AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಅಮಿತ್ ಶಾ ಭೇಟಿಯಾದ ರಾಮ್ ಚರಣ್, ಚಿರಂಜೀವಿ

ನಟ ರಾಮ್ ಚರಣ್ ಹಾಗೂ ಅವರ ತಂದೆ, ನಟ ಚಿರಂಜೀವಿ ಅವರುಗಳು ದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

Ram Charan: ಅಮಿತ್ ಶಾ ಭೇಟಿಯಾದ ರಾಮ್ ಚರಣ್, ಚಿರಂಜೀವಿ
ಅಮಿತ್ ಶಾ ಭೇಟಿಯಾದ ರಾಮ್ ಚರಣ್-ಚಿರಂಜೀವಿ
ಮಂಜುನಾಥ ಸಿ.
|

Updated on:Mar 17, 2023 | 10:59 PM

Share

ನಟ ರಾಮ್ ಚರಣ್ ತೇಜ ತಮ್ಮ ತಂದೆ, ನಟ ಚಿರಂಜೀವಿಯೊಟ್ಟಿಗೆ ಇಂದು (ಮಾರ್ಚ್ 17) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ರಾಮ್ ಚರಣ್ ಹಾಗೂ ಚಿರಂಜೀವಿ ಇಬ್ಬರು ಅಮಿತ್ ಶಾ ಅವರಿಗೆ ರೇಶ್ಮೆ ಶಾಲು ಹೊದಿಸಿ ಸನ್ಮಾನಿಸಿದ್ದಾರೆ. ಇದೇ ವೇಳೆ ಸಚಿವ ಅಮಿತ್ ಶಾ ಅವರು ಆರ್​ಆರ್​ಆರ್ ಸಿನಿಮಾದ ನಾಟು-ನಾಟು ಹಾಡಿಗೆ ಆಸ್ಕರ್ ದೊರಕಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಮ್ ಚರಣ್ ಹಾಗೂ ಚಿರಂಜೀವಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಆಸ್ಕರ್ ಪ್ರಶಸ್ತಿ ಬಂದ ಖುಷಿಯನ್ನು ಹಂಚಿಕೊಳ್ಳಲೆಂದು ರಾಮ್ ಚರಣ್ ಹಾಗೂ ಚಿರಂಜೀವಿ ಅವರು ಮೋದಿ ಹಾಗೂ ಶಾ ಅವರನ್ನು ಭೇಟಿಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಜೂ ಎನ್​ಟಿಆರ್ ಅವರು ರಾಜಕೀಯ ಕಾರಣಗಳಿಗಾಗಿ ಈ ಭೇಟಿಯಿಂದ ದೂರ ಉಳಿದಿರುವ ಸಾಧ್ಯತೆ ಇದೆ. ನಾಟು-ನಾಟು ಹಾಡಿಗೆ ಆಸ್ಕರ್ ಬಂದಾಗ ಅಮಿತ್ ಶಾ ಹಾಗೂ ಮೋದಿ ಅವರುಗಳು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದರು.

ಆರ್​ಆರ್​ಆರ್ ಸಿನಿಮಾದ ನಾಟು-ನಾಟು ಹಾಡು ಆಸ್ಕರ್ ಗೆದ್ದಾಗ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದು ಅಮಿತ್ ಶಾ, ”ಆಸ್ಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ‘ನಾಟು ನಾಟು’ ಹಾಡು ಇತಿಹಾಸವನ್ನು ಸೃಷ್ಟಿಸಿದೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಗ್ಗುರುತಿನ ದಿನ. ಈ ಹಾಡು ಭಾರತೀಯರು ಮಾತ್ರವೇ ಅಲ್ಲದೆ ಪ್ರಪಂಚದಾದ್ಯಂತದ ಸಂಗೀತ ಪ್ರೇಮಿಗಳ ಬಾಯಲ್ಲಿದೆ” ಎಂದಿದ್ದರು. ಇಂದು ರಾಮ್ ಚರಣ್-ಚಿರಂಜೀವಿ ಭೇಟಿಯ ಕುರಿತಾಗಿ ತೆಲುಗಿನಲ್ಲಿ ಟ್ವೀಟ್ ಮಾಡಿರುವ ಅಮಿತ್ ಶಾ, ”ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ರಾಮ್ ಚರಣ್ ಹಾಗೂ ಚಿರಂಜೀವಿ ಅವರನ್ನು ಭೇಟಿಯಾಗಿದ್ದು ಬಹಳ ಸಂತಸ ತಂದಿದೆ. ತೆಲುಗು ಚಿತ್ರರಂಗವು ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಾತ್ರವೇ ಅಲ್ಲದೆ ಭಾರತೀಯ ಆರ್ಥಿಕ ವ್ಯವಸ್ಥೆಗೆ ಯೋಗದಾನ ನೀಡುವಲ್ಲಿ ಮಹತ್ವದ ಪಾತ್ರವಹಿಸಿದೆ. ನಾಟು-ನಾಟು ಹಾಡಿಗೆ ಆಸ್ಕರ್ ಬಂದಿದ್ದರ ಕುರಿತು ಹಾಗೂ ಆರ್​ಆರ್​ಆರ್ ಸಿನಿಮಾದ ಅದ್ಭುತ ವಿಜಯ ಸಾಧಿಸಿದ್ದಕ್ಕೆ ರಾಮ್ ಚರಣ್ ಅವರನ್ನು ಅಭಿನಂದಿಸಿದ್ದೇನೆ” ಎಂದಿದ್ದಾರೆ.

ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪತ್ನಿಯೊಟ್ಟಿಗೆ ತೆರಳಿದ್ದ ರಾಮ್ ಚರಣ್ ಕೆಲವು ದಿನಗಳ ಹಿಂದಷ್ಟೆ ಮರಳಿ ಬಂದಿದ್ದು, ತಾವು ನಟಿಸಿದ ಸಿನಿಮಾವು ಆಸ್ಕರ್ ಪಡೆದಿರುವುದನ್ನು ಭರ್ಜರಿಯಾಗಿ ಎಂಜಾಯ್ ಮಾಡುತ್ತಿದ್ದಾರೆ. ಆಸ್ಕರ್ ಆಫ್ಟರ್ ಪಾರ್ಟಿಯಲ್ಲಿ ಭಾಗವಹಿಸಿದ್ದು ಮಾತ್ರವೇ ಅಲ್ಲದೆ, ಅಮೆರಿಕದಲ್ಲಿ ತಾವು ತಂಗಿದ್ದ ಮನೆಯಲ್ಲಿಯೂ ಭರ್ಜರಿ ಪಾರ್ಟಿಯನ್ನು ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ಆಯೋಜನೆ ಮಾಡಿದ್ದರು. ಇದೀಗ ಭಾರತಕ್ಕೆ ಬಂದಮೇಲೂ ಆ ಸಂತಸವನ್ನು ಸೆಲೆಬ್ರೇಟ್ ಮಾಡುತ್ತಿದ್ದಾರೆ.

Published On - 10:59 pm, Fri, 17 March 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು