AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ

ಈ ವಿಚಾರ ಮೆಗಾ ಕುಟುಂಬದ ಖುಷಿಯನ್ನು ಹೆಚ್ಚಿಸಿದೆ. ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ.

Ram Charan: ಹೆಣ್ಣು ಮಗುವಿಗೆ ತಾಯಿಯಾದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ
ರಾಮ್​ ಚರಣ್​, ಉಪಾಸನಾ, ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on:Jun 20, 2023 | 7:07 AM

Share

ರಾಮ್ ಚರಣ್ ಹಾಗೂ ಉಪಾಸನಾ (Upasana) ಇತ್ತೀಚೆಗಷ್ಟೇ 11ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈಗ ಇವರ ಕುಟುಂಬಕ್ಕೆ ಹೊಸ ಸದಸ್ಯೆಯ ಆಗಮನ ಆಗಿದೆ. ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಮೆಗಾ ಕುಟುಂಬದ ಖುಷಿಯನ್ನು ಹೆಚ್ಚಿಸಿದೆ. ಇವರ ಅಭಿಮಾನಿಗಳು ಖುಷಿಯಲ್ಲಿ ಸಂಭ್ರಮಿಸಿದ್ದಾರೆ. ಮಂಗಳವಾರ (ಜೂನ್ 20) ಬೆಳಗ್ಗೆ ಈ ಖುಷಿಯ ಸುದ್ದಿ ಹೊರ ಬಿದ್ದಿದೆ.

ಉಪಾಸನಾ ಅವರನ್ನು ಸೋಮವಾರ (ಜೂನ್ 19) ರಾತ್ರಿ ಹೈದರಾಬಾದ್​ನ ಜುಬ್ಲಿ ಹಿಲ್ಸ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ ಉಪಾಸನಾಗೆ ಮಗು ಜನಿಸಿದ ವಿಚಾರವನ್ನು ಆಸ್ಪತ್ರೆಯವರು ಖಚಿತಪಡಿಸಿದ್ದಾರೆ. ಮಗುವಿನ ಮುಖ ನೋಡಲು ಅಭಿಮಾನಿಗಳು ಕಾದಿದ್ದಾರೆ.

ರಾಮ್​ ಚರಣ್​ ಮತ್ತು ಉಪಾಸನಾ ಅವರು 2012ರ ಜೂನ್​ 14ರಂದು ಮದುವೆ ಆದರು. ಮದುವೆ ಆಗಿ ದಶಕಗಳ ಬಳಿಕ ಅವರು ಮೊದಲ ಮಗು ಪಡೆಯಲು ನಿರ್ಧರಿಸಿದ್ದರು. ಈಗ ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಇವರಿಗೆ ಶುಭಾಶಯ ಬರುತ್ತಿದೆ.

ಇದನ್ನೂ ಓದಿ: Ram Charan: ರಾಮ್​ ಚರಣ್​-ಉಪಾಸನಾ ದಾಂಪತ್ಯಕ್ಕೆ 11 ವರ್ಷಗಳ ಸಂಭ್ರಮ; ಚಿರಂಜೀವಿ ವಿಶ್​ ಮಾಡಿದ್ದು ಹೇಗೆ?

ರಾಮ್ ಚರಣ್​ಗೆ ಈ ವರ್ಷ ಖುಷಿಯ ಮೇಲೆ ಖುಷಿಯ ಸುದ್ದಿ ಸಿಗುತ್ತಿದೆ. ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡು ಸೂಪರ್ ಹಿಟ್ ಆಯಿತು. ಆಸ್ಕರ್ ಅವಾರ್ಡ್ ಕೂಡ ಪಡೆಯಿತು. ಈಗ ಮನೆಗೆ ಮಗಳ ಆಗಮನ ಆಗಿದೆ. ರಾಮ್ ಚರಣ್ ತಂದೆ ಚಿರಂಜೀವಿ ತಾತ ಆಗಿದ್ದಾರೆ. ಅವರಿಗೂ ಈ ವಿಚಾರ ಖುಷಿ ನೀಡಿದೆ.

ರಾಮ್​ ಚರಣ್​ ಅವರು ‘ಆರ್​ಆರ್​ಆರ್​’ ಚಿತ್ರ ಗೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಉಪಾಸನಾ ಕೊನಿಡೆಲಾ ಪ್ರೆಗ್ನೆಂಟ್​ ಎಂಬ ವಿಚಾರವನ್ನು ಕಳೆದ ಡಿಸೆಂಬರ್​ನಲ್ಲಿ ತಿಳಿಸಲಾಗಿತ್ತು. ಈ ನಡುವೆ ಒಂದು ಗಾಸಿಪ್​ ಹಬ್ಬಿತ್ತು. ಉಪಾಸನಾ-ರಾಮ್​ ಚರಣ್​ ದಂಪತಿಯ ಮಗು ಅಮೆರಿಕದಲ್ಲಿ ಜನಿಸಲಿದೆ ಎಂದು ಕೆಲವು ಕಡೆ ವರದಿ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪಾಸನಾ ಅವರು ಸ್ಪಷ್ಟನೆ ಕೊಟ್ಟಿದ್ದರು. ಭಾರತದಲ್ಲಿಯೇ ತಾವು ಮಗುವಿಗೆ ಜನ್ಮ ನೀಡುವುದಾಗಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:47 am, Tue, 20 June 23

Follow Us
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ