AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​

ಇದೇ ಮೊದಲ ಬಾರಿಗೆ ರಾಕುಲ್​ ಲಾರಿ ಓಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ರಾಕುಲ್​, ನನಗೆ ಡ್ರೈವಿಂಗ್​ ಎಂದರೆ ಇಷ್ಟ. ಆದರೆ, ಎಂದಿಗೂ ಟ್ರಕ್​ ಓಡಿಸಿರಲಿಲ್ಲ ಎಂದಿದ್ದಾರೆ.

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​
ರಾಕುಲ್​ ಪ್ರೀತ್​ ಸಿಂಗ್
ರಾಜೇಶ್ ದುಗ್ಗುಮನೆ
| Edited By: |

Updated on: Apr 23, 2021 | 4:00 PM

Share

ಸಾಮಾನ್ಯವಾಗಿ ಹೀರೋಯಿನ್​ಗಳು ಕಾರಿನಲ್ಲಿ ಲಾಂಗ್​ ಡ್ರೈವ್​ ಹೋಗುತ್ತಾರೆ. ಆದರೆ, ನಟಿ ರಾಕುಲ್​ ಪ್ರೀತ್​ ಅವರು ಅಚ್ಚರಿ ಎಂಬಂತೆ ಟ್ರಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. ಅಷ್ಟಕ್ಕೂ ಅವರು ಲಾರಿ ಏರಿ ಲಾಂಗ್​ ಡ್ರೈವ್​ ಹೋಗಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಕುಲ್​ ಪ್ರೀತ್​ ಸಿಂಗ್​ ಸರ್ದಾರ್​ ಕಾ ಗ್ರ್ಯಾಂಡ್​ಸನ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನೆಟ್​​ಫ್ಲಿಕ್ಸ್​ನಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ರಾಕುಲ್​ ಟ್ರಕ್​ ಡ್ರೈವ್​ ಮಾಡಿದ್ದಾರಂತೆ. ಈ ಸಿನಿಮಾದಲ್ಲಿ ಅರ್ಜುನ್​ ಕಪೂರ್ ಲೀಡ್​ ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಜ್ಜಿಯ ಆಸೆ​ ತೀರಿಸೋಕೆ ಹೊರಡುವ  ಪಂಜಾಬಿ ಹುಡುಗನ​ ಕಥೆಯನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ.

ಇದೇ ಮೊದಲ ಬಾರಿಗೆ ರಾಕುಲ್​ ಲಾರಿ ಓಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ರಾಕುಲ್​, ನನಗೆ ಡ್ರೈವಿಂಗ್​ ಎಂದರೆ ಇಷ್ಟ. ಆದರೆ, ಎಂದಿಗೂ ಟ್ರಕ್​ ಓಡಿಸಿರಲಿಲ್ಲ. ಟ್ರಕ್​ ಓಡಿಸಿದ್ದು ತುಂಬಾನೇ ಫನ್​ ಇಂದ ಕೂಡಿತ್ತು. ಟ್ರಕ್​ ಓಡಿಸೋದು ಅಷ್ಟು ಸುಲಭವಲ್ಲ. ನಾನು ಆತ್ಮವಿಶ್ವಾಸದಿಂದ ಟ್ರಕ್​ ಓಡಿಸಿದೆ ಎಂದು​ ಸಂತಸ ಹಂಚಿಕೊಂಡಿದ್ದಾರೆ.

ನಾನು ಟ್ರಕ್​ ಓಡಿಸುವ ಬಗ್ಗೆ ಅನೇಕರಿಗೆ ಅನುಮಾನವಿತ್ತು. ನಂತರ ನನ್ನ ಡ್ರೈವಿಂಗ್​ ನೋಡಿ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದರು ಎಂದು ಅವರು ಹೇಳಿದ್ದಾರೆ. ಅದಿತಿ ರಾವ್​ ಹೈದರಿ ಮತ್ತು ಕುಮುದಾ ಮಿಶ್ರಾ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇ 18ರಂದು ಸಿನಿಮಾ ತೆರೆಗೆ ಬರುತ್ತಿದೆ.

ಸದ್ಯ ರಾಕುಲ್​ ಕೈನಲ್ಲಿ ಸಾಲು ಸಾಲು ಸಿನಿಮಾಗಳಿವೆ. ತಮಿಳು, ಹಿಂದಿ ಹಾಗೂ ತೆಲುಗು ಈ ಮೂರು ಭಾಷೆಗಳ ಸಿನಿಮಾಗಳಲ್ಲಿ ರಾಕುಲ್​ ನಟಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಕಾರಣದಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲ್ಪಡುತ್ತಿದೆ. ಸಿನಿಮಾ ಕೆಲಸಗಳು ಕೂಡ ಹಿಂದೆ ಬಿದ್ದಿವೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ರಾಕಿಂಗ್ ಸ್ಟಾರ್ ಯಶ್​ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?