AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾಮ್​ ಚರಣ್​ಗೆ ಗೌರವ ಡಾಕ್ಟರೇಟ್​; ಹಿರಿ ಹಿರಿ ಹಿಗ್ಗಿದ ಅಭಿಮಾನಿಗಳು

ನಟ ರಾಮ್​ ಚರಣ್​ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು 2007ರಲ್ಲಿ. ಅಂದಿನಿಂದ ಇಂದಿನವರೆಗೆ ಅವರ ಸಾಧನೆ ಅಪಾರ. ಈಗಾಗಲೇ ಅನೇಕ ಪ್ರಶಸ್ತಿಗಳು ಅವರಿಗೆ ಸಿಕ್ಕಿವೆ. ಈಗ ರಾಮ್​ ಚರಣ್​ ಅವರ ಮುಡಿಗೆ ಗೌರವ ಡಾಕ್ಟರೇಟ್​ ಮೂಲಕ ಹೊಸ ಗರಿ ಸೇರ್ಪಡೆಯಾಗುತ್ತಿದೆ. ಫ್ಯಾನ್ಸ್​ ಈಗ ಅವರನ್ನು ‘ಡಾ.​ ರಾಮ್​ ಚರಣ್​’ ಎಂದು ಕರೆಯಲು ಪ್ರಾರಂಭಿಸಿದ್ದಾರೆ.

ನಟ ರಾಮ್​ ಚರಣ್​ಗೆ ಗೌರವ ಡಾಕ್ಟರೇಟ್​; ಹಿರಿ ಹಿರಿ ಹಿಗ್ಗಿದ ಅಭಿಮಾನಿಗಳು
ರಾಮ್​ ಚರಣ್
ಮದನ್​ ಕುಮಾರ್​
|

Updated on: Apr 12, 2024 | 2:43 PM

Share

ಟಾಲಿವುಡ್​ ನಟ ರಾಮ್​ ಚರಣ್​ (Ram Charan) ಅವರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್​ ನೀಡಲಾಗುತ್ತಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಸಖತ್​ ಸಂತಸ ಆಗಿದೆ. ಏಪ್ರಿಲ್​ 13ರಂದು ಚೆನ್ನೈನ ವೇಲ್ಸ್​ ಯೂನಿವರ್ಸಿಟಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರಿಗೆ ಗೌರವ ಡಾಕ್ಟರೇಟ್​ (Honorary Doctorate) ಪ್ರದಾನ ಮಾಡಲಾಗುತ್ತಿದೆ. ಸೋಶಿಯಲ್​ ಮೀಡಿಯಾ ಮೂಲಕ ರಾಮ್​ ಚರಣ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ. ಅಭಿಮಾನಿಗಳಂತೂ ಈಗಲೇ ‘ಡಾಕ್ಟರ್​ ರಾಮ್​ ಚರಣ್​’ (Dr Ram Charan) ಎಂದು ಕರೆಯಲು ಆರಂಭಿಸಿದ್ದಾರೆ.

ರಾಮ್​ ಚರಣ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2007ರಲ್ಲಿ. ಅವರ ಮೊದಲ ಸಿನಿಮಾ ‘ಚಿರುತ’. ಅಂದಿನಿಂದ ಇಂದಿನ ತನಕ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈಗಾಗಲೇ ಹಲವು ಪ್ರಶಸ್ತಿಗಳು ಅವರಿಗೆ ಸಿಕ್ಕಿವೆ. ಆಂಧ್ರ ಸರ್ಕಾರದ ‘ನಂದಿ ಪ್ರಶಸ್ತಿ’, ಫಿಲ್ಮ್​ಫೇರ್​, ಸೈಮಾ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದುಕೊಂಡಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿನ ನಟನೆಗೆ ‘ಕ್ರಿಟಿಕ್ಸ್​ ಚಾಯ್ಸ್​ ಅವಾರ್ಡ್​’ಗೆ ನಾಮಿನೇಟ್​ ಆಗಿದ್ದರು. ಈಗ ಅವರ ಮುಡಿಗೆ ಗೌರವ ಡಾಕ್ಟರೇಟ್​ ಮೂಲಕ ಹೊಸ ಗರಿ ಸೇರ್ಪಡೆ ಆಗುತ್ತಿದೆ.

ಇದನ್ನೂ ಓದಿ: ‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ

ಸದ್ಯ ರಾಮ್​ ಚರಣ್​ ಅವರು ‘ಗೇಮ್​ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಶಂಕರ್​ ನಿರ್ದೇಶನ ಮಾಡುತ್ತಿದ್ದಾರೆ. ಚುನಾವಣೆ ಕುರಿತ ಕಥಾವಸ್ತುವನ್ನು ಈ ಸಿನಿಮಾ ಹೊಂದಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ರಾಮ್​ ಚರಣ್​ ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಮೈಸೂರಿನಲ್ಲಿಯೂ ‘ಗೇಮ್​ ಚೇಂಜರ್​’ ಶೂಟಿಂಗ್​ ಆಗಿದೆ ಎಂಬುದು ವಿಶೇಷ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ರಾಮ್ ಚರಣ್​ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಮುಂದಿನ ಸಿನಿಮಾಗಳ ಬಗ್ಗೆ ಎಗ್ಸೈಟಿಂಗ್​ ಸುದ್ದಿ ಈಗಾಗಲೇ ಸಿಕ್ಕಿದೆ. ‘ಪುಷ್ಪ 2’ ಸಿನಿಮಾದ ನಿರ್ದೇಶಕ ಸುಕುಮಾರ್​ ಅವರು ರಾಮ್​ ಚರಣ್​ ಜೊತೆ ಹೊಸ ಸಿನಿಮಾ ಮಾಡುವುದು ಖಚಿತವಾಗಿದೆ. ಈ ಮೊದಲು ರಾಮ್​ ಚರಣ್​ ಹಾಗೂ ಸುಕುಮಾರ್​ ಕಾಂಬಿನೇಷನ್​ನಲ್ಲಿ ‘ರಂಗಸ್ಥಲಂ’ ಸಿನಿಮಾ ಮೂಡಿಬಂದಿತ್ತು. ಈಗ ಅವರು ಮತ್ತೊಮ್ಮೆ ಒಂದಾಗುತ್ತಿರುವುದರಿಂದ ನಿರೀಕ್ಷೆ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ