AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy 67: ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ

Rakshit Shetty | Thalapathy Vijay: ‘ದಳಪತಿ 67’ ಸಿನಿಮಾಗೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ ಜೊತೆ ಈ ಚಿತ್ರತಂಡ ಮಾತುಕತೆ ನಡೆಸಿದೆ ಎಂದು ವರದಿ ಆಗಿದೆ.

Thalapathy 67: ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ
ರಕ್ಷಿತ್ ಶೆಟ್ಟಿ, ದಳಪತಿ ವಿಜಯ್
Follow us
TV9 Web
| Updated By: ಮದನ್​ ಕುಮಾರ್​

Updated on:Jan 17, 2023 | 3:33 PM

ಕನ್ನಡದ ಸ್ಟಾರ್​ ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರಿಗೆ ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಕಳೆದ ವರ್ಷ ಅವರು ನಟಿಸಿದ ‘777 ಚಾರ್ಲಿ’ ಸಿನಿಮಾ ದೇಶಾದ್ಯಂತ ಸದ್ದು ಮಾಡಿತ್ತು. 150 ಕೋಟಿ ರೂಪಾಯಿ ಬಿಸ್ನೆಸ್​ ಮಾಡಿದ್ದು ಆ ಸಿನಿಮಾದ ಹೆಚ್ಚುಗಾರಿಕೆ. ‘777 ಚಾರ್ಲಿ’ ಚಿತ್ರದಿಂದ ಸಿಕ್ಕ ಭಾರಿ ಯಶಸ್ಸಿನ ಬಳಿಕ ರಕ್ಷಿತ್​ ಶೆಟ್ಟಿ ಅವರಿಗೆ ಪರಭಾಷೆಯಿಂದ ಆಫರ್​ ಬರಲು ಆರಂಭಿಸಿವೆ. ಈಗ ಅವರು ಕಾಲಿವುಡ್​ನ ಖ್ಯಾತ ನಟ ‘ದಳಪತಿ’ ವಿಜಯ್ (Thalapathy Vijay)​ ನಟನೆಯ 67ನೇ ಸಿನಿಮಾದಲ್ಲಿ ಬಣ್ಣ ಹಚ್ಚುವ ಸಾಧ್ಯತೆ ದಟ್ಟವಾಗಿದೆ. ‘ದಳಪತಿ 67’ (Thalapathy 67) ಚಿತ್ರತಂಡ ರಕ್ಷಿತ್​ ಶೆಟ್ಟಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ ಎಂದು ಸುದ್ದಿ ಆಗಿದೆ.

ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್​ ಆಗಿ ಉತ್ತಮ ಕಮಾಯಿ ಮಾಡಿದೆ. ಆ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್​. ಈಗ ವಿಜಯ್​ ಜೊತೆ ನಟಿಸುವ ಅವಕಾಶ ರಕ್ಷಿತ್​ ಶೆಟ್ಟಿಗೂ ಸಿಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ. ‘ದಳಪತಿ 67’ ಸಿನಿಮಾಗೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಇದರ ಶೂಟಿಂಗ್​ ಆರಂಭ ಆಗಿದೆ. ರಕ್ಷಿತ್​ ಶೆಟ್ಟಿ ಜೊತೆ ಮಾತುಕತೆ ನಡೆದಿರುವ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಿಬೇಕಿದೆ.

ಇದನ್ನೂ ಓದಿ: Rakshit Shetty: 150 ಕೋಟಿ ರೂ. ಗಳಿಸಿದ ‘777 ಚಾರ್ಲಿ’; ಪ್ರಾಣಿಗಳ ರಕ್ಷಣೆಗೆ ಶೇ.5ರಷ್ಟು ಹಣ ದೇಣಿಗೆ ನೀಡಿದ ರಕ್ಷಿತ್​ ಶೆಟ್ಟಿ

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ರಕ್ಷಿತ್​ ಶೆಟ್ಟಿ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ನಟನಾಗಿ ಮಾತ್ರವಲ್ಲದೆ, ನಿರ್ದೇಶಕ ಹಾಗೂ ನಿರ್ಮಾಪಕನಾಗಿಯೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ದಳಪತಿ ವಿಜಯ್​ ನಟನೆಯ ಸಿನಿಮಾದಲ್ಲಿ ಬಣ್ಣ ಹಚ್ಚಲು ಇನ್ನೂ ಒಪ್ಪಿಕೊಂಡಿಲ್ಲ. ಸಹಿ ಮಾಡಿದ ಬಳಿಕವಷ್ಟೇ ಪಕ್ಕಾ ಸುದ್ದಿ ಹೊರಬೀಳಲಿದೆ.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿ ಪರಿಚಯಿಸಿದ ಕಲಾವಿದೆ ರಶ್ಮಿಕಾ ಮಂದಣ್ಣ: ಭಾ.ಮ. ಹರೀಶ್ 

ಲೋಕೇಶ್​ ಕನಗರಾಜ್​ ಅವರು ಸ್ಟಾರ್​ ನಿರ್ದೇಶಕನಾಗಿ ಮಿಂಚುತ್ತಿದ್ದಾರೆ. ‘ಕೈದಿ’, ‘ಮಾಸ್ಟರ್​’, ‘ವಿಕ್ರಮ್​’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೂ ಕಾರ್ತಿ ನಟನೆಯ ‘ಕೈದಿ’ ಚಿತ್ರಕ್ಕೂ ಲೋಕೇಶ್​ ಅವರು ಕನೆಕ್ಷನ್​ ಇಟ್ಟಿದ್ದರು. ಈಗ ‘ದಳಪತಿ 67’ ಕೂಡ ಅದೇ ಮಾದರಿಯಲ್ಲಿ ತಯಾರಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಅದರಲ್ಲಿ ರಕ್ಷಿತ್​ ಶೆಟ್ಟಿಗೆ ಯಾವ ಪಾತ್ರ ಸಿಗಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆಗೆ ಹತ್ತಿರವಾಗುತ್ತಿದೆ. ಇನ್ನು, ಅವರದೇ ನಿರ್ದೇಶನದಲ್ಲಿ ಮೂಡಿಬರಲಿರುವ ‘ರಿಚರ್ಡ್​ ಆಂಟನಿ’ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:22 pm, Tue, 17 January 23

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ