AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

Share

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ