AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ

ಈ ವಿಚಾರ ಮೆಗಾ ಕುಟುಂಬದ ಖುಷಿಯನ್ನು ಹೆಚ್ಚಿಸಿದೆ. ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ.

Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ
ರಾಮ್​ ಚರಣ್​, ಉಪಾಸನಾ, ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on:Jun 20, 2023 | 7:07 AM

Share

ರಾಮ್ ಚರಣ್ ಹಾಗೂ ಉಪಾಸನಾ (Upasana) ಇತ್ತೀಚೆಗಷ್ಟೇ 11ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈಗ ಇವರ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನ ಆಗಿದೆ. ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಮೆಗಾ ಕುಟುಂಬದ ಖುಷಿಯನ್ನು ಹೆಚ್ಚಿಸಿದೆ. ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ. ಮಂಗಳವಾರ (ಜೂನ್ 20) ಬೆಳಗ್ಗೆ ಈ ಖುಷಿಯ ಸುದ್ದಿ ಹೊರ ಬಿದ್ದಿದೆ.

ಉಪಾಸನಾ ಅವರನ್ನು ಸೋಮವಾರ (ಜೂನ್ 19) ರಾತ್ರಿ ಹೈದರಾಬಾದ್​ನ ಜುಬ್ಲಿ ಹಿಲ್ಸ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ ಉಪಾಸನಾಗೆ ಮಗು ಜನಿಸಿದ ವಿಚಾರವನ್ನು ಆಸ್ಪತ್ರೆಯವರು ಖಚಿತಪಡಿಸಿದ್ದಾರೆ. ಮಗುವಿನ ಮುಖ ನೋಡಲು ಅಭಿಮಾನಿಗಳು ಕಾದಿದ್ದಾರೆ.

ರಾಮ್​ ಚರಣ್​ ಮತ್ತು ಉಪಾಸನಾ ಅವರು 2012ರ ಜೂನ್​ 14ರಂದು ಮದುವೆ ಆದರು. ಮದುವೆ ಆಗಿ ದಶಕಗಳ ಬಳಿಕ ಅವರು ಮೊದಲ ಮಗು ಪಡೆಯಲು ನಿರ್ಧರಿಸಿದ್ದರು. ಈಗ ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಇವರಿಗೆ ಶುಭಾಶಯ ಬರುತ್ತಿದೆ.

ಇದನ್ನೂ ಓದಿ: Ram Charan: ರಾಮ್​ ಚರಣ್​-ಉಪಾಸನಾ ದಾಂಪತ್ಯಕ್ಕೆ 11 ವರ್ಷಗಳ ಸಂಭ್ರಮ; ಚಿರಂಜೀವಿ ವಿಶ್​ ಮಾಡಿದ್ದು ಹೇಗೆ?

ರಾಮ್ ಚರಣ್​ಗೆ ಈ ವರ್ಷ ಖುಷಿಯ ಮೇಲೆ ಖುಷಿಯ ಸುದ್ದಿ ಸಿಗುತ್ತಿದೆ. ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡು ಸೂಪರ್ ಹಿಟ್ ಆಯಿತು. ಆಸ್ಕರ್ ಅವಾರ್ಡ್ ಕೂಡ ಪಡೆಯಿತು. ಈಗ ಮನೆಗೆ ಮಗಳ ಆಗಮನ ಆಗಿದೆ. ರಾಮ್ ಚರಣ್ ತಂದೆ ಚಿರಂಜೀವಿ ತಾತ ಆಗಿದ್ದಾರೆ. ಅವರಿಗೂ ಈ ವಿಚಾರ ಖುಷಿ ನೀಡಿದೆ.

ರಾಮ್​ ಚರಣ್​ ಅವರು ‘ಆರ್​ಆರ್​ಆರ್​’ ಚಿತ್ರ ಗೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಉಪಾಸನಾ ಕೊನಿಡೆಲಾ ಪ್ರೆಗ್ನೆಂಟ್​ ಎಂಬ ವಿಚಾರವನ್ನು ಕಳೆದ ಡಿಸೆಂಬರ್​ನಲ್ಲಿ ತಿಳಿಸಲಾಗಿತ್ತು. ಈ ನಡುವೆ ಒಂದು ಗಾಸಿಪ್​ ಹಬ್ಬಿತ್ತು. ಉಪಾಸನಾ-ರಾಮ್​ ಚರಣ್​ ದಂಪತಿಯ ಮಗು ಅಮೆರಿಕದಲ್ಲಿ ಜನಿಸಲಿದೆ ಎಂದು ಕೆಲವು ಕಡೆ ವರದಿ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪಾಸನಾ ಅವರು ಸ್ಪಷ್ಟನೆ ಕೊಟ್ಟಿದ್ದರು. ಭಾರತದಲ್ಲಿಯೇ ತಾವು ಮಗುವಿಗೆ ಜನ್ಮ ನೀಡುವುದಾಗಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:47 am, Tue, 20 June 23

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?