AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ದಕ್ಷಿಣ ಭಾರತದಲ್ಲಿ ಆಲಿಯಾ ಭಟ್​ಗೆ ‘ಆರ್​ಆರ್​ಆರ್’​ ಮೊದಲ ಸಿನಿಮಾ. ಆ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಅವರ ಬಗ್ಗೆ ರಾಮ್​ ಚರಣ್​ ವಿಶೇಷ ಒಲವು ತೋರಿಸುತ್ತಿದ್ದಾರೆ.

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?
ರಾಮ್​ ಚರಣ್​ - ಆಲಿಯಾ ಭಟ್​
ಮದನ್​ ಕುಮಾರ್​
|

Updated on: May 23, 2021 | 4:29 PM

Share

ಬಾಲಿವುಡ್​ನಲ್ಲಿ ದೊಡ್ಡ ಸ್ಟಾರ್​ಗಿರಿ ಪಡೆದಿರುವ ನಟಿ ಆಲಿಯಾ ಭಟ್​ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿರುವಾಗಲೇ ಈ 28ರ ಚೆಲುವೆ ಈಗ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಬಹುನಿರೀಕ್ಷಿತ ಆರ್​ಆರ್​ಆರ್​ ಸಿನಿಮಾಗೆ ಅವರು ನಾಯಕಿಯಾಗಿ ನಟಿಸುತ್ತಿರುವುದು ಗೊತ್ತೇ ಇದೆ. ಅವರ ವೃತ್ತಿಜೀವನದಲ್ಲಿ ಈ ಸಿನಿಮಾ ದೊಡ್ಡ ಮೈಲಿಗಲ್ಲು ಆಗಲಿದೆ. ರಾಜಮೌಳಿ ನಿರ್ದೇಶನ ಎಂಬ ಕಾರಣಕ್ಕೆ ಅಷ್ಟು ಹೈಪ್ ಪಡೆದುಕೊಳ್ಳುತ್ತಿದೆ. ಆರ್​ಆರ್​ಆರ್​ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಆಲಿಯಾ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲ, ಮತ್ತೊಂದು ಸಿನಿಮಾದಲ್ಲಿ ರಾಮ್ ಚರಣ್​-ಆಲಿಯಾ ಭಟ್​ ಒಂದಾಗಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ದಕ್ಷಿಣ ಭಾರತದಲ್ಲಿ ಆಲಿಯಾಗೆ ಆರ್​ಆರ್​ಆರ್​ ಮೊದಲ ಸಿನಿಮಾ. ಆ ಮೂಲಕ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಅವರ ಬಗ್ಗೆ ರಾಮ್​ ಚರಣ್​ ವಿಶೇಷ ಒಲವು ತೋರಿಸುತ್ತಿದ್ದಾರೆ. ಆಲಿಯಾ ಭಟ್​ ನಟನೆಗೆ ಮನಸೋತಿರುವ ಅವರು ಮತ್ತೊಂದು ಚಿತ್ರಕ್ಕೂ ಈ ಸುಂದರಿಯ ಹೆಸರನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಆರ್​ಆರ್​ಆರ್​ ಬಳಿಕ ಮತ್ತು ಆಲಿಯಾ ಜೊತೆ ಕೆಲಸ ಮಾಡಲು ರಾಮ್​ ಚರಣ್​ ಉತ್ಸಾಹ ತೋರಿಸುತ್ತಿದ್ದಾರಂತೆ.

ಕಾಲಿವುಡ್​ನ ಸ್ಟಾರ್​ ನಿರ್ದೇಶಕ ಶಂಕರ್​ ಜೊತೆಗೆ ರಾಮ್​ ಚರಣ್​ ಸಿನಿಮಾ ಮಾಡಲಿದ್ದಾರೆ. 5 ಭಾಷೆಯಲ್ಲಿ ಮೂಡಿಬರಲಿರುವ ಆ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹೂಡಲಿದ್ದಾರೆ. ಆ ಸಿನಿಮಾದಲ್ಲಿ ಆಲಿಯಾ ಭಟ್​ ನಾಯಕಿಯಾದರೆ ಉತ್ತಮ ಎಂಬ ಅಭಿಪ್ರಾಯ ರಾಮ್​ ಚರಣ್​ ಅವರಿಂದ ವ್ಯಕ್ತವಾಗಿದೆ. ಹಾಗಾಗಿ ಅವರು ನಿರ್ದೇಶಕ ಶಂಕರ್​ಗೆ ಆಲಿಯಾ ಹೆಸರನ್ನು ಸೂಚಿಸಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡದಿಂದ ಯಾವುದೇ ಹೇಳಿಕೆ ಹೊರಬಿದ್ದಿಲ್ಲ.

ಕೊರೊನಾ ವೈರಸ್​ ಲಾಕ್​ಡೌನ್​ ಕಾರಣದಿಂದ ಆರ್​ಆರ್​ಆರ್​ ಸಿನಿಮಾ ಕೆಲಸಗಳು ಸ್ಥಗಿತಗೊಂಡಿವೆ. ಈ ಸಿನಿಮಾದಲ್ಲಿ ನಟಿಸುತ್ತಿರುವ ನಟ ಜ್ಯೂ. ಎನ್​ಟಿಆರ್​ ಅವರಿಗೆ ಕೊವಿಡ್ ಪಾಸಿಟಿವ್​ ಆಗಿದೆ. ಕ್ವಾರಂಟೈನ್​ ಆಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಿನಿಮಾದ ಡಿಜಿಟಲ್​ ಪ್ರಸಾರ ಹಕ್ಕುಗಳನ್ನು ಜೀ5 ಬರೋಬ್ಬರಿ 325 ಕೋಟಿ ರೂ.ಗಳಿಗೆ ಖರೀದಿಸಿದೆ ಎಂಬ ಸುದ್ದಿ ಕೇಳಿಬಂದಿದೆ. ಆ ಬಗ್ಗೆ ಚಿತ್ರತಂಡ ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ.

ಇದನ್ನೂ ಓದಿ:

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

ರಣಬೀರ್​-ಆಲಿಯಾಗೆ ಕೂಡಿ ಬರುತ್ತಿಲ್ಲ ಕಂಕಣ ಭಾಗ್ಯ; ಚಿಂತೆಗೊಳಗಾದ ಕುಟುಂಬದವರು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!