AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್

ತೆಲುಗು ನಟ ರಾಮ್ ಚರಣ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ 'ಪೆದ್ದಿ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಸಂದರ್ಭದಲ್ಲಿ ಇವರಿಬ್ಬರ ವೈರಲ್ ಫೋಟೋ ಚಿರಂಜೀವಿ ಮತ್ತು ಡಾ. ರಾಜ್‌ಕುಮಾರ್ ಕುಟುಂಬಗಳ ಹಳೆಯ ಸ್ನೇಹವನ್ನು ಮರುಕಳಿಸಿದೆ. ಫ್ಯಾನ್ಸ್ ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್
ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 30, 2026 | 11:54 AM

Share

ತೆಲುಗು ನಟ ರಾಮ್ ಚರಣ್ ಮತ್ತು ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ, ಬುಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದೆ. ಸ್ಪೋರ್ಟ್ಸ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಜಗಪತಿ ಬಾಬು ಹಾಗೂ ಕನ್ನಡದ ಹಿರಿಯ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಯೂಟ್ಯೂಬ್‌ನಲ್ಲಿ ವೈರಲ್ ಆಗಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಜೂನ್ 4 ರಂದು ಸಿನಿಮಾ ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ.

ಚಿತ್ರದ ಬಿಡುಗಡೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ದೇಶದ ಹಲವು ಪ್ರಮುಖ ನಗರಗಳಲ್ಲಿ ಸರಣಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಪ್ರಚಾರದ ಸಂದರ್ಭದಲ್ಲಿ ರಾಮ್ ಚರಣ್ ಮತ್ತು ಶಿವರಾಜ್ ಕುಮಾರ್ ಒಟ್ಟಿಗೆ ಇರುವ ಇತ್ತೀಚಿನ ಫೋಟೋವೊಂದು ಈಗ ಎಲ್ಲರ ಗಮನ ಸೆಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ಡಾ. ರಾಜ್‌ಕುಮಾರ್ ಅವರ ಕಾಲದ ಹಳೆಯ ನೆನಪುಗಳನ್ನು ಮತ್ತು ಉಭಯ ಕುಟುಂಬಗಳ ನಡುವಿನ ಆತ್ಮೀಯ ಬಾಂಧವ್ಯವನ್ನು ಮತ್ತೊಮ್ಮೆ ಮರುಕಳಿಸುವಂತೆ ಮಾಡಿದೆ.

ಆರಂಭದಿಂದಲೂ ಚಿರಂಜೀವಿ ಮತ್ತು ಡಾ. ರಾಜ್‌ಕುಮಾರ್ ಕುಟುಂಬಗಳ ನಡುವೆ ಉತ್ತಮ ಸ್ನೇಹವಿತ್ತು. ಹಿಂದೆ ರಾಜ್‌ಕುಮಾರ್ ಕುಟುಂಬದ ಸ್ವಂತ ನಿರ್ಮಾಣ ಸಂಸ್ಥೆಯಾದ ‘ಶ್ರೀ ವಜ್ರೇಶ್ವರಿ ಕಂಬೈನ್ಸ್’ನ ಬೆಳ್ಳಿ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ಚಿರಂಜೀವಿ ಹಾಗೂ ರಾಜ್‌ಕುಮಾರ್ ಅವರು ಅತ್ಯಂತ ಆತ್ಮೀಯವಾಗಿ ಭೇಟಿಯಾಗಿದ್ದರು.

ಈಗ ‘ಪೆದ್ದಿ’ ಚಿತ್ರದ ಪ್ರಚಾರದ ಸಂದರ್ಶನವೊಂದರಲ್ಲಿ ನಿರೂಪಕರು ಅಂದಿನ ಆ ಹಳೆಯ ಅಪರೂಪದ ಫೋಟೋವನ್ನು ತೋರಿಸಿ, ಅದನ್ನು ಮರುಸೃಷ್ಟಿಸುವಂತೆ ವಿನಂತಿಸಿದರು. ತಕ್ಷಣವೇ ಶಿವಣ್ಣ ಅವರು ರಾಮ್ ಚರಣ್ ಅವರನ್ನು ಅಪ್ಪಿಕೊಂಡು ಅಕ್ಕರೆ ವ್ಯಕ್ತಪಡಿಸುವ ಮೂಲಕ ಅಂದಿನ ತಂದೆಯರ ಸ್ನೇಹದ ಕ್ಷಣವನ್ನು ಮರುಸೃಷ್ಟಿಸಿದರು.

ಇದನ್ನೂ ಓದಿ: ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ

ಈ ಚಿತ್ರದ ಮೂಲಕ ಮತ್ತೊಂದು ಕಾಕತಾಳೀಯ ಹಾಗೂ ವಿಶೇಷ ಸಂಗತಿಯೂ ಬೆಳಕಿಗೆ ಬಂದಿದೆ. ಜಾನ್ವಿ ಕಪೂರ್ ಅವರ ತಾಯಿ, ದಿವಂಗತ ನಟಿ ಶ್ರೀದೇವಿ ಅವರು 1974ರಲ್ಲಿ ಡಾ. ರಾಜ್‌ಕುಮಾರ್ ನಟನೆಯ ಸೂಪರ್ ಹಿಟ್ ‘ಭಕ್ತ ಕುಂಬಾರ’ ಚಿತ್ರದಲ್ಲಿ ಬಾಲನಟಿಯಾಗಿ ನಟಿಸಿದ್ದರು. ಇಂದು ಶಿವರಾಜ್ ಕುಮಾರ್ ಹಾಗೂ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ‘ಪೆದ್ದಿ’ ಚಿತ್ರದ ಮೂಲಕ ಒಟ್ಟಾಗಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More