AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಡ್ರಗ್ಸ್​ ಕೇಸ್​: ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಾಕುಲ್​ ಪ್ರೀತ್​ ಸಿಂಗ್​

ಜಾರಿ ನಿರ್ದೇಶನಾಲಯ ಕಚೇರಿ ಒಳಗೆ ರಾಕುಲ್​ ಪ್ರೀತ್​ ಸಿಂಗ್​ ತೆರಳುತ್ತಿರುವ ವಿಡಿಯೋಗಳು ವೈರಲ್​ ಆಗುತ್ತಿವೆ. ಅಕ್ರಮ ಹಣ ವರ್ಗಾವಣೆ ಮತ್ತು ಡ್ರಗ್ಸ್​ ಕೇಸ್​ ಸಂಬಂಧಿಸಿದಂತೆ ಈ ವಿಚಾರಣೆ ನಡೆಯುತ್ತಿದೆ.

ಟಾಲಿವುಡ್​ ಡ್ರಗ್ಸ್​ ಕೇಸ್​: ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಾಕುಲ್​ ಪ್ರೀತ್​ ಸಿಂಗ್​
ರಾಕುಲ್​ ಪ್ರೀತ್​ ಸಿಂಗ್
TV9 Web
| Edited By: |

Updated on: Sep 03, 2021 | 2:57 PM

Share

ಖ್ಯಾತ ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರು ಹೈದರಾಬಾದ್​ನ ಜಾರಿ ನಿರ್ದೇಶನಾಲಯ ಕಚೇರಿಗೆ ಶುಕ್ರವಾರ (ಸೆ.3) ತೆರಳಿದ್ದು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್​ ಜಾಲದ ಜೊತೆ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳಿಗೆ ನಂಟು​ ಇದೆ ಎಂಬ ಅನುಮಾನ ವ್ಯಕ್ತವಾದ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಬಗ್ಗೆಯೂ ಸುಳಿವು ಸಿಕ್ಕಿತ್ತು. ಆ ಸಂಬಂಧ ಅನೇಕ ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿತ್ತು. ಅದರ ಅನ್ವಯ ರಾಕುಲ್ ಪ್ರೀತ್​ ಸಿಂಗ್​ ಅವರು ಇಂದು ವಿಚಾರಣೆ ಎದುರಿಸಿದ್ದಾರೆ. ಅಧಿಕಾರಿಗಳು ಕೇಳಿದ ಹಲವು ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

ತೆಲುಗು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ವಿಚಾರಣೆಯ ಬಿಸಿ ತಟ್ಟುತ್ತಿದೆ. ರಾಣಾ ದಗ್ಗುಬಾಟಿ, ರವಿತೇಜ, ನಿರ್ದೇಶಕ ಪುರಿ ಜಗನ್ನಾಥ್​, ಚಾರ್ಮಿ ಕೌರ್​ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಜಾರಿ ನಿರ್ದೇಶನಾಲಯ ಕಚೇರಿ ಒಳಗೆ ರಾಕುಲ್​ ಪ್ರೀತ್​ ಸಿಂಗ್​ ತೆರಳುತ್ತಿರುವ ವಿಡಿಯೋಗಳು ವೈರಲ್​ ಆಗುತ್ತಿವೆ. ದಕ್ಷಿಣ ಭಾರತದ ಜೊತೆಗೆ ಬಾಲಿವುಡ್​ನಲ್ಲೂ ರಾಕುಲ್​ ಪ್ರೀತ್​ ಸಿಂಗ್​ ಅವರಿಗೆ ಸಖತ್ ಬೇಡಿಕೆ ಇದೆ. ಸದ್ಯ ಅವರ ಕೈಯಲ್ಲಿ 8ಕ್ಕೂ ಅಧಿಕ ಪ್ರಾಜೆಕ್ಟ್​ಗಳಿವೆ. ಈ ಸಂದರ್ಭದಲ್ಲಿ ಅವರಿಗೆ ಇಡಿ ತನಿಖೆಯ ತಲೆನೋವು ಶುರುವಾಗಿದೆ.

ಆ.31ರಂದು ಪುರಿ ಜಗನ್ನಾಥ್​ ಹಾಗೂ ಸೆ.2ರಂದು ಚಾರ್ಮಿ ಕೌರ್​ ಅವರಿಗೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. 2015ರಿಂದ 2017ರವರೆಗೆ ಚಾರ್ಮಿ ಬ್ಯಾಂಕ್​ ಖಾತೆಗಳಲ್ಲಿ ಆಗಿರುವ ಹಣದ ವರ್ಗಾವಣೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಸೆ.8ರಂದು ರಾಣಾ ದಗ್ಗುಬಾಟಿ, ಸೆ.9ರಂದು ರವಿತೇಜ ಕೂಡ ವಿಚಾರಣೆ ಎದುರಿಸಬೇಕಿದೆ.

ಇದು 4 ವರ್ಷ ಹಿಂದಿನ ಪ್ರಕರಣ. 2017ರಲ್ಲಿ ದೊಡ್ಡ ಮಾದಕ ವಸ್ತು ಜಾಲ ಪತ್ತೆ ಆಗಿತ್ತು. ಅದರಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವುದು ಕೂಡ ಕಂಡುಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ 12 ಕೇಸ್​ಗಳನ್ನು ದಾಖಲು ಮಾಡಿಕೊಳ್ಳಲಾಗಿತ್ತು. ಅಕ್ರಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಈಗ ಈ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಕರೆಯಲಾಗಿದೆ.

‘ಇವರೆಲ್ಲರನ್ನು ಆರೋಪಿಗಳು ಎಂದು ಹೇಳಲಾಗಿಲ್ಲ. ಅಕ್ರಮ ಹಣ ವರ್ಗಾವಣೆಯಲ್ಲಿ ಈ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೋ ಇಲ್ಲವೋ ಎಂದು ಈಗಲೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಧ್ಯಮವೊಂದಕ್ಕೆ ಅಧಿಕಾರಿಗಳು ಕೆಲವೇ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದರು. ಈಗ ಒಬ್ಬೊಬ್ಬರನ್ನೇ ಕರೆದು ವಿಚಾರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ:

ಕಾಂಡೋಮ್ ಟೆಸ್ಟರ್ ಪಾತ್ರದಲ್ಲಿ ರಾಕುಲ್​ ಪ್ರೀತ್​ ಸಿಂಗ್​; ಗಿಲ್ಲಿ ಬೆಡಗಿಗೆ ಸಿಕ್ಕಾಪಟ್ಟೆ ಬೋಲ್ಡ್​ ಅವತಾರ

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು