AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಸಂಭಾವನೆಗೆ ದೊಡ್ಡ ಹೊಡೆತ ಕೊಟ್ಟ ‘ಗೇಮ್ ಚೇಂಜರ್’ ಕಲೆಕ್ಷನ್

ರಾಮ್ ಚರಣ್ ಅವರ ‘ಗೇಮ್ ಚೇಂಜರ್’ ಚಿತ್ರದ ನಿರೀಕ್ಷೆಗಿಂತ ಕಡಿಮೆ ಗಳಿಕೆಯಿಂದಾಗಿ ಅವರ ಮುಂದಿನ ಚಿತ್ರ ‘RC16’ಕ್ಕೆ ಸಂಭಾವನೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಪ್ರತಿ ಚಿತ್ರಕ್ಕೆ 80-100 ಕೋಟಿ ಪಡೆಯುತ್ತಿದ್ದ ಅವರ ಸಂಭವಾನೆ ತೀವ್ರ ಇಳಿಕೆ ಕಂಡಿದೆ. ಈ ಬೆಳವಣಿಗೆಯು ಅವರ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಅಭಿಮಾನಿಗಳಲ್ಲಿದೆ.

ರಾಮ್ ಚರಣ್ ಸಂಭಾವನೆಗೆ ದೊಡ್ಡ ಹೊಡೆತ ಕೊಟ್ಟ ‘ಗೇಮ್ ಚೇಂಜರ್’ ಕಲೆಕ್ಷನ್
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Jan 22, 2025 | 12:45 PM

Share

ರಾಮ್ ಚರಣ್ ಅವರ ಕೊನೆಯ ಸಿನಿಮಾದ ಬಜೆಟ್ 450 ಕೋಟಿ ರೂಪಾಯಿ. ಆದರೆ, ಚಿತ್ರದ ಗಳಿಕೆ ಮಾತ್ರ 120 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಜನವರಿ 10ರಂದು ತೆರೆಗೆ ಬಂದ ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಒಟಿಟಿಗೆ ಬರಲಿದೆ ಎಂದು ಹೇಳಲಾಗಿದೆ. ಈ ಚಿತ್ರದ ಕಲೆಕ್ಷನ್​ ಹಾಗೂ ಹೀನಾಯ ಸೋಲು ರಾಮ್ ಚರಣ್ ಅವರ ಸಂಭಾವನೆ ಮೇಲೆ ನೇರ ಪರಿಣಾಮ ಬೀರಿದೆ. ಮುಂದೇನು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳನ್ನು ಕಾಡುತ್ತಿದೆ.

ದಿಲ್ ರಾಜು ಅವರು ‘ಗೇಮ್ ಚೇಂಜರ್’ ಚಿತ್ರವನ್ನು ನಿರ್ಮಾಣ ಮಾಡಿದ್ದರು. ರಾಮ್ ಚರಣ್ ಅವರು ಪ್ರತಿ ಚಿತ್ರಕ್ಕೆ 80-100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರು. ಆದರೆ, ಈ ಚಿತ್ರಕ್ಕಾಗಿ ಅವರು ಪಡೆದಿದ್ದು ಕೇವಲ 60 ಕೋಟಿ ರೂಪಾಯಿ ಎನ್ನಲಾಗಿತ್ತು. ಈಗ ಅವರ ಮುಂದಿನ ಚಿತ್ರಕ್ಕೆ ಸಂಭಾವನೆಯಲ್ಲಿ ಮತ್ತಷ್ಟು ಕಡಿತ ಉಂಟಾಗಿದೆ.

ರಾಮ್ ಚರಣ್ ಅವರ ಮುಂದಿನ ಚಿತ್ರಕ್ಕೆ ತಾತ್ಕಾಲಿಕವಾಗಿ ‘RC16’ ಎಂದು ಟೈಟಲ್ ಇಡಲಾಗಿದೆ. ಇದನ್ನು ಬುಚಿ ಬಾಬು ಸನಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಸಿನಿಮಾನ ದಿಲ್ ರಾಜು ಅವರೇ ನಿರ್ಮಾಣ ಮಾಡುತ್ತಿದ್ದಾರೆ. ‘ಗೇಮ್ ಚೇಂಜರ್’ ಚಿತ್ರದಿಂದ ದಿಲ್ ರಾಜು ಅವರಿಗೆ ಆದ ನಷ್ಟವನ್ನು ರಾಮ್ ಚರಣ್ ಹತ್ತಿರದಿಂದ ಗಮನಿಸಿದ್ದು, ಈ ಕಾರಣಕ್ಕೆ ಈ ಚಿತ್ರಕ್ಕೆ ಕಡಿಮೆ ಸಂಭಾವನೆ ಪಡೆಯಲು ಒಪ್ಪಿದ್ದಾರೆ.

‘ಗೇಮ್ ಚೇಂಜರ್’ ಚಿತ್ರಕ್ಕೆ ರಾಮ್ ಚರಣ್ 60 ಕೋಟಿ ರೂಪಾಯಿ ಪಡೆದುಕೊಂಡಿದ್ದು ಎಂದರೆ, ಅವರ ಹೊಸ ಸಿನಿಮಾಗೆ ಸಂಭಾವನೆಯನ್ನು ಮತ್ತೆಷ್ಟು ಕಡಿಮೆ ಮಾಡಿಕೊಂಡಿರಬಹುದು ಎನ್ನುವ ಪ್ರಶ್ನೆ ಅನೇಕರಿಗೆ ಕಾಡಿದೆ. ಇದು ಹೀಗೆಯೇ ಮುಂದುವರಿದರೆ ಅವರ ವೃತ್ತಿ ಜೀವನಕ್ಕೆ ದೊಡ್ಡ ಹೊಡೆತ ಕೊಡಲಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮಗಳ ಮುಖ ತೋರಿಸುವುದು ಯಾವಾಗ? ಉತ್ತರ ಕೊಟ್ಟ ರಾಮ್ ಚರಣ್

ಉಳಿದ ಹೀರೋಗಳಿಗೆ ಹೋಲಿಕೆ ಮಾಡಿದರೆ ರಾಮ್ ಚರಣ್ ಅವರು ಸಿನಿಮಾ ಮಾಡೋದು ತುಂಬಾನೇ ನಿಧಾನ. ಅವರು ಅಗ್ರೆಸ್ಸಿವ್ ಆಗಿ ಚಿತ್ರ ಮಾಡೋದಿಲ್ಲ. ಇದರ ಜೊತೆಗೆ ಅವರು ಸಂಭಾವನೆ ಕಡಿಮೆ ಮಾಡಿಕೊಳ್ಳುತ್ತಾ ಹೋದರೆ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಸದ್ಯ ವಯನಾಡಲ್ಲಿ ಹೇಗಿದೆ ಸ್ಥಿತಿ?
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ