AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಗೆಟಪ್​ನಲ್ಲಿ ರಾಮ್​ ಚರಣ್​; ‘ಆಚಾರ್ಯ’ ಟ್ರೇಲರ್​ಗೆ ಮೆಚ್ಚುಗೆ

Acharya Trailer: ಪಾತ್ರವರ್ಗದಲ್ಲಿ ಚಿರಂಜೀವಿ, ರಾಮ್​ ಚರಣ್​, ಪೂಜಾ ಹೆಗ್ಡೆ, ಸೋನು ಸೂದ್​ ಜತೆಗೆ ಕಾಜಲ್​ ಅಗರ್​ವಾಲ್ ಕೂಡ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಮತ್ತೊಂದು ಗೆಟಪ್​ನಲ್ಲಿ ರಾಮ್​ ಚರಣ್​; ‘ಆಚಾರ್ಯ’ ಟ್ರೇಲರ್​ಗೆ ಮೆಚ್ಚುಗೆ
ರಾಮ್ ಚರಣ್-
TV9 Web
| Edited By: |

Updated on:Apr 12, 2022 | 7:34 PM

Share

ಮಾರ್ಚ್​ 25ರಂದು ತೆರೆಗೆ ಬಂದಿದ್ದ ‘ಆರ್​ಆರ್​ಆರ್’ ಸಿನಿಮಾದಲ್ಲಿ (RRR Movie)  ಪೊಲೀಸ್ ಅಧಿಕಾರಿಯಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರು ರಾಮ್​ ಚರಣ್ (Ram Charan). ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ತನ್ನ ನಾಗಾಲೋಟವನ್ನು ಮುಂದುವರಿಸುತ್ತಲೇ ಇದೆ. ಹೀಗಿರುವಾಗಲೇ ರಾಮ್ ಚರಣ್ ಅಭಿನಯದ ‘ಆಚಾರ್ಯ’ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಈ ಚಿತ್ರದ ಟ್ರೇಲರ್ (Acharya Trailer) ಇಂದು (ಏಪ್ರಿಲ್ 12) ರಿಲೀಸ್ ಆಗಿದ್ದು, ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ರಾಮ್​ ಚರಣ್ ತಂದೆ ಚಿರಂಜೀವಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಪೂಜಾ ಹೆಗ್ಡೆ ಮಿಂಚಿದ್ದಾರೆ. ಈ ಸಿನಿಮಾ ಏಪ್ರಿಲ್ 29ರಂದು ತೆರೆಗೆ ಬರುತ್ತಿದೆ.

ಒಂದು ಕಡೆ ಕಾಡು ಹಾಗೂ ಮತ್ತೊಂದು ಕಡೆ ನದಿ. ಈ ಕಾಡಿನ ಮಧ್ಯೆ ವಾಸವಾಗಿರುತ್ತಾನೆ ಕಥಾ ನಾಯಕ. ಆ ಊರಿನವರು ಕಷ್ಟ ಬಂದರೆ ಅಲ್ಲಿರುವ ದೇವಿಯ ಮೊರೆ ಹೋಗುತ್ತಾರೆ. ಕೆಟ್ಟವರು ಬಂದರೆ ಅವರ ನಾಶ ಖಂಡಿತ. ಇಂತಹ ಊರಿನಲ್ಲಿ ಅರಾಜಕತೆ ನಡೆಯೋಕೆ ಶುರುವಾಗುತ್ತದೆ. ಆಗ ಚಿರಂಜೀವಿ ಎಂಟ್ರಿ ಆಗುತ್ತದೆ. ಸೋನು ಸೂದ್ ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ರಾಮ್​ ಚರಣ್ ಹಾಗೂ ಚಿರಂಜೀವಿ ಸಖತ್​ ಆ್ಯಕ್ಷನ್​ನಲ್ಲಿ ಮಿಂಚಿದ್ದಾರೆ. ಟ್ರೇಲರ್​ನಲ್ಲಿ ಪೂಜಾ ಹೆಗ್ಡೆ ಒಂದು ದೃಶ್ಯಕ್ಕೆ ಮಾತ್ರ ಸೀಮಿತವಾಗಿದ್ದಾರೆ.

ಪೂಜಾ ಹೆಗ್ಡೆಗೆ ಈ ಸಿನಿಮಾ ವಿಶೇಷವಾಗಿದೆ. ಕಳೆದ ತಿಂಗಳು ಅವರ ನಟನೆಯ ‘ರಾಧೆ ಶ್ಯಾಮ್​’ ತೆರೆಗೆ ಬಂದಿತ್ತು. ಬುಧವಾರ (ಮಾರ್ಚ್ 13​) ‘ಬೀಸ್ಟ್​’ ತೆರೆಗೆ ಬರುತ್ತಿದೆ. ಇದಾದ ಬಳಿಕ ‘ಆಚಾರ್ಯ’ ಸಿನಿಮಾ ತೆರೆಗೆ ಬರುತ್ತಿದೆ. ಎರಡು ತಿಂಗಳ ಅವಧಿಯಲ್ಲಿ ಅವರ ನಟನೆಯ ಮೂರು ಸಿನಿಮಾಗಳು ರಿಲೀಸ್ ಆಗುತ್ತಿವೆ. ಮುಂಬರುವ ಎರಡು ಚಿತ್ರಗಳ ಪೈಕಿ ಯಾವ ಸಿನಿಮಾ ಪೂಜಾಗೆ ಯಶಸ್ಸು ತಂದುಕೊಡಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಪಾತ್ರವರ್ಗದಲ್ಲಿ ಚಿರಂಜೀವಿ, ರಾಮ್​ ಚರಣ್​, ಪೂಜಾ ಹೆಗ್ಡೆ, ಸೋನು ಸೂದ್​ ಜತೆಗೆ ಕಾಜಲ್​ ಅಗರ್​ವಾಲ್ ಕೂಡ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಮಣಿ ಶರ್ಮಾ ಸಂಗೀತ ನಿರ್ದೇಶನ ಮಾಡಿದ್ದಾರೆ.  ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಫೆಬ್ರವರಿ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ‘ಹೂ ಅಂತೀಯಾ ಮಾವ..’ ರೀತಿ ಹವಾ ಸೃಷ್ಟಿಸಲು ಹೋಗಿ ವಿವಾದ ಹುಟ್ಟು ಹಾಕಿದ ‘ಆಚಾರ್ಯ’ ಸಿನಿಮಾ ಐಟಂ ಸಾಂಗ್​

ನಟ ರಾಮ್ ಚರಣ್ ಪತ್ನಿ ಉಪಾಸನಾಗೆ ಕೋಳಿ ಕರಿ ಮಾಡೋದನ್ನ ಹೇಳಿಕೊಟ್ಟ ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ

Published On - 7:32 pm, Tue, 12 April 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ