AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

Share

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!