AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

Share

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ