AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​

ಇದೇ ಮೊದಲ ಬಾರಿಗೆ ರಾಕುಲ್​ ಲಾರಿ ಓಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ರಾಕುಲ್​, ನನಗೆ ಡ್ರೈವಿಂಗ್​ ಎಂದರೆ ಇಷ್ಟ. ಆದರೆ, ಎಂದಿಗೂ ಟ್ರಕ್​ ಓಡಿಸಿರಲಿಲ್ಲ ಎಂದಿದ್ದಾರೆ.

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​
ರಾಕುಲ್​ ಪ್ರೀತ್​ ಸಿಂಗ್
ರಾಜೇಶ್ ದುಗ್ಗುಮನೆ
| Edited By: |

Updated on: Apr 23, 2021 | 4:00 PM

Share

ಸಾಮಾನ್ಯವಾಗಿ ಹೀರೋಯಿನ್​ಗಳು ಕಾರಿನಲ್ಲಿ ಲಾಂಗ್​ ಡ್ರೈವ್​ ಹೋಗುತ್ತಾರೆ. ಆದರೆ, ನಟಿ ರಾಕುಲ್​ ಪ್ರೀತ್​ ಅವರು ಅಚ್ಚರಿ ಎಂಬಂತೆ ಟ್ರಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. ಅಷ್ಟಕ್ಕೂ ಅವರು ಲಾರಿ ಏರಿ ಲಾಂಗ್​ ಡ್ರೈವ್​ ಹೋಗಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಕುಲ್​ ಪ್ರೀತ್​ ಸಿಂಗ್​ ಸರ್ದಾರ್​ ಕಾ ಗ್ರ್ಯಾಂಡ್​ಸನ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನೆಟ್​​ಫ್ಲಿಕ್ಸ್​ನಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ರಾಕುಲ್​ ಟ್ರಕ್​ ಡ್ರೈವ್​ ಮಾಡಿದ್ದಾರಂತೆ. ಈ ಸಿನಿಮಾದಲ್ಲಿ ಅರ್ಜುನ್​ ಕಪೂರ್ ಲೀಡ್​ ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಜ್ಜಿಯ ಆಸೆ​ ತೀರಿಸೋಕೆ ಹೊರಡುವ  ಪಂಜಾಬಿ ಹುಡುಗನ​ ಕಥೆಯನ್ನು ಚಿತ್ರದಲ್ಲಿ ಹೇಳಲಾಗುತ್ತಿದೆ.

ಇದೇ ಮೊದಲ ಬಾರಿಗೆ ರಾಕುಲ್​ ಲಾರಿ ಓಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ರಾಕುಲ್​, ನನಗೆ ಡ್ರೈವಿಂಗ್​ ಎಂದರೆ ಇಷ್ಟ. ಆದರೆ, ಎಂದಿಗೂ ಟ್ರಕ್​ ಓಡಿಸಿರಲಿಲ್ಲ. ಟ್ರಕ್​ ಓಡಿಸಿದ್ದು ತುಂಬಾನೇ ಫನ್​ ಇಂದ ಕೂಡಿತ್ತು. ಟ್ರಕ್​ ಓಡಿಸೋದು ಅಷ್ಟು ಸುಲಭವಲ್ಲ. ನಾನು ಆತ್ಮವಿಶ್ವಾಸದಿಂದ ಟ್ರಕ್​ ಓಡಿಸಿದೆ ಎಂದು​ ಸಂತಸ ಹಂಚಿಕೊಂಡಿದ್ದಾರೆ.

ನಾನು ಟ್ರಕ್​ ಓಡಿಸುವ ಬಗ್ಗೆ ಅನೇಕರಿಗೆ ಅನುಮಾನವಿತ್ತು. ನಂತರ ನನ್ನ ಡ್ರೈವಿಂಗ್​ ನೋಡಿ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದರು ಎಂದು ಅವರು ಹೇಳಿದ್ದಾರೆ. ಅದಿತಿ ರಾವ್​ ಹೈದರಿ ಮತ್ತು ಕುಮುದಾ ಮಿಶ್ರಾ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೇ 18ರಂದು ಸಿನಿಮಾ ತೆರೆಗೆ ಬರುತ್ತಿದೆ.

ಸದ್ಯ ರಾಕುಲ್​ ಕೈನಲ್ಲಿ ಸಾಲು ಸಾಲು ಸಿನಿಮಾಗಳಿವೆ. ತಮಿಳು, ಹಿಂದಿ ಹಾಗೂ ತೆಲುಗು ಈ ಮೂರು ಭಾಷೆಗಳ ಸಿನಿಮಾಗಳಲ್ಲಿ ರಾಕುಲ್​ ನಟಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಕಾರಣದಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲ್ಪಡುತ್ತಿದೆ. ಸಿನಿಮಾ ಕೆಲಸಗಳು ಕೂಡ ಹಿಂದೆ ಬಿದ್ದಿವೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

ರಾಕಿಂಗ್ ಸ್ಟಾರ್ ಯಶ್​ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್