AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳ ಅವಧಿಯಲ್ಲಿ ರಾಮ್​ ಚರಣ್​ ನಟನೆಯ ಎರಡು ಬಿಗ್​ ಬಜೆಟ್​ ಸಿನಿಮಾ ರಿಲೀಸ್​

ರಾಮ್​ ಚರಣ್​ ನಟನೆಯ ‘ಆರ್​ಆರ್​ಆರ್​’ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಬೆನ್ನಲ್ಲೇ ‘ಆಚಾರ್ಯ’ ತೆರೆಗೆ ಬರಲಿದೆ. ಈ ಬಗ್ಗೆ ‘ಆಚಾರ್ಯ’ ಚಿತ್ರತಂಡದಿಂದ ಇಂದು ಘೋಷಣೆ ಆಗಿದೆ.

ತಿಂಗಳ ಅವಧಿಯಲ್ಲಿ ರಾಮ್​ ಚರಣ್​ ನಟನೆಯ ಎರಡು ಬಿಗ್​ ಬಜೆಟ್​ ಸಿನಿಮಾ ರಿಲೀಸ್​
ರಾಮ್​ ಚರಣ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 19, 2021 | 5:54 PM

Share

ರಾಮ್​ ಚರಣ್​ ಸದ್ಯ ಎರಡು ದೊಡ್ಡ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ರಾಮ್​ ಚರಣ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜತೆಗೆ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿಯೂ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಫಸ್ಟ್​ ಪೋಸ್ಟರ್​ ರಿಲೀಸ್​ ಆಗಿ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ವಿಶೇಷ ಎಂದರೆ ಒಂದೇ ತಿಂಗಳಲ್ಲಿ ರಾಮ್​ ಚರಣ್​ ನಟನೆಯ ಎರಡೆರಡು ದೊಡ್ಡ ಬಜೆಟ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ.

ರಾಮ್​ ಚರಣ್​ ನಟನೆಯ ‘ಆರ್​ಆರ್​ಆರ್​’ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಬೆನ್ನಲ್ಲೇ ‘ಆಚಾರ್ಯ’ ತೆರೆಗೆ ಬರಲಿದೆ. ಈ ಬಗ್ಗೆ ‘ಆಚಾರ್ಯ’ ಚಿತ್ರತಂಡದಿಂದ ಇಂದು ಘೋಷಣೆ ಆಗಿದೆ. ಫೆಬ್ರವರಿ 4ರಂದು ಆಚಾರ್ಯ ತೆರೆಗೆ ಬರುತ್ತಿದೆ. ಈ ವಿಚಾರ ಕೇಳಿ ರಾಮ್​ ಚರಣ್​ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

ಆಚಾರ್ಯ ಹೆಸರಿನ ಪಾತ್ರದಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಶೂಟಿಂಗ್ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಕೊವಿಡ್​ ಅಬ್ಬರ ಕಡಿಮೆ ಆದ ನಂತರದಲ್ಲಿ ವೇಗವಾಗಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಲಾಗಿದೆ.

ವಿದ್ಯಾರ್ಥಿಗಳ ನಾಯಕ ಸಿದ್ಧ ಹೆಸರಿನ ಪಾತ್ರದಲ್ಲಿ ರಾಮ್​ ಚರಣ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ರಾಮ್​ ಚರಣ್​ ಈ ಚಿತ್ರದಲ್ಲಿ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಇದೊಂದು ಅತಿಥಿ ಪಾತ್ರ. ಆದಾಗ್ಯೂ ಈ ಪಾತ್ರ ಪ್ರಾಮುಖ್ಯತೆ ಪಡೆದುಕೊಳ್ಳಲಿದೆಯಂತೆ. ‘ಆರ್​ಆರ್​ಆರ್’​ ಚಿತ್ರದಲ್ಲಿ ರಾಮ್​ ಚರಣ್​ ಅವರು ಅಲ್ಲುರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ಡಬ್​ ಆಗಿ ಜನವರಿ 7ರಂದು ತೆರೆ ಕಾಣುತ್ತಿದೆ.

ಇದನ್ನೂ ಓದಿ: RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ರಣವೀರ್​ ಸಿಂಗ್​ಗೆ ಮನೆಯಲ್ಲೇ ಬಿರಿಯಾನಿ ಮಾಡಿ ಬಡಿಸಿದ ರಾಮ್​ ಚರಣ್​; ಕಾರಣ ಏನು?

ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ