AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಫ್ಯಾನ್ಸ್ ವರ್ತನೆಗೆ ನೆಟ್ಟಿಗರ ಖಂಡನೆ; ವಿದೇಶದಲ್ಲಿ ಹೋಯ್ತು ಮಾನ

ರಾಮ್ ಚರಣ್ ಅವರು ಲಂಡನ್​ನ ಮೇಡಂ ಟುಸಾಡ್ಸ್ ಮ್ಯೂಸಿಯಂನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು ಭಾರಿ ಸದ್ದು ಗದ್ದಲ ಮಾಡಿದ್ದಾರೆ. ಇದರಿಂದ ಅಲ್ಲಿನ ಸಿಬ್ಬಂದಿಗೆ ಕಿರಿಕಿರಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ವಿಡಿಯೋ ವೈರಲ್ ಆಗಿದೆ.

ರಾಮ್ ಚರಣ್ ಫ್ಯಾನ್ಸ್ ವರ್ತನೆಗೆ ನೆಟ್ಟಿಗರ ಖಂಡನೆ; ವಿದೇಶದಲ್ಲಿ ಹೋಯ್ತು ಮಾನ
Ram Charan In London
ಮದನ್​ ಕುಮಾರ್​
|

Updated on: May 11, 2025 | 8:12 AM

Share

ನಟ ರಾಮ್ ಚರಣ್ (Ram Charan) ಅವರಿಗೆ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಅವರು ಕೇವಲ ಟಾಲಿವುಡ್​ಗೆ ಸೀಮಿತ ಆಗಿಲ್ಲ. ‘ಆರ್​ಆರ್​ಆರ್’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಬಳಿಕ ಹಲವು ರಾಷ್ಟ್ರಗಳಲ್ಲಿ ರಾಮ್ ಚರಣ್ ಅವರಿಗೆ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್ನು, ವಿಶ್ವ ಪ್ರಸಿದ್ಧ ‘ಮೇಡಂ ಟುಸಾಡ್ಸ್’ ಮ್ಯೂಸಿಯಂನಲ್ಲಿ ರಾಮ್ ಚರಣ್ ಅವರ ಮೇಣದ ಪ್ರತಿಮೆ (Ram Charan Wax Statue) ಸಿದ್ಧವಾಗಿದೆ. ಇದರ ಸಲುವಾಗಿ ಅವರು ಲಂಡನ್​ಗೆ ತೆರಳಿದ್ದರು. ಆ ವೇಳೆ ಅಭಿಮಾನಿಗಳು ನಡೆದುಕೊಂಡ ರೀತಿಗೆ ನೆಟ್ಟಿಗರು ಗರಂ ಆಗಿದ್ದಾರೆ. ವಿದೇಶದಲ್ಲಿ ಭಾರತೀಯರ ಮಾನ ಹೋಗುವಂತೆ ರಾಮ್ ಚರಣ್ ಫ್ಯಾನ್ಸ್ (Ram Charan Fans) ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ರಾಮ್ ಚರಣ್ ಅವರು ಮೇಣದ ಪ್ರತಿಮೆಯನ್ನು ಸಿಂಗಾಪುರದ ‘ಮೇಡಂ ಟುಸಾಡ್ಸ್’ ಮ್ಯೂಸಿಯಂನಲ್ಲಿ ಇಡಲಾಗುವುದು ಎಂದು ಈ ಮೊದಲು ಘೋಷಿಸಲಾಗಿತ್ತು. ಆದರೆ ಈಗ ಅದು ಲಂಡನ್​ನಲ್ಲಿಯೇ ಅನಾವರಣಗೊಳ್ಳುವ ಸಾಧ್ಯತೆ ಇದೆ. ಹಾಗಾಗಿ ರಾಮ್ ಚರಣ್ ಅವರು ಇತ್ತೀಚೆಗೆ ಲಂಡನ್​ಗೆ ಭೇಟಿ ನೀಡಿದರು. ಈ ವೇಳೆ ಅವರನ್ನು ನೋಡಲು ಮ್ಯೂಸಿಯಂ ಎದುರು ಅಭಿಮಾನಿಗಳು ಮುಗಿಬಿದ್ದರು.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಇಷ್ಟಪಡುವುದು ತಪ್ಪಲ್ಲ. ಆದರೆ ಸಾರ್ವಜನಿಕವಾಗಿ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಜ್ಞಾನ ಇರಬೇಕಾಗುತ್ತದೆ. ಎಲ್ಲರಿಗೂ ತೊಂದರೆ ಆಗುವ ರೀತಿಯಲ್ಲಿ ಫ್ಯಾನ್ಸ್ ಕೇಕೆ ಹಾಕುತ್ತಾ, ಡೋಲು ಬಾರಿಸುತ್ತಿದ್ದರು. ಇದರಿಂದಾಗಿ ಜನರನ್ನು ನಿಯಂತ್ರಿಸುವುದು ಅಲ್ಲಿನ ಸಿಬ್ಬಂದಿಗೆ ಕಷ್ಟ ಆಯಿತು. ಈ ಕಾರಣದಿಂದ ಫ್ಯಾನ್ಸ್ ಮೀಟ್ ಕ್ಯಾನ್ಸಲ್ ಮಾಡಲಾಯಿತು ಎಂದು ನೆಟ್ಟಿಗರೊಬ್ಬರು ಪೋಸ್ಟ್ ಮಾಡಿದ್ದಾರೆ.

‘ರಾಮ್ ಚರಣ್ ಅವರ ಅಭಿಮಾನಿಗಳು ಈ ರೀತಿ ಮಾಡಿದ್ದರಿಂದ ಲಂಡನ್​ನಲ್ಲಿ ಬ್ರಿಟಿಷ್ ಮಂದಿಯ ಎದುರು ಭಾರತೀಯರ ಮಾನ ಹರಾಜು ಆಯಿತು. ಫ್ಯಾನ್ಸ್​​ಗೆ ಸ್ವಲ್ಪವೂ ನಾಗರಿಕ ಪ್ರಜ್ಞೆಯೇ ಇಲ್ಲ. ವಿದೇಶದಲ್ಲಿ ನೀವು ಈ ರೀತಿ ನಡೆದುಕೊಂಡರೆ ಇಡೀ ಭಾರತೀಯದ ಮರ್ಯಾದೆ ಹೋಗುತ್ತದೆ’ ಎಂದು ‘ಎಕ್ಸ್’ ಖಾತೆಯಲ್ಲಿ ನೆಟ್ಟಿಗರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಖತ್ ರಗಡ್ ಆಗಿದೆ ಪೆದ್ದಿ ಗ್ಲಿಂಪ್ಸ್; ಬ್ಯಾಟ್ ಹಿಡಿದು ಅಬ್ಬರಿಸಿದ ರಾಮ್ ಚರಣ್

‘ಮೇಡಂ ಟುಸಾಡ್ಸ್​’ ಮ್ಯೂಸಿಯಂನಲ್ಲಿ ರಾಮ್ ಚರಣ್ ಅವರ ಮೇಣದ ಪ್ರತಿಮೆ ಆನಾವರಣ ಆಗುತ್ತಿರುವುದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ರಾಮ್ ಚರಣ್ ಜೊತೆ ಅವರ ಮುದ್ದಿನ ಶ್ವಾನ ‘ರೈಮ್’ ಪ್ರತಿಮೆ ಕೂಡ ಇರಲಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ