AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ

RRR Movie | Oscar Awards: ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಒಂದು ಕಾಲ್ಪನಿಕ ಕಥೆಯನ್ನು ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ ಹೇಳಿದ್ದಾರೆ. ಅದ್ದೂರಿ ಮೇಕಿಂಗ್​ನಿಂದಾಗಿ ಈ ಸಿನಿಮಾ ಗಮನ ಸೆಳೆದಿದೆ.

RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ
ಜ್ಯೂ. ಎನ್​ಟಿಆರ್
TV9 Web
| Edited By: |

Updated on:Jul 19, 2022 | 9:55 AM

Share

ತೆಲುಗಿನ ‘ಆರ್​ಆರ್​ಆರ್​’ (RRR Movie) ಸಿನಿಮಾವನ್ನು ಜನರು ಮೆಚ್ಚಿಕೊಂಡರು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಭರ್ಜರಿ ಕಮಾಯಿ ಆಯಿತು. ರಾಮ್​ ಚರಣ್​ ಹಾಗೂ ಜ್ಯೂ. ಎನ್​ಟಿಆರ್​ ವೃತ್ತಿಬದುಕಿಗೆ ದೊಡ್ಡ ಮೈಲೇಜ್​ ಸಿಕ್ಕಿತು. ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ಸೋಲಿಲ್ಲದ ಸರದಾರ ಎಂಬುದು ಮತ್ತೊಮ್ಮೆ ಸಾಬೀತಾಯಿತು. ಇಷ್ಟೆಲ್ಲ ಖ್ಯಾತಿ ಗಳಿಸಿದ ‘ಆರ್​ಆರ್​ಆರ್​’ ಸಿನಿಮಾ ಬಗ್ಗೆ ಈಗ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ (Oscar Awards) ಸಿಗುವ ಸಾಧ್ಯತೆ ಇದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹಾಲಿವುಡ್​ನ ಅನೇಕ ನಿರ್ದೇಶಕರು ‘ಆರ್​ಆರ್​ಆರ್’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಹಾಗಾಗಿ ಈ ಸಿನಿಮಾ ಆಸ್ಕರ್​ ಪ್ರಶಸ್ತಿ ಗೆಲ್ಲಲಿ ಎಂಬ ಹಂಬಲ ಫ್ಯಾನ್ಸ್​ ಮನದಲ್ಲಿ ಹುಟ್ಟಿಕೊಂಡಿದೆ.

ಇದುವರೆಗೂ ಭಾರತದ ಯಾವುದೇ ಸಿನಿಮಾ ಆಸ್ಕರ್​ ಪ್ರಶಸ್ತಿ ಗೆದ್ದಿಲ್ಲ. ಪ್ರತಿ ಬಾರಿಯೂ ಭಾರತದಿಂದ ಒಂದು ಚಿತ್ರವನ್ನು ಆಸ್ಕರ್​ ಪ್ರಶಸ್ತಿ ಕಣದ ‘ವಿದೇಶಿ ಭಾಷಾ ಚಿತ್ರ’ ವಿಭಾಗಕ್ಕೆ ಕಳಿಸಲಾಗುತ್ತದೆ. 2023ರ ಆಸ್ಕರ್​ ಸ್ಪರ್ಧೆಗೆ ಭಾರತದಿಂದ ‘ಆರ್​ಆರ್​ಆರ್​’ ಸಿನಿಮಾವನ್ನು ಕಳಿಸಿದರೆ ಖಂಡಿತವಾಗಿಯೂ ಪ್ರಶಸ್ತಿ ಒಲಿಯುತ್ತದೆ ಎಂಬುದು ಕೆಲವರ ಅಭಿಪ್ರಾಯ. ಈ ಕುರಿತು ಜಾಗತಿಕ ಮಟ್ಟದಲ್ಲಿ ಕೆಲವು ಮಾಧ್ಯಮಗಳು ಕೂಡ ಲೇಖನ ಪ್ರಕಟಿಸಿವೆ. ಆ ಬಳಿಕವೇ ಚರ್ಚೆ ಜೋರಾಗಿದೆ.

ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಒಂದು ಕಾಲ್ಪನಿಕ ಕಥೆಯನ್ನು ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ ಹೇಳಿದ್ದಾರೆ. ಕೊಮರಾಮ್​ ಭೀಮ್​ ಎಂಬ ಪಾತ್ರವನ್ನು ಜ್ಯೂ. ಎನ್​ಟಿಆರ್​ ಮಾಡಿದ್ದಾರೆ. ಅಲ್ಲುರಿ ಸೀತಾರಾಮಾ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಅವರಿಗೆ ಜೋಡಿಯಾಗಿ ಬಾಲಿವುಡ್​ ನಟಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಅಜಯ್​ ದೇವಗನ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದ್ದೂರಿ ಮೇಕಿಂಗ್​ನಿಂದಾಗಿ ಈ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಆಸ್ಕರ್​ ಪ್ರಶಸ್ತಿ ಗೆಲ್ಲಬೇಕು ಎಂದರೆ ಒಂದಷ್ಟು ನಿಯಮಗಳನ್ನು ಪಾಲಿಸಲೇಬೇಕಾಗುತ್ತದೆ. ಆ ನಿಯಮಗಳ ಅನುಸಾರ ತಯಾರಾದ ಚಿತ್ರವನ್ನು ಆಯ್ಕೆ ಮಾಡಿ ಭಾರತದಿಂದ ಒಂದು ಸಿನಿಮಾವನ್ನು ಕಳಿಸಲಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಸಮಿತಿ ಕೂಡ ರಚನೆ ಆಗುತ್ತದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕೂಡ ಹಲವು ಕಾರಣಗಳಿಗಾಗಿ ಗಮನ ಸೆಳೆದಿದೆ. ಈ ಚಿತ್ರಕ್ಕೂ ಆಸ್ಕರ್​ ಗೆಲ್ಲುವ ಸಾಮರ್ಥ್ಯ ಇದೆ ಎಂದು ಅಭಿಮಾನಿಗಳು ಹೇಳುತ್ತಿದ್ದರು.

Published On - 8:59 am, Tue, 19 July 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್