AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

Share

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ