AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೇಮ್​ ಚೇಂಜರ್’ ಸಿನಿಮಾಕ್ಕೆ ಸಂಭಾವನೆ ತಗ್ಗಿಸಿಕೊಂಡ ರಾಮ್ ಚರಣ್

Ram Charan: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಕೆಲವೇ ದಿನಗಳಿಗೆ ಬಿಡುಗಡೆ ಆಗಲಿದೆ. ರಾಮ್ ಚರಣ್, ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ‘ಗೇಮ್ ಚೇಂಜರ್’ ಸಿನಿಮಾಕ್ಕೆ ಅವರ ಸಂಭಾವನೆ ಹೆಚ್ಚಿತ್ತು. ಆದರೆ ಅವರು ತಮ್ಮ ಸಂಭಾವನೆ ತಗ್ಗಿಸಿಕೊಂಡಿದ್ದಾರಂತೆ. ಇದಕ್ಕೆ ಕಾರಣವೂ ಇದೆ.

‘ಗೇಮ್​ ಚೇಂಜರ್’ ಸಿನಿಮಾಕ್ಕೆ ಸಂಭಾವನೆ ತಗ್ಗಿಸಿಕೊಂಡ ರಾಮ್ ಚರಣ್
ರಾಮ್ ಚರಣ್
ಮಂಜುನಾಥ ಸಿ.
|

Updated on: Jan 03, 2025 | 4:56 PM

Share

ರಾಮ್ ಚರಣ್, ದೇಶದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ಅದರಲ್ಲೂ ‘ಆರ್​ಆರ್​ಆರ್’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ರಾಮ್ ಚರಣ್ ಸಂಭಾವನೆ ದುಪ್ಪಟ್ಟಾಗಿದೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ನಟಿಸಿದ ‘ಆಚಾರ್ಯ’ ಸಿನಿಮಾಕ್ಕೆ ಅವರು ಸಂಭಾವನೆ ಪಡೆದಿರಲಿಲ್ಲ, ಏಕೆಂದರೆ ಅದು ಅವರೇ ನಿರ್ಮಿಸಿದ್ದ ಸಿನಿಮಾ. ಇನ್ನು ‘ಗೇಮ್ ಚೇಂಜರ್’ ಸಿನಿಮಾಕ್ಕೆ ರಾಮ್ ಚರಣ್ ಭಾರಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಈ ಮೊದಲೇ ಸುದ್ದಿಯಾಗಿತ್ತು. ಆದರೆ ಈಗ ಹೊರಬಿದ್ದಿರುವ ಸುದ್ದಿಯಂತೆ ಈ ಸಿನಿಮಾಕ್ಕೆ ಅವರು ತಮ್ಮ ಸಂಭಾವನೆ ತಗ್ಗಿಸಿಕೊಂಡಿದ್ದಾರೆ. ಆದರೆ ಅದಕ್ಕೆ ಕಾರಣವೂ ಇದೆ.

‘ಗೇಮ್ ಚೇಂಜರ್’ ಸಿನಿಮಾಕ್ಕಾಗಿ ರಾಮ್ ಚರಣ್ ಬರೋಬ್ಬರಿ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಈ ಮೊದಲು ಸುದ್ದಿಯಾಗಿತ್ತು. ಒಪ್ಪಂದವೂ ಸಹ 100 ಕೋಟಿ ಸಂಭಾವನೆಗೆ ಆಗಿತ್ತಂತೆ. ಆದರೆ ರಾಮ್ ಚರಣ್ ಈಗ ಕೇವಲ 65 ಕೋಟಿ ರೂಪಾಯಿ ಸಂಭಾವನೆಯನ್ನಷ್ಟೆ ಪಡೆದುಕೊಂಡಿರುವುದಾಗಿ ತೆಲುಗಿನ ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ ರಾಮ್ ಚರಣ್, ತಮ್ಮ ಸಂಭಾವನೆ ತಗ್ಗಿಸಿಕೊಂಡಿರುವುದಕ್ಕೆ ಕಾರಣವೂ ಇದೆ.

ಇದನ್ನೂ ಓದಿ:ಗೇಮ್ ಚೇಂಜರ್ ಟ್ರೇಲರ್; ರಾಮ್ ಚರಣ್ ಅಭಿಮಾನಿಗಳಿಗೆ ಸಿಕ್ತು ಕಥೆ ಸುಳಿವು

‘ಗೇಮ್ ಚೇಂಜರ್’ ಸಿನಿಮಾದ ಬಜೆಟ್ ಹೆಜ್ಜಾಗಿದ್ದು ಮಾತ್ರವೇ ಅಲ್ಲದೆ, ಸಿನಿಮಾ ಚಿತ್ರೀಕರಣ ತಡವಾದ ಕಾರಣಕ್ಕೆ ರಾಮ್ ಚರಣ್ ತಮ್ಮ ಸಂಭಾವನೆ ತಗ್ಗಿಸಿಕೊಂಡು ಕೇವಲ 65 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ತಡವಾಗಲೂ ರಾಮ್ ಚರಣ್ ಸಹ ಕಾರಣ ಆಗಿದ್ದ ಕಾರಣಕ್ಕೆ ಅವರು ತಮ್ಮ ಸಂಭಾವನೆ ತಗ್ಗಿಸಿಕೊಂಡಿದ್ದಾರಂತೆ. ರಾಮ್ ಚರಣ್ ಮಾತ್ರವೇ ಅಲ್ಲದೆ 50 ಕೋಟಿ ರೂಪಾಯಿ ಸಂಭಾವನೆ ಪಡೆಯಬೇಕಿದ್ದ ನಿರ್ದೇಶಕ ಶಂಕರ್ ಸಹ 35 ಕೋಟಿ ರೂಪಾಯಿ ಸಂಭಾವನೆಯನ್ನಷ್ಟೆ ಪಡೆದುಕೊಂಡಿದ್ದಾರೆ.

‘ಗೇಮ್ ಚೇಂಜರ್’ ಸಿನಿಮಾ ಜನವರಿ 10 ಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾದ ಮೇಲೆ ನಿರ್ಮಾಪಕ ದಿಲ್ ರಾಜು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಾಯಕಿ, ಸಿನಿಮಾದಲ್ಲಿ ಎಸ್​ಜೆ ಸೂರ್ಯ ವಿಲನ್, ಸುನಿಲ್ ಹಾಸ್ಯ ನಟನ ಪಾತ್ರ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಟ್ರೈಲರ್ ಗಮನ ಸೆಳೆದಿದೆ. ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಾಳೆ (ಜನವರಿ 04) ರಾಜಮಂಡ್ರಿಯಲ್ಲಿ ಬಲು ಅದ್ಧೂರಿಯಾಗಿ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್