ ಮನೆಯಲ್ಲೂ ಅವರು ಸಾಕಷ್ಟು ವಿವಾದಗಳನ್ನು ಸೃಷ್ಟಿ ಮಾಡಿದ್ದರು. ಬಿಗ್​ ಬಾಸ್​ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

Follow Us
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ
ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ