Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೇಮ್​ ಚೇಂಜರ್’ ಸಿನಿಮಾಕ್ಕೆ ಸಂಭಾವನೆ ತಗ್ಗಿಸಿಕೊಂಡ ರಾಮ್ ಚರಣ್

Ram Charan: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಕೆಲವೇ ದಿನಗಳಿಗೆ ಬಿಡುಗಡೆ ಆಗಲಿದೆ. ರಾಮ್ ಚರಣ್, ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ‘ಗೇಮ್ ಚೇಂಜರ್’ ಸಿನಿಮಾಕ್ಕೆ ಅವರ ಸಂಭಾವನೆ ಹೆಚ್ಚಿತ್ತು. ಆದರೆ ಅವರು ತಮ್ಮ ಸಂಭಾವನೆ ತಗ್ಗಿಸಿಕೊಂಡಿದ್ದಾರಂತೆ. ಇದಕ್ಕೆ ಕಾರಣವೂ ಇದೆ.

‘ಗೇಮ್​ ಚೇಂಜರ್’ ಸಿನಿಮಾಕ್ಕೆ ಸಂಭಾವನೆ ತಗ್ಗಿಸಿಕೊಂಡ ರಾಮ್ ಚರಣ್
ರಾಮ್ ಚರಣ್
Follow us
ಮಂಜುನಾಥ ಸಿ.
|

Updated on: Jan 03, 2025 | 4:56 PM

ರಾಮ್ ಚರಣ್, ದೇಶದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ಅದರಲ್ಲೂ ‘ಆರ್​ಆರ್​ಆರ್’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ರಾಮ್ ಚರಣ್ ಸಂಭಾವನೆ ದುಪ್ಪಟ್ಟಾಗಿದೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ನಟಿಸಿದ ‘ಆಚಾರ್ಯ’ ಸಿನಿಮಾಕ್ಕೆ ಅವರು ಸಂಭಾವನೆ ಪಡೆದಿರಲಿಲ್ಲ, ಏಕೆಂದರೆ ಅದು ಅವರೇ ನಿರ್ಮಿಸಿದ್ದ ಸಿನಿಮಾ. ಇನ್ನು ‘ಗೇಮ್ ಚೇಂಜರ್’ ಸಿನಿಮಾಕ್ಕೆ ರಾಮ್ ಚರಣ್ ಭಾರಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಈ ಮೊದಲೇ ಸುದ್ದಿಯಾಗಿತ್ತು. ಆದರೆ ಈಗ ಹೊರಬಿದ್ದಿರುವ ಸುದ್ದಿಯಂತೆ ಈ ಸಿನಿಮಾಕ್ಕೆ ಅವರು ತಮ್ಮ ಸಂಭಾವನೆ ತಗ್ಗಿಸಿಕೊಂಡಿದ್ದಾರೆ. ಆದರೆ ಅದಕ್ಕೆ ಕಾರಣವೂ ಇದೆ.

‘ಗೇಮ್ ಚೇಂಜರ್’ ಸಿನಿಮಾಕ್ಕಾಗಿ ರಾಮ್ ಚರಣ್ ಬರೋಬ್ಬರಿ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಈ ಮೊದಲು ಸುದ್ದಿಯಾಗಿತ್ತು. ಒಪ್ಪಂದವೂ ಸಹ 100 ಕೋಟಿ ಸಂಭಾವನೆಗೆ ಆಗಿತ್ತಂತೆ. ಆದರೆ ರಾಮ್ ಚರಣ್ ಈಗ ಕೇವಲ 65 ಕೋಟಿ ರೂಪಾಯಿ ಸಂಭಾವನೆಯನ್ನಷ್ಟೆ ಪಡೆದುಕೊಂಡಿರುವುದಾಗಿ ತೆಲುಗಿನ ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ ರಾಮ್ ಚರಣ್, ತಮ್ಮ ಸಂಭಾವನೆ ತಗ್ಗಿಸಿಕೊಂಡಿರುವುದಕ್ಕೆ ಕಾರಣವೂ ಇದೆ.

ಇದನ್ನೂ ಓದಿ:ಗೇಮ್ ಚೇಂಜರ್ ಟ್ರೇಲರ್; ರಾಮ್ ಚರಣ್ ಅಭಿಮಾನಿಗಳಿಗೆ ಸಿಕ್ತು ಕಥೆ ಸುಳಿವು

‘ಗೇಮ್ ಚೇಂಜರ್’ ಸಿನಿಮಾದ ಬಜೆಟ್ ಹೆಜ್ಜಾಗಿದ್ದು ಮಾತ್ರವೇ ಅಲ್ಲದೆ, ಸಿನಿಮಾ ಚಿತ್ರೀಕರಣ ತಡವಾದ ಕಾರಣಕ್ಕೆ ರಾಮ್ ಚರಣ್ ತಮ್ಮ ಸಂಭಾವನೆ ತಗ್ಗಿಸಿಕೊಂಡು ಕೇವಲ 65 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ತಡವಾಗಲೂ ರಾಮ್ ಚರಣ್ ಸಹ ಕಾರಣ ಆಗಿದ್ದ ಕಾರಣಕ್ಕೆ ಅವರು ತಮ್ಮ ಸಂಭಾವನೆ ತಗ್ಗಿಸಿಕೊಂಡಿದ್ದಾರಂತೆ. ರಾಮ್ ಚರಣ್ ಮಾತ್ರವೇ ಅಲ್ಲದೆ 50 ಕೋಟಿ ರೂಪಾಯಿ ಸಂಭಾವನೆ ಪಡೆಯಬೇಕಿದ್ದ ನಿರ್ದೇಶಕ ಶಂಕರ್ ಸಹ 35 ಕೋಟಿ ರೂಪಾಯಿ ಸಂಭಾವನೆಯನ್ನಷ್ಟೆ ಪಡೆದುಕೊಂಡಿದ್ದಾರೆ.

‘ಗೇಮ್ ಚೇಂಜರ್’ ಸಿನಿಮಾ ಜನವರಿ 10 ಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾದ ಮೇಲೆ ನಿರ್ಮಾಪಕ ದಿಲ್ ರಾಜು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಾಯಕಿ, ಸಿನಿಮಾದಲ್ಲಿ ಎಸ್​ಜೆ ಸೂರ್ಯ ವಿಲನ್, ಸುನಿಲ್ ಹಾಸ್ಯ ನಟನ ಪಾತ್ರ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಟ್ರೈಲರ್ ಗಮನ ಸೆಳೆದಿದೆ. ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಾಳೆ (ಜನವರಿ 04) ರಾಜಮಂಡ್ರಿಯಲ್ಲಿ ಬಲು ಅದ್ಧೂರಿಯಾಗಿ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್