Ram Charan: ರಾಮ್​ ಚರಣ್​ ಜೊತೆ ಕೈ ಜೋಡಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕ; ಇಲ್ಲಿದೆ ಹೊಸ ಸಮಾಚಾರ

Abhishek Agarwal: ಟಾಲಿವುಡ್​ ನಟ ರಾಮ್​ ಚರಣ್​ ಜೊತೆ ಅಭಿಷೇಕ್​ ಅಗರ್​ವಾಲ್​ ಅವರು ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿಬರಲಿದೆ.

Ram Charan: ರಾಮ್​ ಚರಣ್​ ಜೊತೆ ಕೈ ಜೋಡಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕ; ಇಲ್ಲಿದೆ ಹೊಸ ಸಮಾಚಾರ
ಅಭಿಷೇಕ್​ ಅಗರ್​ವಾಲ್​, ರಾಮ್​ ಚರಣ್​
Follow us
|

Updated on: May 27, 2023 | 3:12 PM

2022ರಲ್ಲಿ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಜನರು ಈಗಲೂ ಚರ್ಚೆ ಮಾಡುತ್ತಲೇ ಇದ್ದಾರೆ. ಅಂಥ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ (Abhishek Agarwal) ಅವರು ಈಗ ಬೇರೆ ಬೇರೆ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಸೌತ್​ ಸಿನಿಮಾ ಇಂಡಸ್ಟ್ರಿ ಜೊತೆಗೂ ಅವರು ನಂಟು ಹೊಂದಿದ್ದಾರೆ. ತೆಲುಗಿನ ‘ಕಾರ್ತಿಕೇಯ 2’ ಸಿನಿಮಾವನ್ನು ಅವರು ನಿರ್ಮಿಸಿದ್ದರು. ಈಗ ಟಾಲಿವುಡ್​ ನಟ ರಾಮ್​ ಚರಣ್​ ಜೊತೆ ಅಭಿಷೇಕ್​ ಅಗರ್​ವಾಲ್​ ಅವರು ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿಬರಲಿದೆ. ಹಾಗಂತ ಈ ಸಿನಿಮಾದಲ್ಲಿ ರಾಮ್​ ಚರಣ್​ (Ram Charan) ಅವರು ಹೀರೋ ಆಗಿ ನಟಿಸುವುದಿಲ್ಲ. ಬದಲಿಗೆ ಅವರು ಕೂಡ ನಿರ್ಮಾಪಕನ ಜವಾಬ್ದಾರಿ ನಿಭಾಯಿಸಲಿದ್ದಾರೆ. ಹೌದು, ರಾಮ್​ ಚರಣ್​ ಮತ್ತು ಅಭಿಷೇಕ್​ ಅಗರ್​ವಾಲ್​ ಅವರು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂಬುದು ಲೇಟೆಸ್ಟ್​ ನ್ಯೂಸ್​.

ರಾಮ್ ಚರಣ್ ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ವಿ ಮೆಗಾ ಪಿಕ್ಚರ್ಸ್’ ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿರುವ ಅವರಿಗೆ ಸ್ನೇಹಿತ ‘ಯುವಿ ಕ್ರಿಯೇಷನ್’ನ ವಿಕ್ರಮ್​ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಅವರ ಜೊತೆ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್​’ ಬ್ಯಾನರ್ ಕೂಡ ಕೈ ಜೋಡಿಸುತ್ತಿದೆ. ಈ ಬ್ಯಾನರ್​ ಮತ್ತು ‘ವಿ ಮೆಗಾ ಪಿಕ್ಚರ್ಸ್’ ಜಂಟಿಯಾಗಿ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ಮಾಡಲು ತಯಾರಿ ನಡೆಯುತ್ತಿದೆ. ಈ ಕಾಂಬಿನೇಷನ್​ನಲ್ಲಿ ಬರಲಿರುವ ಚೊಚ್ಚಲ ಸಿನಿಮಾದಲ್ಲಿ ಯುವ ಹೀರೋ ಹಾಗೂ ಹೊಸ ನಿರ್ದೇಶಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಶೀಘ್ರದಲ್ಲಿ ಈ ಪ್ರಾಜೆಕ್ಟ್ ಅನೌನ್ಸ್ ಆಗಲಿದೆ. ವಿಭಿನ್ನ ಕಾಂಟೆಂಟ್ ಅನ್ನು ಪ್ರೇಕ್ಷಕರಿಗೆ ನೀಡಲು ಈ ಎರಡು ಸಂಸ್ಥೆಗಳು ತಯಾರಿ ಮಾಡಿಕೊಂಡಿವೆ.

ಇದನ್ನೂ ಓದಿ: Upasana Konidela: ರಾಮ್​ ಚರಣ್​ ಪತ್ನಿ ಉಪಾಸನಾ ಅದ್ದೂರಿ ಸೀಮಂತ ಸಂಭ್ರಮ; ಅಲ್ಲು ಅರ್ಜುನ್, ಸಾನಿಯಾ ಮಿರ್ಜಾ ಭಾಗಿ

ರಾಮ್​ ಚರಣ್​ ಅವರಿಗೆ ಸಿನಿಮಾ ನಿರ್ಮಾಣದ ಅನುಭವ ಹೊಸದೇನೂ ಅಲ್ಲ. ಈಗಾಗಲೇ ಅವರು ಟಾಲಿವುಡ್​ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಂಪೂರ್ಣ ಹೊಸ ಪ್ರತಿಭೆಗಳಿಗಾಗಿ ವೇದಿಕೆ ಒದಗಿಸಲು ಸಜ್ಜಾಗಿದ್ದಾರೆ. ಈ ಕಾರ್ಯದಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಅಭಿಮಾನಿಗಳು ಮತ್ತು ಹಿತೈಷಿಗಳು ಹಾರೈಸುತ್ತಿದ್ದಾರೆ. ಇದರ ಜೊತೆಗೆ ತಮ್ಮದೇ ಸಿನಿಮಾದ ಕೆಲಸಗಳಲ್ಲಿ ರಾಮ್​ ಚರಣ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: Jr NTR: ರಾಮ್​ ಚರಣ್​ ಬರ್ತ್​ಡೇ ಪಾರ್ಟಿಗೆ ಜೂನಿಯರ್​ ಎನ್​ಟಿಆರ್​ ಯಾಕೆ ಬರಲಿಲ್ಲ? ಇಲ್ಲಿದೆ ಕಾರಣ..

ನಟ ರಾಮ್​ ಚರಣ್​ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಶ್ರೀನಗರದಲ್ಲಿ ನಡೆದ ಜಿ20 ಸಭೆಯಲ್ಲಿ ರಾಮ್​ ಚರಣ್​ ಅವರು ಭಾಗವಹಿಸಿದ್ದರು. ಭಾರತದ ಸಿನಿಮಾ ಮತ್ತು ಸಂಸ್ಕೃತಿ ಬಗ್ಗೆ ಅವರು ಮಾತನಾಡಿದರು. ಜಿ20 ವೇದಿಕೆಯಲ್ಲಿ ರಾಮ್​ ಚರಣ್​ ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಫ್ಯಾನ್ಸ್ ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ರಾಮ್ ಚರಣ್ ಪಕ್ಕಾ ಫ್ಯಾಮಿಲಿಮ್ಯಾನ್. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ. ಒಪ್ಪಿಕೊಂಡ ಚಿತ್ರದ ಕೆಲಸದ ಜೊತೆ ಕುಟುಂಬಕ್ಕೂ ಹೆಚ್ಚು ಸಮಯ ನೀಡುತ್ತಾರೆ. ಈಗ ಅವರು ತಂದೆ ಆಗುತ್ತಿರುವ ಖುಷಿಯಲ್ಲಿದ್ದಾರೆ. ಅವರ ಪತ್ನಿ ಉಪಾಸನಾ ಈಗ ತುಂಬು ಗರ್ಭಿಣಿ. ಅವರ ಕುಟುಂಬದಿಂದ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್