AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಜಪಾನ್​ನಲ್ಲಿ ಮೊದಲ ದಿನವೇ 1 ಕೋಟಿ ರೂಪಾಯಿ ಗಳಿಸಿದ ‘ಆರ್​ಆರ್​ಆರ್​’: ಜೋರಾಗಿದೆ ಕ್ರೇಜ್​

RRR Japan Box Office Collections: ‘ಆರ್​ಆರ್​ಆರ್​’ ಚಿತ್ರದಲ್ಲಿನ ಕಲಾವಿದರ ನಟನೆಯನ್ನು ಜಪಾನ್​ ಮಂದಿ ಮೆಚ್ಚಿಕೊಂಡಿದ್ದಾರೆ. ರಾಜಮೌಳಿ ಅವರ ಕೆಲಸಕ್ಕೆ ಅಲ್ಲಿನ ಪ್ರೇಕ್ಷಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

RRR: ಜಪಾನ್​ನಲ್ಲಿ ಮೊದಲ ದಿನವೇ 1 ಕೋಟಿ ರೂಪಾಯಿ ಗಳಿಸಿದ ‘ಆರ್​ಆರ್​ಆರ್​’: ಜೋರಾಗಿದೆ ಕ್ರೇಜ್​
ರಾಮ್ ಚರಣ್​, ಜೂನಿಯರ್ ಎನ್​ಟಿಆರ್​
TV9 Web
| Edited By: |

Updated on: Oct 22, 2022 | 10:52 PM

Share

ಖ್ಯಾತ ನಿರ್ದೇಶಕ ರಾಜಮೌಳಿ ಅವರ ಬತ್ತಳಿಕೆಯಿಂದ ಬಂದ ‘ಆರ್​ಆರ್​ಆರ್​’ (RRR) ಸಿನಿಮಾ ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿರುವ ಈ ಸಿನಿಮಾ ಈಗ ಜಪಾನ್​ನಲ್ಲಿ (Japan) ಬಿಡುಗಡೆ ಆಗಿದೆ. ಅಲ್ಲಿಯೂ ಈ ಚಿತ್ರ ಬಂಗಾರದ ಬೆಳೆ ತೆಗೆಯುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಮೂಲಗಳ ಪ್ರಕಾರ ಮೊದಲ ದಿನವೇ ‘ಆರ್​ಆರ್​ಆರ್​’ ಚಿತ್ರ ಒಂದು ಕೋಟಿ ರೂಪಾಯಿ ಕಲೆಕ್ಷನ್​ (Box Office Collections) ಮಾಡಿದೆ. ಜಪಾನ್​ನಲ್ಲಿ ಈ ಚಿತ್ರಕ್ಕೆ ಬಾಯಿ ಮಾತಿನ ಪ್ರಚಾರ ಭರ್ಜರಿಯಾಗಿ ಸಿಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಹಾಗೂ ಆಲಿಯಾ ಭಟ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ರಾಜಮೌಳಿ ಅವರ ಸಿನಿಮಾಗಳು ಹಾಲಿವುಡ್​ ಗುಣಮಟ್ಟದಲ್ಲಿ ಇರುತ್ತವೆ. ಹಾಗಾಗಿ ಅವರ ಸಿನಿಮಾಗಳಿಗೆ ವಿಶ್ವಾದ್ಯಂತ ಪ್ರೇಕ್ಷಕರು ಇದ್ದಾರೆ. ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರಿಗೆ ಜಪಾನ್​ನಲ್ಲೂ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಆದ್ದರಿಂದ ‘ಆರ್​ಆರ್​ಆರ್’ ಚಿತ್ರಕ್ಕೆ ಅಲ್ಲಿ ಭರ್ಜರಿ ಓಪನಿಂಗ್​ ಸಿಕ್ಕಿದೆ.

ಅಕ್ಟೋಬರ್​ 21ರಂದು ಜಪಾನ್​ನಲ್ಲಿ ‘ಆರ್​ಆರ್​ಆರ್’ ಸಿನಿಮಾವನ್ನು ರಿಲೀಸ್​ ಮಾಡಲಾಗಿದೆ. ಇದರ ಸಲುವಾಗಿ ರಾಜಮೌಳಿ, ಜೂನಿಯರ್​ ಎನ್​ಟಿಆರ್​ ಹಾಗೂ ರಾಮ್​ ಚರಣ್​ ಅವರು ಜಪಾನ್​ಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಅಲ್ಲಿನ ಪ್ರಮುಖ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಜೊತೆಗೆ ಅಭಿಮಾನಿಗಳನ್ನು ಕೂಡ ಭೇಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ತಮ್ಮ ನೆಚ್ಚಿನ ನಟರನ್ನು ನೋಡಿ ಜಪಾನ್​ನಲ್ಲಿ ಇರುವ ಅಭಿಮಾನಿಗಳು ಎಮೋಷನಲ್​ ಆಗುತ್ತಿದ್ದಾರೆ. ಅದರ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಈ ಸಿನಿಮಾ ಜಪಾನ್​ನಲ್ಲಿ ಮಾಡುವ ಗಳಿಕೆಯನ್ನೂ ಸೇರಿಸಿದರೆ ಒಟ್ಟು ಕಲೆಕ್ಷನ್​ ಹೆಚ್ಚಾಗಲಿದೆ. ಅಂತಿಮವಾಗಿ ಎಷ್ಟು ಗಳಿಕೆ ಮಾಡಬಹುದು ಎಂಬ ಕೌತುಕ ನಿರ್ಮಾಣ ಆಗಿದೆ. ಮೊದಲ ವಾರವೇ ಅಂದಾಜು 3 ಕೋಟಿ ರೂಪಾಯಿ ಕಮಾಯಿ ಆಗಬಹುದು ಎಂಬ ನಿರೀಕ್ಷೆ ಇದೆ.

ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಕಾಲ್ಪನಿಕ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಕೊಮರಮ್​ ಭೀಮ್​ ಪಾತ್ರದಲ್ಲಿ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರವನ್ನು ರಾಮ್​ ಚರಣ್​ ನಿಭಾಯಿಸಿದ್ದಾರೆ. ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಜಪಾನ್​ನಲ್ಲಿನ ಅಭಿಮಾನಿಗಳು ಈ ಕಲಾವಿದರ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ರಾಜಮೌಳಿ ಅವರ ಕೆಲಸಕ್ಕೆ ಅಲ್ಲಿನ ಪ್ರೇಕ್ಷಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್