AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ

ಈ ವಿಚಾರ ಮೆಗಾ ಕುಟುಂಬದ ಖುಷಿಯನ್ನು ಹೆಚ್ಚಿಸಿದೆ. ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ.

Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ
ರಾಮ್​ ಚರಣ್​, ಉಪಾಸನಾ, ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on:Jun 20, 2023 | 7:07 AM

Share

ರಾಮ್ ಚರಣ್ ಹಾಗೂ ಉಪಾಸನಾ (Upasana) ಇತ್ತೀಚೆಗಷ್ಟೇ 11ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈಗ ಇವರ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನ ಆಗಿದೆ. ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಮೆಗಾ ಕುಟುಂಬದ ಖುಷಿಯನ್ನು ಹೆಚ್ಚಿಸಿದೆ. ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ. ಮಂಗಳವಾರ (ಜೂನ್ 20) ಬೆಳಗ್ಗೆ ಈ ಖುಷಿಯ ಸುದ್ದಿ ಹೊರ ಬಿದ್ದಿದೆ.

ಉಪಾಸನಾ ಅವರನ್ನು ಸೋಮವಾರ (ಜೂನ್ 19) ರಾತ್ರಿ ಹೈದರಾಬಾದ್​ನ ಜುಬ್ಲಿ ಹಿಲ್ಸ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ ಉಪಾಸನಾಗೆ ಮಗು ಜನಿಸಿದ ವಿಚಾರವನ್ನು ಆಸ್ಪತ್ರೆಯವರು ಖಚಿತಪಡಿಸಿದ್ದಾರೆ. ಮಗುವಿನ ಮುಖ ನೋಡಲು ಅಭಿಮಾನಿಗಳು ಕಾದಿದ್ದಾರೆ.

ರಾಮ್​ ಚರಣ್​ ಮತ್ತು ಉಪಾಸನಾ ಅವರು 2012ರ ಜೂನ್​ 14ರಂದು ಮದುವೆ ಆದರು. ಮದುವೆ ಆಗಿ ದಶಕಗಳ ಬಳಿಕ ಅವರು ಮೊದಲ ಮಗು ಪಡೆಯಲು ನಿರ್ಧರಿಸಿದ್ದರು. ಈಗ ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಇವರಿಗೆ ಶುಭಾಶಯ ಬರುತ್ತಿದೆ.

ಇದನ್ನೂ ಓದಿ: Ram Charan: ರಾಮ್​ ಚರಣ್​-ಉಪಾಸನಾ ದಾಂಪತ್ಯಕ್ಕೆ 11 ವರ್ಷಗಳ ಸಂಭ್ರಮ; ಚಿರಂಜೀವಿ ವಿಶ್​ ಮಾಡಿದ್ದು ಹೇಗೆ?

ರಾಮ್ ಚರಣ್​ಗೆ ಈ ವರ್ಷ ಖುಷಿಯ ಮೇಲೆ ಖುಷಿಯ ಸುದ್ದಿ ಸಿಗುತ್ತಿದೆ. ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡು ಸೂಪರ್ ಹಿಟ್ ಆಯಿತು. ಆಸ್ಕರ್ ಅವಾರ್ಡ್ ಕೂಡ ಪಡೆಯಿತು. ಈಗ ಮನೆಗೆ ಮಗಳ ಆಗಮನ ಆಗಿದೆ. ರಾಮ್ ಚರಣ್ ತಂದೆ ಚಿರಂಜೀವಿ ತಾತ ಆಗಿದ್ದಾರೆ. ಅವರಿಗೂ ಈ ವಿಚಾರ ಖುಷಿ ನೀಡಿದೆ.

ರಾಮ್​ ಚರಣ್​ ಅವರು ‘ಆರ್​ಆರ್​ಆರ್​’ ಚಿತ್ರ ಗೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಉಪಾಸನಾ ಕೊನಿಡೆಲಾ ಪ್ರೆಗ್ನೆಂಟ್​ ಎಂಬ ವಿಚಾರವನ್ನು ಕಳೆದ ಡಿಸೆಂಬರ್​ನಲ್ಲಿ ತಿಳಿಸಲಾಗಿತ್ತು. ಈ ನಡುವೆ ಒಂದು ಗಾಸಿಪ್​ ಹಬ್ಬಿತ್ತು. ಉಪಾಸನಾ-ರಾಮ್​ ಚರಣ್​ ದಂಪತಿಯ ಮಗು ಅಮೆರಿಕದಲ್ಲಿ ಜನಿಸಲಿದೆ ಎಂದು ಕೆಲವು ಕಡೆ ವರದಿ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪಾಸನಾ ಅವರು ಸ್ಪಷ್ಟನೆ ಕೊಟ್ಟಿದ್ದರು. ಭಾರತದಲ್ಲಿಯೇ ತಾವು ಮಗುವಿಗೆ ಜನ್ಮ ನೀಡುವುದಾಗಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:47 am, Tue, 20 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ