AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ಪ್ಯಾಂಟಿ ಹಾಕಲ್ಲ’; ಜ್ಯೋತಿಷಿ ಹೇಳಿದಂತೆ ನಡೆದುಕೊಂಡ ರಾಖಿ ಸಾವಂತ್

ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ‘ನಂಗೆ ಜ್ಯೋತಿಷಿ ಒಬ್ಬರು, ಒಂದು ವರ್ಷದವರೆಗೆ ಪ್ಯಾಂಟಿ, ಬನಿಯಾನ್ ಹಾಕುದಂತೆ ಸೂಚನೆ ನೀಡಿದ್ದಾರೆ. ಅದನ್ನು ಫಾಲೋ ಮಾಡ್ತೀನಿ. ಆಗ ನನ್ನ ವೃತ್ತಿ ಜೀವನ ಮೇಲೆ ಹೋಗಲಿದೆಯಂತೆ’ ಎಂದು ರಾಖಿ ಸಾವಂತ್ ಹೇಳಿದರು.

‘ಇನ್ಮುಂದೆ ಪ್ಯಾಂಟಿ ಹಾಕಲ್ಲ’; ಜ್ಯೋತಿಷಿ ಹೇಳಿದಂತೆ ನಡೆದುಕೊಂಡ ರಾಖಿ ಸಾವಂತ್
ರಾಖಿ ಸಾವಂತ್
ರಾಜೇಶ್ ದುಗ್ಗುಮನೆ
|

Updated on: Feb 13, 2026 | 3:08 PM

Share

ರಾಖಿ ಸಾವಂತ್ ಅವರು ಸದಾ ಸುದ್ದಿಲ್ಲಿ ಇರಲು ಪ್ರಯತ್ನಿಸುತ್ತಾರೆ. ಅವರು ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಸದಾ ಮುಂದಿರುತ್ತಾರೆ. ಈಗ ಅವರು ನೀಡಿರೋ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಅವರು ಇನ್ಮುಂದೆ ಒಳ ಉಡುಪು ಹಾಕುವುದಿಲ್ಲವಂತೆ. ಇದಕ್ಕೆ ಜ್ಯೋತಿಷಿಗಳು ಕೊಟ್ಟ ಸೂಚನೆಯೇ ಕಾರಣ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಅವರು ಸಾಕಷ್ಟು ಟೀಕೆ ಎದುರಿಸುತ್ತಾ ಇದ್ದಾರೆ.

ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ‘ನಂಗೆ ಜ್ಯೋತಿಷಿ ಒಬ್ಬರು, ಒಂದು ವರ್ಷದವರೆಗೆ ಪ್ಯಾಂಟಿ, ಬನಿಯಾನ್ ಹಾಕುದಂತೆ ಸೂಚನೆ ನೀಡಿದ್ದಾರೆ. ಅದನ್ನು ಫಾಲೋ ಮಾಡ್ತೀನಿ. ಆಗ ನನ್ನ ವೃತ್ತಿ ಜೀವನ ಮೇಲೆ ಹೋಗಲಿದೆಯಂತೆ’ ಎಂದು ರಾಖಿ ಸಾವಂತ್ ಹೇಳಿದರು.

‘ಈಗಲೂ ಹಾಕಿಲ್ಲವೇ’ ಎಂದು ಅವರಿಗೆ ಕೇಳಲು ಆ್ಯಂಕರ್ ಮುಜುಗರ ಮಾಡಿಕೊಂಡರು. ಇದನ್ನು ಅರ್ಥ ಮಾಡಿಕೊಂಡ ರಾಖಿ ಸಾವಂತ್, ‘ಮುಜುಗರ ಮಾಡಿಕೊಳ್ಳದೆ ಕೇಳಿ’ ಎಂದು ಹೇಳಿದ್ದಾರೆ. ‘ನನ್ನ ಜೀವನ ಮತ್ತೊಂದು ಹಂತಕ್ಕೆ ಹೋಗುತ್ತದೆ ಎಂದು ಜ್ಯೋತಿಷಿ ಭವಿಷ್ಯ ಹೇಳಿದ್ದಾರೆ. ಇದಕ್ಕಾಗಿ ಇದನ್ನು ಫಾಲೋ ಮಾಡ್ತಾ ಇದೀನಿ’ ಎಂಬುದು ರಾಖಿ ಸಾವಂತ್ ಮಾತು.

ಇದನ್ನೂ ಓದಿ: ‘ಮದುವೆ ಆಗಲ್ಲ’: ರಾಖಿ ಸಾವಂತ್​ಗೆ ಪ್ರಪೋಸ್ ಮಾಡಿ ಉಲ್ಟಾ ಹೊಡೆದ ಪಾಕ್ ಮಾಡೆಲ್

ರಾಖಿ ಸಾವಂತ್ ಮಾತಿಗೆ ಸದ್ಯ ಎಲ್ಲ ಕಡೆಗಳಿಂದ ಟೀಕೆಗಳು ಬಂದಿವೆ. ಅವರು ಈ ರೀತಿ ಹೇಳಿದ್ದು ಸರಿ ಅಲ್ಲ ಎಂದು ಸಾಕಷ್ಟು ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇದೆಲ್ಲ ಪಬ್ಲಿಸಿಟಿ ಸ್ಟಂಟ್ ಎಂಬುದು ಕೂಡ ಕೆಲವರ ಅಭಿಪ್ರಾಯ.

ಈ ಮೊದಲು ಅವರು ಮುಸ್ಲಿಂ ವ್ಯಕ್ತಿ ಮದುವೆ ಆಗಿದ್ದರು. ಇದಕ್ಕಾಗಿ ಅವರು ಮುಸ್ಲಿಂ ಆಗಿಯೂ ಮತಾಂತರಗೊಂಡಿದ್ದರು. ಆದರೆ, ವಿಚ್ಛೇದನದಲ್ಲಿ ಇದು ಕೊನೆಗೊಂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?