AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಬಗ್ಗೆ ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡ ನಟ ರಾಮ್ ಚರಣ್

Ram Charan about Dhurandhar: ‘ಆರ್​​ಆರ್​​ಆರ್’ ಬಳಿಕ ಸತತ ಸೋಲಿನಿಂದ ಕಂಗೆಟ್ಟಿದ್ದ ನಟ ರಾಮ್ ಚರಣ್, ‘ಪೆದ್ದಿ’ ಸಿನಿಮಾ ಮೂಲಕ ಗೆಲುವು ಸಾಧಿಸಿದ್ದಾರೆ. ಆದರೆ ಇತ್ತೀಚೆಗೆ ರಾಮ್ ಚರಣ್, ತಮ್ಮ ಮಾತುಗಳಿಂದ ಟ್ರೋಲ್​​ಗೆ ಗುರಿ ಆಗುತ್ತಿದ್ದಾರೆ. ‘ಪೆದ್ದಿ’ ಪ್ರಚಾರದ ಸಮಯದಲ್ಲಿ ಜಸ್ಪೀತ್ ಬುಮ್ರಾ ಅವರನ್ನು ಫುಟ್​​ಬಾಲರ್ ಎಂದು ಹೇಳಿ ಟ್ರೋಲ್ ಆಗಿದ್ದರು. ಈಗ ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿ ಮತ್ತೊಮ್ಮೆ ಟ್ರೋಲ್ ಆಗಿದ್ದಾರೆ.

‘ಧುರಂಧರ್ 2’ ಬಗ್ಗೆ ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡ ನಟ ರಾಮ್ ಚರಣ್
Ram Charan Dhurandhar
ಮಂಜುನಾಥ ಸಿ.
|

Updated on: Jun 23, 2026 | 5:07 PM

Share

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಮೂರು ವಾರದ ಹಿಂದೆ ಬಿಡುಗಡೆ ಆಗಿದ್ದು ಹಿಟ್ ಎನಿಸಿಕೊಂಡಿದೆ. ಬಿಡುಗಡೆ ಆದ 18 ದಿನಗಳಲ್ಲಿ ಸುಮಾರು 350 ಕೋಟಿಗೂ ಹೆಚ್ಚು ಮೊತ್ತವನ್ನು ಈ ಸಿನಿಮಾ ಗಳಿಕೆ ಮಾಡಿದೆ. ‘ಆರ್​​ಆರ್​​ಆರ್’ ಬಳಿಕ ಸತತ ಸೋಲಿನಿಂದ ಕಂಗೆಟ್ಟಿದ್ದ ನಟ ರಾಮ್ ಚರಣ್, ‘ಪೆದ್ದಿ’ ಸಿನಿಮಾ ಮೂಲಕ ಗೆಲುವು ಸಾಧಿಸಿದ್ದಾರೆ. ಆದರೆ ಇತ್ತೀಚೆಗೆ ರಾಮ್ ಚರಣ್, ತಮ್ಮ ಮಾತುಗಳಿಂದ ಟ್ರೋಲ್​​ಗೆ ಗುರಿ ಆಗುತ್ತಿದ್ದಾರೆ. ‘ಪೆದ್ದಿ’ ಪ್ರಚಾರದ ಸಮಯದಲ್ಲಿ ಜಸ್ಪೀತ್ ಬುಮ್ರಾ ಅವರನ್ನು ಫುಟ್​​ಬಾಲರ್ ಎಂದು ಹೇಳಿ ಟ್ರೋಲ್ ಆಗಿದ್ದರು. ಈಗ ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿ ಮತ್ತೊಮ್ಮೆ ಟ್ರೋಲ್ ಆಗಿದ್ದಾರೆ.

ಇತ್ತೀಚೆಗಷ್ಟೆ ನಟ ರಾಮ್ ಚರಣ್, ಮಾಧ್ಯಮವೊಂದು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸಿನಿಮಾಗಳ ಬಗ್ಗೆ, ಸಿನಿಮಾಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಮಾತನಾಡಿದರು. ಇದೇ ಸಂವಾದದಲ್ಲಿ ‘ಧುರಂಧರ್’ ಸಿನಿಮಾದ ಬಗ್ಗೆಯೂ ಚರ್ಚೆಯಾಯ್ತು, ಈ ವೇಳೆ ನಟ ರಾಮ್ ಚರಣ್, ‘ನಾನು ಕಳೆದ ವಾರವಷ್ಟೆ ಒಟಿಟಿಯಲ್ಲಿ ‘ಧುರಂಧರ್’ ಸಿನಿಮಾ ನೋಡಿದೆ. ಅದೊಂದು ಬಹಳ ಅದ್ಭುತವಾದ ಸಿನಿಮಾ, ಆ ಸಿನಿಮಾನಲ್ಲಿ, ಎಲ್ಲ ವಿಷಯಗಳು ಸರಿಯಾಗಿ ಒದಗಿ ಬಂದಿವೆ’ ಎಂದರು.

ಆದರೆ ರಾಮ್ ಚರಣ್, ‘ಧುರಂಧರ್ 2’ ಸಿನಿಮಾ ಬಿಡುಗಡೆ ಆದ ಮರುದಿನವೇ (ಮಾರ್ಚ್ 20) ಸಿನಿಮಾ ಬಗ್ಗೆ ಟ್ವೀಟ್ ಮಾಡಿ, ಸಿನಿಮಾವನ್ನು ಕೊಂಡಾಡಿದ್ದರು. ಖುದ್ದು ಸಿನಿಮಾ ನೋಡಿ ಬರೆದವರಂತೆ ವಿಮರ್ಶೆ ಸಹ ಬರೆದಿದ್ದರು. ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಅವರ ಕ್ರಿಯಾಶೀಲತೆಯನ್ನು, ರಣ್ವೀರ್ ಸಿಂಗ್ ಅವರ ನಟನೆಯನ್ನು ಕೊಂಡಾಡಿದ್ದರು. ರಾಮ್ ಚರಣ್ ಟ್ವೀಟ್ ನೋಡಿದವರು, ನಟ ಸಿನಿಮಾ ನೋಡಿ ಟ್ವೀಟ್ ಮಾಡಿದ್ದಾರೆ ಎಂದುಕೊಂಡಿದ್ದರು. ಆದರೆ ಈಗ ರಾಮ್ ಚರಣ್, ತಾವು ಇತ್ತೀಚೆಗಷ್ಟೆ ಒಟಿಟಿಯಲ್ಲಿ ಸಿನಿಮಾ ನೋಡಿದೆ ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ರಾಮ್ ಚರಣ್ ಟ್ರೋಲ್ ಆಗುತ್ತಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡೋದು ಯಾವಾಗ?

ಆದರೆ ರಾಮ್ ಚರಣ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಬೆಂಬಲಕ್ಕೆ ಬಂದಿದ್ದು, ‘ರಾಮ್ ಚರಣ್ ಅವರು ಎರಡನೇ ಬಾರಿಗೆ ಒಟಿಟಿಯಲ್ಲಿ ನೋಡಿದ್ದಾರೆ. ಹಾಗಾಗಿ ಅವರು ಸಂವಾದದಲ್ಲಿ ಹಾಗೆ ಹೇಳಿದ್ದಾರೆ ಎಂದಿದ್ದಾರೆ. ಏನೇ ಆಗಲಿ, ರಾಮ್ ಚರಣ್ ಮತ್ತೊಮ್ಮೆ ತಮ್ಮ ಮಾತಿನಿಂದಾಗಿ ಟ್ರೋಲ್ ಆಗುತ್ತಿದ್ದಾರೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ರಾಮ್ ಚರಣ್ ಅವರು ಸುಕುಮಾರ್ ಅವರೊಟ್ಟಿಗೆ ಸಿನಿಮಾ ಮಾಡಲಿದ್ದಾರೆ. ಇನ್ನೆರಡು ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಸುಕುಮಾರ್ ಜೊತೆಗೆ ಇದು ಅವರ ಎರಡನೇ ಸಿನಿಮಾ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್