AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ