AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​

ಇದೇ ಮೊದಲ ಬಾರಿಗೆ ರಾಕುಲ್​ ಲಾರಿ ಓಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ರಾಕುಲ್​, ನನಗೆ ಡ್ರೈವಿಂಗ್​ ಎಂದರೆ ಇಷ್ಟ. ಆದರೆ, ಎಂದಿಗೂ ಟ್ರಕ್​ ಓಡಿಸಿರಲಿಲ್ಲ ಎಂದಿದ್ದಾರೆ.

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​
ರಾಕುಲ್​ ಪ್ರೀತ್​ ಸಿಂಗ್
ರಾಜೇಶ್ ದುಗ್ಗುಮನೆ
| Edited By: |

Updated on: Apr 23, 2021 | 4:00 PM

Share

ಸಾಮಾನ್ಯವಾಗಿ ಹೀರೋಯಿನ್​ಗಳು ಕಾರಿನಲ್ಲಿ ಲಾಂಗ್​ ಡ್ರೈವ್​ ಹೋಗುತ್ತಾರೆ. ಆದರೆ, ನಟಿ ರಾಕುಲ್​ ಪ್ರೀತ್​ ಅವರು ಅಚ್ಚರಿ ಎಂಬಂತೆ ಟ್ರಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. ಅಷ್ಟಕ್ಕೂ ಅವರು ಲಾರಿ ಏರಿ ಲಾಂಗ್​ ಡ್ರೈವ್​ ಹೋಗಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಕುಲ್​ ಪ್ರೀತ್​ ಸಿಂಗ್​ ಸರ್ದಾರ್​ ಕಾ ಗ್ರ್ಯಾಂಡ್​ಸನ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನೆಟ್​​ಫ್ಲಿಕ್ಸ್​ನಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ರಾಕುಲ್​ ಟ್ರಕ್​ ಡ್ರೈವ್​ ಮಾಡಿದ್ದಾರಂತೆ. ಈ ಸಿನಿಮಾದಲ್ಲಿ ಅರ್ಜುನ್​ ಕಪೂರ್ ಲೀಡ್​ ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಜ್ಜಿಯ ಆಸೆ​ ತೀರಿಸೋಕೆ ಹೊರಡುವ  ಪಂಜಾಬಿ ಹುಡುಗನ​ ಕಥೆಯನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ.

ಇದೇ ಮೊದಲ ಬಾರಿಗೆ ರಾಕುಲ್​ ಲಾರಿ ಓಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ರಾಕುಲ್​, ನನಗೆ ಡ್ರೈವಿಂಗ್​ ಎಂದರೆ ಇಷ್ಟ. ಆದರೆ, ಎಂದಿಗೂ ಟ್ರಕ್​ ಓಡಿಸಿರಲಿಲ್ಲ. ಟ್ರಕ್​ ಓಡಿಸಿದ್ದು ತುಂಬಾನೇ ಫನ್​ ಇಂದ ಕೂಡಿತ್ತು. ಟ್ರಕ್​ ಓಡಿಸೋದು ಅಷ್ಟು ಸುಲಭವಲ್ಲ. ನಾನು ಆತ್ಮವಿಶ್ವಾಸದಿಂದ ಟ್ರಕ್​ ಓಡಿಸಿದೆ ಎಂದು​ ಸಂತಸ ಹಂಚಿಕೊಂಡಿದ್ದಾರೆ.

ನಾನು ಟ್ರಕ್​ ಓಡಿಸುವ ಬಗ್ಗೆ ಅನೇಕರಿಗೆ ಅನುಮಾನವಿತ್ತು. ನಂತರ ನನ್ನ ಡ್ರೈವಿಂಗ್​ ನೋಡಿ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದರು ಎಂದು ಅವರು ಹೇಳಿದ್ದಾರೆ. ಅದಿತಿ ರಾವ್​ ಹೈದರಿ ಮತ್ತು ಕುಮುದಾ ಮಿಶ್ರಾ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇ 18ರಂದು ಸಿನಿಮಾ ತೆರೆಗೆ ಬರುತ್ತಿದೆ.

ಸದ್ಯ ರಾಕುಲ್​ ಕೈನಲ್ಲಿ ಸಾಲು ಸಾಲು ಸಿನಿಮಾಗಳಿವೆ. ತಮಿಳು, ಹಿಂದಿ ಹಾಗೂ ತೆಲುಗು ಈ ಮೂರು ಭಾಷೆಗಳ ಸಿನಿಮಾಗಳಲ್ಲಿ ರಾಕುಲ್​ ನಟಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಕಾರಣದಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲ್ಪಡುತ್ತಿದೆ. ಸಿನಿಮಾ ಕೆಲಸಗಳು ಕೂಡ ಹಿಂದೆ ಬಿದ್ದಿವೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ರಾಕಿಂಗ್ ಸ್ಟಾರ್ ಯಶ್​ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್