AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ದಕ್ಷಿಣ ಭಾರತದಲ್ಲಿ ಆಲಿಯಾ ಭಟ್​ಗೆ ‘ಆರ್​ಆರ್​ಆರ್’​ ಮೊದಲ ಸಿನಿಮಾ. ಆ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಅವರ ಬಗ್ಗೆ ರಾಮ್​ ಚರಣ್​ ವಿಶೇಷ ಒಲವು ತೋರಿಸುತ್ತಿದ್ದಾರೆ.

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?
ರಾಮ್​ ಚರಣ್​ - ಆಲಿಯಾ ಭಟ್​
Follow us
ಮದನ್​ ಕುಮಾರ್​
|

Updated on: May 23, 2021 | 4:29 PM

ಬಾಲಿವುಡ್​ನಲ್ಲಿ ದೊಡ್ಡ ಸ್ಟಾರ್​ಗಿರಿ ಪಡೆದಿರುವ ನಟಿ ಆಲಿಯಾ ಭಟ್​ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿರುವಾಗಲೇ ಈ 28ರ ಚೆಲುವೆ ಈಗ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಬಹುನಿರೀಕ್ಷಿತ ಆರ್​ಆರ್​ಆರ್​ ಸಿನಿಮಾಗೆ ಅವರು ನಾಯಕಿಯಾಗಿ ನಟಿಸುತ್ತಿರುವುದು ಗೊತ್ತೇ ಇದೆ. ಅವರ ವೃತ್ತಿಜೀವನದಲ್ಲಿ ಈ ಸಿನಿಮಾ ದೊಡ್ಡ ಮೈಲಿಗಲ್ಲು ಆಗಲಿದೆ. ರಾಜಮೌಳಿ ನಿರ್ದೇಶನ ಎಂಬ ಕಾರಣಕ್ಕೆ ಅಷ್ಟು ಹೈಪ್ ಪಡೆದುಕೊಳ್ಳುತ್ತಿದೆ. ಆರ್​ಆರ್​ಆರ್​ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಆಲಿಯಾ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲ, ಮತ್ತೊಂದು ಸಿನಿಮಾದಲ್ಲಿ ರಾಮ್ ಚರಣ್​-ಆಲಿಯಾ ಭಟ್​ ಒಂದಾಗಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ದಕ್ಷಿಣ ಭಾರತದಲ್ಲಿ ಆಲಿಯಾಗೆ ಆರ್​ಆರ್​ಆರ್​ ಮೊದಲ ಸಿನಿಮಾ. ಆ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಅವರ ಬಗ್ಗೆ ರಾಮ್​ ಚರಣ್​ ವಿಶೇಷ ಒಲವು ತೋರಿಸುತ್ತಿದ್ದಾರೆ. ಆಲಿಯಾ ಭಟ್​ ನಟನೆಗೆ ಮನಸೋತಿರುವ ಅವರು ಮತ್ತೊಂದು ಚಿತ್ರಕ್ಕೂ ಈ ಸುಂದರಿಯ ಹೆಸರನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಆರ್​ಆರ್​ಆರ್​ ಬಳಿಕ ಮತ್ತು ಆಲಿಯಾ ಜೊತೆ ಕೆಲಸ ಮಾಡಲು ರಾಮ್​ ಚರಣ್​ ಉತ್ಸಾಹ ತೋರಿಸುತ್ತಿದ್ದಾರಂತೆ.

ಕಾಲಿವುಡ್​ನ ಸ್ಟಾರ್​ ನಿರ್ದೇಶಕ ಶಂಕರ್​ ಜೊತೆಗೆ ರಾಮ್​ ಚರಣ್​ ಸಿನಿಮಾ ಮಾಡಲಿದ್ದಾರೆ. 5 ಭಾಷೆಯಲ್ಲಿ ಮೂಡಿಬರಲಿರುವ ಆ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹೂಡಲಿದ್ದಾರೆ. ಆ ಸಿನಿಮಾದಲ್ಲಿ ಆಲಿಯಾ ಭಟ್​ ನಾಯಕಿಯಾದರೆ ಉತ್ತಮ ಎಂಬ ಅಭಿಪ್ರಾಯ ರಾಮ್​ ಚರಣ್​ ಅವರಿಂದ ವ್ಯಕ್ತವಾಗಿದೆ. ಹಾಗಾಗಿ ಅವರು ನಿರ್ದೇಶಕ ಶಂಕರ್​ಗೆ ಆಲಿಯಾ ಹೆಸರನ್ನು ಸೂಚಿಸಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡದಿಂದ ಯಾವುದೇ ಹೇಳಿಕೆ ಹೊರಬಿದ್ದಿಲ್ಲ.

ಕೊರೊನಾ ವೈರಸ್​ ಲಾಕ್​ಡೌನ್​ ಕಾರಣದಿಂದ ಆರ್​ಆರ್​ಆರ್​ ಸಿನಿಮಾ ಕೆಲಸಗಳು ಸ್ಥಗಿತಗೊಂಡಿವೆ. ಈ ಸಿನಿಮಾದಲ್ಲಿ ನಟಿಸುತ್ತಿರುವ ನಟ ಜ್ಯೂ. ಎನ್​ಟಿಆರ್​ ಅವರಿಗೆ ಕೊವಿಡ್ ಪಾಸಿಟಿವ್​ ಆಗಿದೆ. ಕ್ವಾರಂಟೈನ್​ ಆಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಿನಿಮಾದ ಡಿಜಿಟಲ್​ ಪ್ರಸಾರ ಹಕ್ಕುಗಳನ್ನು ಜೀ5 ಬರೋಬ್ಬರಿ 325 ಕೋಟಿ ರೂ.ಗಳಿಗೆ ಖರೀದಿಸಿದೆ ಎಂಬ ಸುದ್ದಿ ಕೇಳಿಬಂದಿದೆ. ಆ ಬಗ್ಗೆ ಚಿತ್ರತಂಡ ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ.

ಇದನ್ನೂ ಓದಿ:

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

ರಣಬೀರ್​-ಆಲಿಯಾಗೆ ಕೂಡಿ ಬರುತ್ತಿಲ್ಲ ಕಂಕಣ ಭಾಗ್ಯ; ಚಿಂತೆಗೊಳಗಾದ ಕುಟುಂಬದವರು

ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್