AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ?

ರಕ್ಷಿತಾ ಶೆಟ್ಟಿ ಅವರು 'ಪಟಾಕಿ ಕಿಚನ್' ಪ್ರಾರಂಭಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ರಕ್ಷಿತಾ, ಯೂಟ್ಯೂಬರ್ ಆಗಿ ಜನಪ್ರಿಯರಾಗಿದ್ದರು. ಹಳ್ಳಿಯಲ್ಲಿ ಆರಂಭವಾಗಿರುವ ಈ ಕಿಚನ್‌ಗೆ ಬಿಗ್ ಬಾಸ್ ಗೆಳೆಯ ರಘು ಚಾಲನೆ ನೀಡಿದ್ದಾರೆ. ಮೊದಲ ದಿನ ರಘು ಏಡಿ ಘೀ ರೋಸ್ಟ್ ತಯಾರಿಸಿದ್ದಾರೆ. ಇದು ರಕ್ಷಿತಾ ಅವರ ಅಡುಗೆ ಕಾಯಕಕ್ಕೆ ಹೊಸ ಆಯಾಮ ನೀಡಿದೆ.

ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ?
ರಘು-ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Apr 14, 2026 | 3:02 PM

Share

ರಕ್ಷಿತಾ ಶೆಟ್ಟಿ (Rakshitha Shetty) ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದರು. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ರಘು ಜೊತೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಈ ಬಾಂಧವ್ಯ ಬಿಗ್ ಬಾಸ್ ಮುಗಿದ ಬಳಿಕವೂ ಮುಂದುವರಿದಿದೆ. ಈಗ ರಕ್ಷಿತಾ ಶೆಟ್ಟಿ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರು ‘ಪಟಾಕಿ ಕಿಚನ್’ ಆರಂಭಿಸಿದ್ದಾರೆ. ಹಳ್ಳಿಯಲ್ಲಿ ಈ ಕಿಚನ್ ನಿರ್ಮಿಸಲಾಗಿದ್ದು, ಇದರಲ್ಲಿ ರಕ್ಷಿತಾ ಶೆಟ್ಟಿ ಅವರು ಅಡುಗೆ ಮಾಡಲಿದ್ದಾರೆ.

ರಕ್ಷಿತಾ ಶೆಟ್ಟಿ ಅವರು ಮೂಲತಃ ಯೂಟ್ಯೂಬರ್. ಅಡುಗೆ ವಿಡಿಯೋ ಮಾಡುತ್ತಿದ್ದ ಅವರು, ಭಿನ್ನ ಮಾತಿನ ಶೈಲಿಯಲ್ಲಿ ಗಮನ ಸೆಳೆದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹೆಸರು ಮಾಡಿದರು. ಈ ಕಾರಣಕ್ಕೆ ಅವರಿಗೆ ಬಿಗ್ ಬಾಸ್​​ನಲ್ಲಿ ಅವಕಾಶ ಸಿಕ್ಕಿತು. ಅವರು ಈ ವೇದಿಕೆಯನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡರು. ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ರನ್ನರ್ ಅಪ್ ಕೂಡ ಆದರು. ಈಗ ತಮ್ಮ ಯೂಟ್ಯೂಬ್ ಕಾಯಕ ಮುಂದುವರಿಸಿದ್ದಾರೆ.

ಇದನ್ನೂ ಓದಿ: ‘ದೊಡ್ಮನೆ ಹಬ್ಬ’ದಲ್ಲಿ ರಕ್ಷಿತಾ ಶೆಟ್ಟಿ ಕಣ್ಣೀರು; ತಬ್ಬಿ ಸಂತೈಸಿದ ರಘು-ಗಿಲ್ಲಿ

ಬಿಗ್ ಬಾಸ್ ಮನೆಯಲ್ಲಿದ್ದಾಗ ಪಟಾಕಿ ರಕ್ಷಿತಾ ಎಂಬ ಬಿರುದು ಅವರಿಗೆ ಸಿಕ್ಕಿತ್ತು. ಇದನ್ನು ಮುಂದುವರಿಸಿಕೊಂಡು ಹೋಗಲು ಅವರು ನಿರ್ಧರಿಸಿದ್ದಾರೆ. ಈ ಕಾರಣಕ್ಕೆ ಅವರು ತಮ್ಮ ಕಿಚನ್​​ಗೆ ‘ಪಟಾಕಿ ಕಿಚನ್’ ಎಂದು ನಾಮಕರಣ ಮಾಡಿದ್ದರು. ಇದನ್ನು ಉದ್ಘಾಟಿಸಲು ರಘು ಅವರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದರು. ರಿಬ್ಬನ್ ಕಟ್ ಮಾಡಿ ಕಿಚನ್ ಉದ್ಘಾಟನೆ ಮಾಡಲಾಗಿದೆ.

ಮಣ್ಣಿನ ಹೂಜಿಯಲ್ಲಿ ನೀರನ್ನು ಇಡಲಾಗಿದೆ. ಅಲ್ಲಿನ ಗೋಡೆಯ ಮೇಲೆ ರಕ್ಷಿತಾ ಫೋಟೋ ಇದ್ದು, ಅದಕ್ಕೆ ಹಲವು ಕೈಗಳಿವೆ. ಪಟಾಕಿ ಕಿಚನ್ ಅಲ್ಲಿ ಮೊದಲ ದಿನ ಏಡಿ ಘೀ ರೋಸ್ಟ್​​ನ ರಘು ಮಾಡಿದ್ದಾರೆ. ರಘು ಅವರು ಅಡುಗೆ ಮಾಡುವುದನ್ನು ತುಂಬಾನೇ ಇಷ್ಟಪಡುತ್ತಾರೆ. ಈ ಕಾರಣಕ್ಕೆ ‘ಪಟಾಕಿ ಕಿಚನ್’ ಅಲ್ಲಿ ಮೊದಲ ದಿನ ರಘು ಅಡುಗೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ