AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​

Ram Charan: ಲಾಕ್​ಡೌನ್​ನಿಂದಾಗಿ ಆರ್​ಆರ್​ಆರ್​ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲಾಗಿತ್ತು. ಆದರೆ ಈಗ ಶೂಟಿಂಗ್​ ಸೆಟ್​ಗೆ ಹೋಗಿರುವ ರಾಮ್​ ಚರಣ್​ ಅವರು ಬಹಳ ಉತ್ಸಾಹದಿಂದ ತಮ್ಮ​ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ.

RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​
ಆರ್​ಆರ್​ಆರ್, ರಾಮ್​ ಚರಣ್​
ಮದನ್​ ಕುಮಾರ್​
| Edited By: |

Updated on: Jun 21, 2021 | 4:14 PM

Share

ನಿರ್ದೇಶಕ ರಾಜಮೌಳಿ ಹೆಸರು ಕೇಳಿದರೆ ಸಾಕು, ಸಿನಿಪ್ರಿಯರ ಕಿವಿ ಚುರುಕಾಗುತ್ತದೆ. ‘ಬಾಹುಬಲಿ’ ರೀತಿಯ ದೈತ್ಯ ಸಿನಿಮಾ ಮಾಡಿದ ಬಳಿಕವಂತೂ ಅವರ ಮೇಲಿನ ಅಭಿಮಾನ ದುಪ್ಪಟ್ಟಾಯಿತು. ಈಗ ಅವರು ಆರ್​ಆರ್​ಆರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಲಾಕ್​ಡೌನ್​ ಕಾರಣದಿಂದ ಚಿತ್ರದ ಕೆಲಸಗಳು ತಡವಾಗುತ್ತಿತ್ತು. ಈ ಸಿನಿಮಾದ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದರು. ಆರ್​ಆರ್​ಆರ್​ ಚಿತ್ರದಲ್ಲಿ ನಟಿಸುತ್ತಿರುವ ರಾಮ್​ ಚರಣ್​ ಅವರು ಹೊಸ ಸುದ್ದಿ ನೀಡಿದ್ದಾರೆ.

ಹೊಸ ನ್ಯೂಸ್​ ಏನೆಂದರೆ, ಇಷ್ಟು ದಿನ ನಿಂತುಹೋಗಿದ್ದ ಶೂಟಿಂಗ್​ಗೆ ಈಗ ಮತ್ತೆ ಚಾಲನೆ ನೀಡಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗುತ್ತಿರುವುದರ ಹಿನ್ನೆಲೆಯಲ್ಲಿ ತೆಲಂಗಾಣ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹಾಗಾಗಿ ‘ಆರ್​ಆರ್​ಆರ್​’ ಸಿನಿಮಾ ಶೂಟಿಂಗ್​ ಕೂಡ ಪುನಾರಂಭ ಆಗಿದೆ.

ಬಹುದಿನಗಳ ಬಳಿಕ ಶೂಟಿಂಗ್​ ಸೆಟ್​ಗೆ ಹೋಗಿರುವ ರಾಮ್​ ಚರಣ್​ ಅವರು ಬಹಳ ಉತ್ಸಾಹದಿಂದ ತಮ್ಮ​ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಆ ಪಾತ್ರದ ಗೆಟಪ್​ನಲ್ಲಿ ಅವರ ತಮ್ಮ ಮೇಕಪ್​ ಮ್ಯಾನ್​ ಹಾಗೂ ಕೇಶವಿನ್ಯಾಸಕ ಆಲಿಮ್​ ಹಾಕಿಮ್​ ಜೊತೆ ಸೆಲ್ಫಿಗೆ ಪೋಸ್​ ನೀಡಿದ್ದಾರೆ. ‘ಲಾಕ್​ಡೌನ್​ 2.0 ಮುಗಿದ ಬಳಿಕ ಆರ್​ಆರ್​ಆರ್​ ಶುರುವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದೇ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​ ಅವರು ಕೊಮರಾಮ್​ ಭೀಮ್​ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಬಾಲಿವುಡ್​ ನಟಿ ಆಲಿಯಾ ಭಟ್​ ಅವರು ಇದೇ ಮೊದಲ ಬಾರಿಗೆ ‘ಆರ್​ಆರ್​ಆರ್​’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿರುವುದು ವಿಶೇಷ. ಅಲ್ಲದೆ, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಆರ್​ಆರ್​ಆರ್​ ಸಿನಿಮಾ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ಸಿನಿಮಾ ತೆರೆಕಾಣಿಸಬೇಕು ಎಂದು ನಿರ್ಮಾಪಕರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆದರೆ ಲಾಕ್​ಡೌನ್ ಕಾರಣದಿಂದ ಚಿತ್ರದ ಕೆಲಸಗಳು ಲೇಟ್​ ಆಗಿರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

Follow Us
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ