AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

Share

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?